AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ತೈವಾನ್​ನಲ್ಲಿ ಭೂಕಂಪ; ಆಟಿಕೆಯಂತೆ ಅಲ್ಲಾಡಿದ ರೈಲು

Earthquake : ತೈವಾನ್​ನ ರೈಲ್ವೇಸ್ಟೇಷ್​ನಲ್ಲಿ ನಿಂತಿದ್ದ ರೈಲು ಆಟಿಕೆಯಂತೆ ಅಲ್ಲಾಡಿದ ವಿಡಿಯೋ ವೈರಲ್ ಆಗಿದೆ. ಭೂಕಂಪದ ಹಿನ್ನೆಲೆಯಲ್ಲಿ ಸುನಾಮಿಯೂ ಏಳುವ ಸಾಧ್ಯತೆ ಇದೆ.

Viral Video : ತೈವಾನ್​ನಲ್ಲಿ ಭೂಕಂಪ; ಆಟಿಕೆಯಂತೆ ಅಲ್ಲಾಡಿದ ರೈಲು
ತೈವಾನ್​ನಲ್ಲಿ ಭೂಕಂಪಕ್ಕೊಳಗಾದಾಗ ಅಲ್ಲಾಡಿದ ರೈಲು
TV9 Web
| Updated By: ಶ್ರೀದೇವಿ ಕಳಸದ|

Updated on:Sep 19, 2022 | 11:01 AM

Share

Viral Video : ತೈವಾನ್​ನಲ್ಲಿ ನಿನ್ನೆ ತೀವ್ರ ಭೂಕಂಪ ಸಂಭವಿಸಿದೆ. ಆಗ್ನೇಯ ಕರಾವಳಿಯಲ್ಲಿ ಸಂಭವಿಸಿದ ಈ ಭೂಕಂಪ 6.9 ತೀವ್ರತೆಯಿಂದ ಕೂಡಿತ್ತು ಎಂದು ಅಮೆರಿಕದ ಭೂವೈಜ್ಞಾನಿಕ ಸಮೀಕ್ಷೆಯಿಂದ ತಿಳಿದು ಬಂದಿದೆ. ಈ ಭೂಕಂಪದ ಹಿನ್ನೆಲೆಯಲ್ಲಿ ಜಪಾನ್​ ಸುನಾಮಿಯ ಎಚ್ಚರಿಕೆಯನ್ನೂ ನೀಡಿದೆ. ಎನ್‌ಡಿಟಿವಿ ಪತ್ರಕರ್ತ ಉಮಾಶಂಕರ್ ಸಿಂಗ್ ಹಂಚಿಕೊಂಡಿರುವ ವಿಡಿಯೋದಲ್ಲಿ, ರೈಲುನಿಲ್ದಾಣದಲ್ಲಿ ನಿಂತಿರುವ ರೈಲು ಆಟಿಕೆ ಸಾಮಾನಿನಂತೆ ಅಲುಗಾಡುತ್ತಿರುವುದನ್ನು ನೋಡಬಹುದಾಗಿದೆ.

ರಾಯಿಟರ್ಸ್ ವರದಿಯ ಪ್ರಕಾರ, ಭೂಕಂಪವು ತೈತುಂಗ್​ನ ಉತ್ತರ ಭಾಗದಲ್ಲಿ ಮಧ್ಯಾಹ್ನ 2.44ಕ್ಕೆ ಸಂಭವಿಸಿದೆ. 10 ಕಿ.ಮೀ ಆಳದಿಂದ ಉಂಟಾದ ಕಂಪನವು ಸುಮಾರು 50 ಕಿ.ಮೀ. ಪ್ರದೇಶವನ್ನು ಆವರಿಸಿಕೊಂಡಿತ್ತು. ಯುಲಿ ಪ್ರದೇಶದಲ್ಲಿ ಶನಿವಾರ ಭೂಕಂಪನವು ಸಂಭವಿಸಿದ್ದು ನಂತರ ಅಲ್ಲಲ್ಲಿ ಭೂಕಂಪಗಳು  ಸಂಭವಿಸಲಾರಂಭಿಸಿದವು. ಯುಲಿಯಲ್ಲಿ ಮೊದಲ ಕಂಪನವಾದಾಗ ತೀವ್ರತೆ 6.6 ಇತ್ತು. ಆದರೆ ಭಾನುವಾರದ ಹೊತ್ತಿಗೆ ಈ ಕಂಪನ ಪ್ರಬಲವಾಗುತ್ತ ಹೋಯಿತು ಎಂದು ವರದಿಗಳು ತಿಳಿಸಿವೆ.

ಫ್ಯೂಜಿಯಾನ್, ಗುವಾಂಗ್‌ಡಾಂಗ್, ಜಿಯಾಂಗ್‌ಸು ಮತ್ತು ಶಾಂಘೈ ಸೇರಿದಂತೆ ಕರಾವಳಿ ಪ್ರದೇಶಗಳಲ್ಲಿ ಕಂಪನ ಸ್ಪಷ್ಟವಾಗಿ ಕಂಡುಬಂದಿದೆ. ಈ ಎಲ್ಲ ಪರಿಣಾಮವಾಗಿ ಸುನಾಮಿ ಸಂಭವಿಸುವ ಅಪಾಯವಿದ್ದು, ಇಂದು ಸಂಜೆ ಸುಮಾರು 4 ಗಂಟೆಗೆ ಒಂದು ಮೀಟರ್‌ನಷ್ಟು ಎತ್ತರದ ಅಲೆಗಳುಂಟಾಗುವ ನಿರೀಕ್ಷೆ ಇದೆ. ಈ ಪರಿಣಾಮವಾಗಿ ಜಪಾನಿನ ಹವಾಮಾನ ಸಂಸ್ಥೆ ತೈವಾನ್ ಸುತ್ತಮುತ್ತಲಿನ ದ್ವೀಪಗಳಿಗೆ ಎಚ್ಚರಿಕೆ ಮತ್ತು ಸಲಹೆಗಳನ್ನು ನೀಡಿದೆ.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 10:59 am, Mon, 19 September 22

ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ