AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಥ್ರೆಡ್; ‘ಇದೇನು ನಮ್ಮ ಜಿಲೇಬಿಯೋ?’ ಗೊಂದಲಕ್ಕೆ ಬಿದ್ದ ನೆಟ್ಟಿಗರು

Thread : ಈ ಲೋಗೋ ತಮಿಳು ವರ್ಣಮಾಲೆಯ "ಕು" ಅಕ್ಷರದಿಂದ ಪ್ರೇರಣೆಗೊಂಡಿದೆ ಎಂದು ಕೆಲವರು. ಇದು ಮಲಯಾಳಂನ "ಥ್ರ್" ಮತ್ತು "ಕ್ರಾ" ಹೋಲುತ್ತದೆ ಎಂದು ಕೆಲವರು. ಎಂಥದೂ ಇಲ್ಲ, ಇದು ''ಓಂ'' ಎಂದು ಹಲವರು. ಏನಂತೀರಿ ನೀವು?

Viral: ಥ್ರೆಡ್; 'ಇದೇನು ನಮ್ಮ ಜಿಲೇಬಿಯೋ?' ಗೊಂದಲಕ್ಕೆ ಬಿದ್ದ ನೆಟ್ಟಿಗರು
ಸೋಶಿಯಲ್ ಮೀಡಿಯಾ ಅಪ್ಲಿಕೇಷನ್​ ''ಥ್ರೆಡ್​ '' ಜಿಲೇಬಿಯಂತಿದೆಯೇ?
ಶ್ರೀದೇವಿ ಕಳಸದ
|

Updated on:Jul 08, 2023 | 2:42 PM

Share

Thread : ಮೆಟಾ (META) ಸಂಸ್ಥೆಯು ಗುರುವಾರದಂದು ಅಧಿಕೃತವಾಗಿ ಥ್ರೆಡ್ ಎಂಬ ಸೋಶಿಯಲ್ ಮೀಡಿಯಾ ಅಪ್ಲಿಕೇಷನ್ (Social Media Application)​ ಅನ್ನು ಮಾರುಕಟ್ಟೆಗೆ​ ಬಿಡುಗಡೆ ಮಾಡಿದೆ. ಟ್ವಿಟರ್​ಗೆ ಪೈಪೋಟಿ ನೀಡಲೆಂದೇ ಈ ಹೊಸ ಅಪ್ಲಿಕೇಷನ್ ಅನ್ನು ರೂಪಿಸಲಾಗಿದೆ. ನೆಟ್ಟಿಗರು ನಾಲ್ಕು ದಿನಗಳಿಂದ ಸತತವಾಗಿ ಇದರ ಲೋಗೋದ ಸುತ್ತ ಸುತ್ತುತ್ತ ಟ್ರೆಂಡ್​ ಮತ್ತು ಟ್ರೋಲ್ ಮಾಡುತ್ತಿದ್ದಾರೆ.

ದಕ್ಷಿಣ ಭಾರತೀಯರು, ಇದು ದ್ರಾವಿಡ ವರ್ಣಮಾಲೆಗಳನ್ನು ಹೋಲುತ್ತಿದೆ ಎಂದು ತಮ್ಮ ತಮ್ಮ ಭಾಷೆಯ ವರ್ಣಮಾಲೆಯ ಅಕ್ಷರಗಳನ್ನುಈ ಥ್ರೆಡ್​ಗೆ ಹೋಲಿಸಿ ಸೋದಾಹರಿಸುತ್ತಿದ್ದಾರೆ. ಇದು ತಮಿಳು ವರ್ಣಮಾಲೆಯ “ಕು” ಅಕ್ಷರದಿಂದ ಪ್ರೇರೇಪಣೆಗೊಂಡಿದೆ ಎಂದು ಹಲವಾರು ಜನ ಹೇಳಿದ್ದಾರೆ. ಹಾಗೆಯೇ ಮಲಯಾಳಿಗರು, ಮಲಯಾಳದ “ಥ್ರ್” ಮತ್ತು “ಕ್ರಾ” ಅನ್ನು ಹೋಲುತ್ತದೆ ಎಂದಿದ್ದಾರೆ.

ಆದರೆ ಕೆಲ ನೆಟ್ಟಿಗರು ಇದು ಹಿಂದೂಧರ್ಮದ “ಓಂ” ಅನ್ನು ಕೂಡ ಪ್ರತಿನಿಧಿಸುತ್ತಿದೆ ಎಂದು ವಾದಿಸುತ್ತಿದ್ದಾರೆ. ತಿಂಡಿಪ್ರಿಯರು ಮಾತ್ರ ಇದು ಖಂಡಿತ ಜಿಲೇಬಿಯನ್ನು ಹೋಲುತ್ತಿದೆ ಎಂದು ಪಟ್ಟು ಹಿಡಿದು ಟೀಕಿಸಿ ಟ್ರೋಲ್ ಮಾಡುತ್ತಿದ್ದಾರೆ. ಸದ್ಯಕ್ಕಂತೂ ಜನ ತಮ್ಮ ಬೆಳಗಿನ ತಿಂಡಿಯಲ್ಲಿ ಜಿಲೇಬಿ ತಿನ್ನುತ್ತಿದ್ದೇವೆಂಬಂತೆ ಈ ಥ್ರೆಡ್​ ಅಪ್ಲಿಕೇಷನ್​ ಓಪನ್ ಮಾಡುತ್ತಿದ್ದಾರೆ. ಇನ್ನು ಇದೇ ಅವರಿಗೆ ಶಕ್ತಿ ಎಂದು ಟ್ವೀಟ್ ಮಾಡಿದ್ದಾರೆ ಒಬ್ಬರು. ಈ ಲೋಗೋ ನೋಡಿದಾಗೆಲ್ಲ ನನಗೆ ಜಿಲೇಬಿ ತಿನ್ನುವ ಆಸೆ ಉಂಟಾಗುತ್ತಿದೆ ಎಂದಿದ್ದಾರೆ ಮತ್ತೊಬ್ಬರು.

ಅರೆ ಇದು ಕಿವಿಯಂತೆ ಕಾಣುತ್ತಿಲ್ಲವೆ? ಎಂದು ಕೆಲವರು ಹೇಳಿದ್ದಾರೆ. ಅಂತೂ ಈ ಹೊಸ ಅಪ್ಲಿಕೇಷನ್​ ಅನ್ನು ಒಂದು ದಿನದಲ್ಲಿ ಸುಮಾರು 30ಮಿಲಿಯನ್​ಗಿಂತಲೂ ಹೆಚ್ಚು ಜನ ಡೌನ್​ಲೋಡ್ ಮಾಡಿಕೊಂಡಿದ್ದಾರೆ.

ಇದನ್ನು ಓದಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 1:36 pm, Sat, 8 July 23

ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್