Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಮಹಿಳೆಯ ಕಿಡ್ನಿಯಲ್ಲಿತ್ತು 300 ಕಲ್ಲು; ಶಸ್ತ್ರಚಿಕಿತ್ಸೆಯ ಮೂಲಕ ಹೊರ ತೆಗೆದ ವೈದ್ಯರು

CT ಸ್ಕ್ಯಾನ್ ಪ್ರಕಾರ, ಕಲ್ಲುಗಳು 5 ಎಂಎಂ ಮತ್ತು 2 ಸೆಂ.ಮೀ ಗಾತ್ರಕ್ಕೆ ಬೆಳೆದಿರುವುದು ತಿಳಿದುಬಂದಿದೆ. ಇದಲ್ಲದೇ ರಕ್ತಪರೀಕ್ಷೆಯಲ್ಲಿ ಬಿಳಿರಕ್ತಕಣಗಳ ಸಂಖ್ಯೆಯೂ ಅಧಿಕವಾಗಿರುವುದು ಕಂಡುಬಂದಿದೆ. ಇದಕ್ಕೆ ಕಾರಣವನ್ನು ತಿಳಿಯಲು ವೈದ್ಯರು ಎಲ್ಲಾ ಪರೀಕ್ಷೆಗಳನ್ನು ಮಾಡಿದ್ದು, ಕೂಲಂಕಷವಾಗಿ ವಿಚಾರಣೆ ನಡೆಸಿದಾಗ ಆಕೆ ಒಂದು ಹನಿ ನೀರನ್ನೂ ಕುಡಿದಿಲ್ಲ ಎಂದು ಗೊತ್ತಾಗಿದೆ.

Viral: ಮಹಿಳೆಯ ಕಿಡ್ನಿಯಲ್ಲಿತ್ತು 300 ಕಲ್ಲು; ಶಸ್ತ್ರಚಿಕಿತ್ಸೆಯ ಮೂಲಕ ಹೊರ ತೆಗೆದ ವೈದ್ಯರು
Follow us
ಅಕ್ಷತಾ ವರ್ಕಾಡಿ
|

Updated on: May 19, 2024 | 7:23 PM

ತೈವಾನ್: ವೈದ್ಯರು ಮಹಿಳೆಯೊಬ್ಬರ ಮೂತ್ರಪಿಂಡದಿಂದ 300 ಕ್ಕೂ ಹೆಚ್ಚು ಕಲ್ಲುಗಳನ್ನು ತೆಗೆದುಹಾಕಿದ್ದಾರೆ. ದೇಹದಲ್ಲಿ ನೀರಿನಾಂಶ ಕಡಿಮೆಯಾಗದಿರಲು ನೀರಿನ ಬದಲು ಪ್ರತೀ ದಿನ ತಂಪು ಪಾನೀಯ ಮತ್ತು ಜ್ಯೂಸ್‌ಗಳನ್ನು ಮಾತ್ರ ಸೇವಿಸುತ್ತಿದ್ದ ಮಹಿಳೆ. ಈ ಕೃತಕ ಸಿಹಿಕಾರಕಗಳನ್ನು ಬಳಸಿ ತಯಾರಿಸಿದ ಪಾನೀಯದ ಅತಿಯಾದ ಸೇವನೆಯಿಂದಲೇ ಮಹಿಳೆ ಅಸ್ವಸ್ಥತೆಗೆ ಒಳಗಾಗಿದ್ದಾಳೆ. ಆಕೆಯ ಸಮಸ್ಯೆಯನ್ನು ಪತ್ತೆ ಹಚ್ಚಲು ವೈದ್ಯರು ಅಲ್ಟ್ರಾಸೌಂಡ್ ಸ್ಕ್ಯಾನ್ ನಡೆಸಿದಾಗ ಆಕೆಯ ಬಲ ಕಿಡ್ನಿ ದ್ರವದಿಂದ ಊದಿಕೊಂಡಿದ್ದು ಅದರಲ್ಲಿ ನೂರಾರು ಕಲ್ಲುಗಳು ಇರುವುದು ಪತ್ತೆಯಾಗಿವೆ.

CT ಸ್ಕ್ಯಾನ್ ಪ್ರಕಾರ, ಕಲ್ಲುಗಳು 5 ಎಂಎಂ ಮತ್ತು 2 ಸೆಂ.ಮೀ ಗಾತ್ರಕ್ಕೆ ಬೆಳೆದಿರುವುದು ತಿಳಿದುಬಂದಿದೆ. ಇದಲ್ಲದೇ ರಕ್ತಪರೀಕ್ಷೆಯಲ್ಲಿ ಬಿಳಿರಕ್ತಕಣಗಳ ಸಂಖ್ಯೆಯೂ ಅಧಿಕವಾಗಿರುವುದು ಕಂಡುಬಂದಿದೆ. ಇದಕ್ಕೆ ಕಾರಣವನ್ನು ತಿಳಿಯಲು ವೈದ್ಯರು ಎಲ್ಲಾ ಪರೀಕ್ಷೆಗಳನ್ನು ಮಾಡಿದ್ದು, ಕೂಲಂಕಷವಾಗಿ ವಿಚಾರಣೆ ನಡೆಸಿದಾಗ ಆಕೆ ಒಂದು ಹನಿ ನೀರನ್ನೂ ಕುಡಿದಿಲ್ಲ ಎಂದು ತಿಳಿದುಬಂದಿದೆ. ನೀರಿನ ಬದಲು ಬಬಲ್ ಟೀ, ಫ್ರೂಟ್ ಜ್ಯೂಸ್ ಮತ್ತು ಆಲ್ಕೋಹಾಲ್ ಪಾನೀಯಗಳನ್ನು ಸೇವಿಸಿ ತನ್ನನ್ನು ತಾನು ಹೈಡ್ರೇಟ್ ಮಾಡಿಕೊಳ್ಳುತ್ತೇನೆ ಎಂದು ವೈದ್ಯರಿಗೆ ತಿಳಿಸಿದ್ದಾಳೆ. ಇದರಿಂದ ಆಕೆಯ ಕಿಡ್ನಿಯಲ್ಲಿ ಇಷ್ಟೊಂದು ಕಲ್ಲುಗಳು ಇರಲು ಕಾರಣವಾಯಿತು ಎಂದು ವೈದ್ಯರು ತಿಳಿಸಿದ್ದಾರೆ . 2 ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಿ ಆಕೆಯ ಮೂತ್ರಪಿಂಡದಿಂದ ಸುಮಾರು 300 ಕಲ್ಲುಗಳನ್ನು ಹೊರತೆಗೆಯುವಲ್ಲಿ ವೈದ್ಯರು ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: ಕೇವಲ 5ವರ್ಷ ದುಡಿದು, ಜೀವನಪೂರ್ತಿ ಆರಾಮಾಗಿರಿ, ವಿದ್ಯಾರ್ಹತೆ ಅಗತ್ಯವಿಲ್ಲ; ಜಾಹೀರಾತು ವೈರಲ್​​

ಮೂತ್ರಪಿಂಡದ ಕಲ್ಲುಗಳ ಕಾರಣಗಳು:

ಕಡಿಮೆ ನೀರಿನ ಸೇವನೆ, ತೂಕ ನಷ್ಟದ ಶಸ್ತ್ರಚಿಕಿತ್ಸೆ ಅಥವಾ ಉಪ್ಪು ಅಥವಾ ಸಕ್ಕರೆ ಹೆಚ್ಚಿರುವ ಆಹಾರ ಸೇವನೆಯಿಂದ ಕಿಡ್ನಿ ಸ್ಟೋನ್ ಸಮಸ್ಯೆ ಉಂಟಾಗಬಹುದು. ಅಲ್ಲದೇ ವ್ಯಾಯಾಮ ಮಾಡದವರ ದೇಹದಲ್ಲಿ ಕಿಡ್ನಿ ಸ್ಟೋನ್ ಸಮಸ್ಯೆ ಉಂಟಾಗುವ ಸಾಧ್ಯತೆ ಇದೆ ಎನ್ನುತ್ತಾರೆ ವೈದ್ಯರು. ಮೂತ್ರಪಿಂಡದ ಕಲ್ಲುಗಳನ್ನು ಕಡಿಮೆ ಮಾಡಲು ಹೆಚ್ಚು ನೀರು ಕುಡಿಯುವುದು ಅವಶ್ಯಕ. ದೇಹದಲ್ಲಿ ಸಾಕಷ್ಟು ನೀರು ಇಲ್ಲದಿದ್ದರೆ, ಮೂತ್ರಪಿಂಡಗಳಲ್ಲಿ ಕಲ್ಲುಗಳು ಸುಲಭವಾಗಿ ಶೇಖರಗೊಳ್ಳುತ್ತವೆ. ದೇಹದಲ್ಲಿ ನೀರಿನಂಶ ಕಡಿಮೆಯಾಗುವುದರಿಂದ ಕಲ್ಲುಗಳ ರಚನೆಯ ಅಪಾಯ ಹೆಚ್ಚಾಗುತ್ತದೆ. ಸಾಮಾನ್ಯವಾಗಿ, ಮಹಿಳೆಯರಿಗಿಂತ ಪುರುಷರು ಮೂತ್ರಪಿಂಡದ ಕಲ್ಲುಗಳನ್ನು ಅಭಿವೃದ್ಧಿಪಡಿಸುವ ಸಾಧ್ಯತೆ ಮೂರು ಪಟ್ಟು ಹೆಚ್ಚು ಎಂದು ವೈದ್ಯರು ಎಚ್ಚರಿಸುತ್ತಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ: 

ಬೆಂಗಳೂರು ಹೈವೇಯಲ್ಲಿ 3 ಬಾರಿ ಪಲ್ಟಿಯಾದ ನೀರಿನ ಟ್ಯಾಂಕರ್; ವಿಡಿಯೋ ವೈರಲ್
ಬೆಂಗಳೂರು ಹೈವೇಯಲ್ಲಿ 3 ಬಾರಿ ಪಲ್ಟಿಯಾದ ನೀರಿನ ಟ್ಯಾಂಕರ್; ವಿಡಿಯೋ ವೈರಲ್
ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ