AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ತೈವಾನ್​ನಲ್ಲಿ ಭೂಕಂಪ; ಆಟಿಕೆಯಂತೆ ಅಲ್ಲಾಡಿದ ರೈಲು

Earthquake : ತೈವಾನ್​ನ ರೈಲ್ವೇಸ್ಟೇಷ್​ನಲ್ಲಿ ನಿಂತಿದ್ದ ರೈಲು ಆಟಿಕೆಯಂತೆ ಅಲ್ಲಾಡಿದ ವಿಡಿಯೋ ವೈರಲ್ ಆಗಿದೆ. ಭೂಕಂಪದ ಹಿನ್ನೆಲೆಯಲ್ಲಿ ಸುನಾಮಿಯೂ ಏಳುವ ಸಾಧ್ಯತೆ ಇದೆ.

Viral Video : ತೈವಾನ್​ನಲ್ಲಿ ಭೂಕಂಪ; ಆಟಿಕೆಯಂತೆ ಅಲ್ಲಾಡಿದ ರೈಲು
ತೈವಾನ್​ನಲ್ಲಿ ಭೂಕಂಪಕ್ಕೊಳಗಾದಾಗ ಅಲ್ಲಾಡಿದ ರೈಲು
TV9 Web
| Edited By: ಶ್ರೀದೇವಿ ಕಳಸದ|

Updated on:Sep 19, 2022 | 11:01 AM

Share

Viral Video : ತೈವಾನ್​ನಲ್ಲಿ ನಿನ್ನೆ ತೀವ್ರ ಭೂಕಂಪ ಸಂಭವಿಸಿದೆ. ಆಗ್ನೇಯ ಕರಾವಳಿಯಲ್ಲಿ ಸಂಭವಿಸಿದ ಈ ಭೂಕಂಪ 6.9 ತೀವ್ರತೆಯಿಂದ ಕೂಡಿತ್ತು ಎಂದು ಅಮೆರಿಕದ ಭೂವೈಜ್ಞಾನಿಕ ಸಮೀಕ್ಷೆಯಿಂದ ತಿಳಿದು ಬಂದಿದೆ. ಈ ಭೂಕಂಪದ ಹಿನ್ನೆಲೆಯಲ್ಲಿ ಜಪಾನ್​ ಸುನಾಮಿಯ ಎಚ್ಚರಿಕೆಯನ್ನೂ ನೀಡಿದೆ. ಎನ್‌ಡಿಟಿವಿ ಪತ್ರಕರ್ತ ಉಮಾಶಂಕರ್ ಸಿಂಗ್ ಹಂಚಿಕೊಂಡಿರುವ ವಿಡಿಯೋದಲ್ಲಿ, ರೈಲುನಿಲ್ದಾಣದಲ್ಲಿ ನಿಂತಿರುವ ರೈಲು ಆಟಿಕೆ ಸಾಮಾನಿನಂತೆ ಅಲುಗಾಡುತ್ತಿರುವುದನ್ನು ನೋಡಬಹುದಾಗಿದೆ.

ರಾಯಿಟರ್ಸ್ ವರದಿಯ ಪ್ರಕಾರ, ಭೂಕಂಪವು ತೈತುಂಗ್​ನ ಉತ್ತರ ಭಾಗದಲ್ಲಿ ಮಧ್ಯಾಹ್ನ 2.44ಕ್ಕೆ ಸಂಭವಿಸಿದೆ. 10 ಕಿ.ಮೀ ಆಳದಿಂದ ಉಂಟಾದ ಕಂಪನವು ಸುಮಾರು 50 ಕಿ.ಮೀ. ಪ್ರದೇಶವನ್ನು ಆವರಿಸಿಕೊಂಡಿತ್ತು. ಯುಲಿ ಪ್ರದೇಶದಲ್ಲಿ ಶನಿವಾರ ಭೂಕಂಪನವು ಸಂಭವಿಸಿದ್ದು ನಂತರ ಅಲ್ಲಲ್ಲಿ ಭೂಕಂಪಗಳು  ಸಂಭವಿಸಲಾರಂಭಿಸಿದವು. ಯುಲಿಯಲ್ಲಿ ಮೊದಲ ಕಂಪನವಾದಾಗ ತೀವ್ರತೆ 6.6 ಇತ್ತು. ಆದರೆ ಭಾನುವಾರದ ಹೊತ್ತಿಗೆ ಈ ಕಂಪನ ಪ್ರಬಲವಾಗುತ್ತ ಹೋಯಿತು ಎಂದು ವರದಿಗಳು ತಿಳಿಸಿವೆ.

ಫ್ಯೂಜಿಯಾನ್, ಗುವಾಂಗ್‌ಡಾಂಗ್, ಜಿಯಾಂಗ್‌ಸು ಮತ್ತು ಶಾಂಘೈ ಸೇರಿದಂತೆ ಕರಾವಳಿ ಪ್ರದೇಶಗಳಲ್ಲಿ ಕಂಪನ ಸ್ಪಷ್ಟವಾಗಿ ಕಂಡುಬಂದಿದೆ. ಈ ಎಲ್ಲ ಪರಿಣಾಮವಾಗಿ ಸುನಾಮಿ ಸಂಭವಿಸುವ ಅಪಾಯವಿದ್ದು, ಇಂದು ಸಂಜೆ ಸುಮಾರು 4 ಗಂಟೆಗೆ ಒಂದು ಮೀಟರ್‌ನಷ್ಟು ಎತ್ತರದ ಅಲೆಗಳುಂಟಾಗುವ ನಿರೀಕ್ಷೆ ಇದೆ. ಈ ಪರಿಣಾಮವಾಗಿ ಜಪಾನಿನ ಹವಾಮಾನ ಸಂಸ್ಥೆ ತೈವಾನ್ ಸುತ್ತಮುತ್ತಲಿನ ದ್ವೀಪಗಳಿಗೆ ಎಚ್ಚರಿಕೆ ಮತ್ತು ಸಲಹೆಗಳನ್ನು ನೀಡಿದೆ.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 10:59 am, Mon, 19 September 22

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ