AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೌರ ಶಕ್ತಿ ಬಳಸಿ ಇಸ್ತ್ರಿ ಮಾಡುವ ತಂತ್ರಜ್ಞಾನ ಅಭಿವೃದ್ಧಿಪಡಿಸಿದ ತಮಿಳುನಾಡಿನ ಬಾಲಕಿ; ಪ್ರತಿಷ್ಠಿತ ‘ಇಕೋ ಆಸ್ಕರ್’ಗೆ ನಾಮ ನಿರ್ದೇಶನ

ಮನಿಷಾ, ಸೌರಶಕ್ತಿಯಿಂದ ಇಸ್ಟ್ರಿ ಮಾಡುವ ತಂತ್ರಜ್ಞಾನವನ್ನು ಅಭಿವೃದ್ಧಿ ಪಡಿಸಿದ್ದಾಳೆ. ತಯಾರಿಸಿದ ಸಾಧನದ ಮೇಲ್ಭಾಗದಲ್ಲಿ ಚಾರ್ಜಿಂಗ್ ವ್ಯವಸ್ಥೆ ಕೂಡಾ ಇದೆ. ವರ್ಷಪೂರ್ತಿ ಸೂರ್ಯನ ಬೆಳಕು ಇರುವ ಪ್ರದೇಶಗಳಲ್ಲಿ ಸಾಗಿಸುವ ಗುರಿಯನ್ನು ಮನಿಷಾ ಹೊಂದಿದ್ದಾಳೆ.

ಸೌರ ಶಕ್ತಿ ಬಳಸಿ ಇಸ್ತ್ರಿ ಮಾಡುವ ತಂತ್ರಜ್ಞಾನ ಅಭಿವೃದ್ಧಿಪಡಿಸಿದ ತಮಿಳುನಾಡಿನ ಬಾಲಕಿ; ಪ್ರತಿಷ್ಠಿತ ‘ಇಕೋ ಆಸ್ಕರ್’ಗೆ ನಾಮ ನಿರ್ದೇಶನ
ಮನಿಷಾ ಉಮಾಶಂಕರ್​
Follow us
TV9 Web
| Updated By: shruti hegde

Updated on:Oct 14, 2021 | 2:37 PM

ತಮಿಳುನಾಡಿನ 14 ವರ್ಷದ ವಿನಿಷಾ ಉಮಾಶಂಕರ್ ಈ ವರ್ಷ ಅರ್ಥ್ ಶಾಟ್ ಪ್ರಶಸ್ತಿಗೆ ಸ್ಪರ್ಧಿಸಿದ್ದಾಳೆ. 2019ರಲ್ಲಿ ಆರಂಭಗೊಂಡ ‘ಇಕೋ ಆಸ್ಕರ್’ಅನ್ನು, ಕೆಳಮಟ್ಟದ ಪರಿಸರ ವ್ಯವಸ್ಥೆಯು ಹೆಚ್ಚು ಪರಿಣಾಮಕಾರಿಯಾಗಿ ಸುಧಾರಿಸುವ ಹಾದಿಯಲ್ಲಿ ಸಾಗಲು ಸಹಾಯ ಮಾಡುವ ಉದ್ದೇಶ ಹೊಂದಿರುವ ಯೋಜನೆಯಲ್ಲಿ ಆಯ್ಕೆಯಾದವರಿಗೆ ನೀಡಲಾಗುತ್ತದೆ. ‘ಕ್ಲೀನ್ ಅವರ್ ಏರ್’ (ಗಾಳಿಯನ್ನು ಸ್ವಚ್ಛಗೊಳಿಸಿ) ಎಂಬ ವಿಭಾಗದಲ್ಲಿ ತಮಿಳುನಾಡಿನ ತಿರುವಣ್ಣಾಮಲೈ ಮೂಲದ ಮನಿಶಾ ಉಮಾಶಂಕರ್​ ಫೈನಲಿಸ್ಟ್ ಆಗಿ ಆಯ್ಕೆಯಾಗಿದ್ದಾಳೆ.

ಶಾಲೆಗೆ ಹೋಗುವ ಸಮಯದಲ್ಲಿ ಮನಿಷಾ ಇದ್ದಿಲು ಇಸ್ತ್ರಿ ಮಾಡುವುದನ್ನು ನೋಡುತ್ತಿದ್ದಳು. ಇದ್ದಿಲಿನಿಂದ ಪರಿಸರಕ್ಕೆ ಏನೆಲ್ಲಾ ಪರಿಣಾಮಗಳು ಉಂಟಾಗಬಹುದು ಎಂದು ತಿಳಿಯಲು ಬಯಸಿದಳು. ಇದರ ಹೊಗೆಯಿಂದ ಶ್ವಾಸಕೋಶ ಹೇಗೆ ಬಾಧಿತವಾಗುತ್ತದೆ ಎಂಬುದನ್ನು ತಿಳಿದಳು. ಪ್ರತೀ ವರ್ಷ ಇದ್ದಿಲು ತಯಾರಿಸಲು ಹೆಚ್ಚಿನ ಸಂಖ್ಯೆಯ ಮರಗಳನ್ನು ಕತ್ತರಿಸಲಾಗುತ್ತದೆ ಇದನ್ನು ತಿಳಿದ ಮನಿಷಾ ಆಶ್ಚರ್ಯಚಕಿತಳಾದಳು ಎಂದು ಅರ್ಥ್ ಶಾಟ್ ಪ್ರಶಸ್ತಿಯ ವೆಬ್​ಸೈಟ್​ನಲ್ಲಿ ತಿಳಿಸಲಾಗಿದೆ.

ಮನಿಷಾ, ಸೌರಶಕ್ತಿಯಿಂದ ಇಸ್ಟ್ರಿ ಮಾಡುವ ತಂತ್ರಜ್ಞಾನವನ್ನು ಅಭಿವೃದ್ಧಿ ಪಡಿಸಿದ್ದಾಳೆ. ಇದು ಸೂರ್ಯನ ಬೆಳಕಿನಲ್ಲಿ ಆರು ಗಂಟೆಗಳ ಕಾಲ ಓಡುತ್ತದೆ. ತಯಾರಿಸಿದ ಸಾಧನದ ಮೇಲ್ಭಾಗದಲ್ಲಿ ಚಾರ್ಜಿಂಗ್ ವ್ಯವಸ್ಥೆ ಕೂಡಾ ಇದೆ. ಜತೆಗೆ ಸುಸ್ಥಿರ ಅಭಿವೃದ್ದಿಯ ಗುರಿಗಳನ್ನು ಹೊಂದಿರುವ ಒಂದು ಯೋಜನೆಯಾಗಿದೆ. ಇದನ್ನು ಸರಿಯಾದ ಬೆಲೆಗೆ ಮಾರಾಟ ಮಾಡಲು ಮತ್ತು ಏಷ್ಯಾ, ಅಫ್ರಿಕಾ ಮತ್ತು ವರ್ಷಪೂರ್ತಿ ಸೂರ್ಯನ ಬೆಳಕು ಇರುವ ಪ್ರದೇಶಗಳಲ್ಲಿ ಸಾಗಿಸುವ ಗುರಿಯನ್ನು ಮನಿಷಾ ಹೊಂದಿದ್ದಾಳೆ.

ದೆಹಲಿ ಮೂಲದ ಉದ್ಯಮಿ ಮೋಹನ್ ಕೂಡಾ ಇದೇ ವಿಭಾಗದಲ್ಲಿ ಆಯ್ಕೆಯಾಗಿದ್ದಾರೆ. ಅವರ ಕಲ್ಪನೆ, ಉತ್ತರ ಪ್ರದೇಶಗಳಲ್ಲಿ ಕೃಷಿಯಿಂದ ಉಂಟಾಗುವ ಮಾಲಿನ್ಯವನ್ನು ಕಡಿಮೆ ಮಾಡುವ ಪ್ರಯತ್ನದ ಯೋಜನೆಯಾಗಿದೆ. ಸಾಧನವನ್ನು ಟಕಾಚಾರ್ ಎಂದು ಕರೆಯಲಾಗುತ್ತದೆ.

ಟಕಾಚಾರ್ ಒಂದು ಸಣ್ಣ ಸಾಧನ. ಅದನ್ನು ಟ್ರ್ಯಾಕ್ಟರ್​ಗಳಿಗೆ ಜೋಡಿಸಲಾಗುತ್ತದೆ. ಇದರಿಂದ ಬೆಳೆ ತ್ಯಾಜ್ಯಗಳನ್ನು ರಸಗೊಬ್ಬರ ಮತ್ತು ಇಂಧನದಂತಹ ಜೈವಿಕ ಉತ್ಪನ್ನಗಳಾಗಿ ಪರಿವರ್ತಿಸಲಾಗುತ್ತದೆ. ದೆಹಲಿ ಮತ್ತು ಹತ್ತಿರ ಪ್ರದೇಶದಲ್ಲಿ ಮಾಲಿನ್ಯವನ್ನು ಕಡಿಮೆ ಮಾಡಲು ಸಹಾಯಕ ಯಂತ್ರವಾಗಿದೆ. ಅಕ್ಟೋಬರ್ 17ರಂದು ಲಂಡನ್​ನಲ್ಲಿ ಪ್ರಿನ್ಸ್ ವಿಲಿಯಂ ಅವರ ಭಾಷಣದ ಬಳಿಕ ಪ್ರಶಸ್ತಿ ಪ್ರದಾನ ಸಮಾರಂಭವು ನಡೆಯಲಿದೆ.

ಇದನ್ನೂ ಓದಿ:

ಈ 2 ವರ್ಷದ ಬಾಲಕಿಯ ಸಾಧನೆ ನೀವೇ ಕೇಳಿರಿ…!

ವೇಟ್​ಲಿಫ್ಟಿಂಗ್​ ಮಾಡಿದ ಪುಟ್ಟ ಬಾಲಕಿ! ಮೀರಾಬಾಯಿ ಚಾನು ಅವರ ಪ್ರತಿಕ್ರಿಯೆ ಏನಿತ್ತು ನೋಡಿ

Published On - 2:37 pm, Thu, 14 October 21

RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ