AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀವನಾಂಶ ಪಾವತಿಸುವಂತೆ ಆದೇಶಿಸಿದ ಕೋರ್ಟ್;‌ 1 ಮತ್ತು 2 ರೂ. ಚಿಲ್ಲರೆ ರೂಪದಲ್ಲಿ ಪತ್ನಿಗೆ 80 ಸಾವಿರ ರೂ. ಪರಿಹಾರ ಹಣ ನೀಡಿದ ಪತಿರಾಯ

ಇತ್ತೀಚಿಗಂತೂ ಡಿವೋರ್ಸ್‌ ಪ್ರಕರಣಗಳು ತೀರಾ ಹೆಚ್ಚುತ್ತಿದೆ. ಇದೀಗ ಇಲ್ಲೊಂದು ವಿಚ್ಛೇದನ ಪ್ರಕರಣ ಸಖತ್‌ ಸುದ್ದಿಯಾಗುತ್ತಿದ್ದು, ವ್ಯಕ್ತಿಯೊಬ್ಬರು ಪತ್ನಿಗೆ ಜೀವನಾಂಶ ಪಾವತಿಸಲು 80 ಸಾವಿರ ರೂ. ಮೌಲ್ಯದ 1-2 ರೂಪಾಯಿ ನಾಣ್ಯಗಳ ಕಟ್ಟನ್ನು ಕೋರ್ಟ್‌ಗೆ ಹೊತ್ತು ತಂದಿದ್ದಾರೆ. ನಿಮ್ಮ ಪತ್ನಿಗೆ 2 ಲಕ್ಷ ರೂ. ಜೀವನಾಂಶ ನೀಡಬೇಕೆಂದು ನ್ಯಾಯಾಲಯ ಆದೇಶಿಸಿದ್ದು, ಇದಕ್ಕಾಗಿ ಈ ವ್ಯಕ್ತಿ 1 ಮತ್ತು 2 ರೂ. ಚಿಲ್ಲರೆ ಹಣದ ರೂಪದಲ್ಲಿ ಪತ್ನಿಗೆ 80 ಸಾವಿರ ರೂ. ಪರಿಹಾರ ಹಣವನ್ನು ನೀಡಿದ್ದಾರೆ.

ಜೀವನಾಂಶ ಪಾವತಿಸುವಂತೆ ಆದೇಶಿಸಿದ ಕೋರ್ಟ್;‌ 1 ಮತ್ತು 2 ರೂ. ಚಿಲ್ಲರೆ ರೂಪದಲ್ಲಿ ಪತ್ನಿಗೆ 80 ಸಾವಿರ ರೂ. ಪರಿಹಾರ ಹಣ ನೀಡಿದ ಪತಿರಾಯ
New Project (57)
ಮಾಲಾಶ್ರೀ ಅಂಚನ್​
| Edited By: |

Updated on: Dec 22, 2024 | 4:03 PM

Share

ಸಾಮಾನ್ಯವಾಗಿ ವಿಚ್ಛೇದನ ಪ್ರಕರಣಗಳಲ್ಲಿ ಗಂಡನಾದವನು ಡಿವೋರ್ಸ್‌ ಬಳಿಕ ಹೆಂಡ್ತಿಗೆ ಇಂತಿಷ್ಟು ಜೀವನಾಂಶ ನೀಡಬೇಕೆಂದು ನ್ಯಾಯಾಲಯ ಆದೇಶ ನೀಡುತ್ತದೆ. ಅದೇ ಇಲ್ಲೊಂದು ನ್ಯಾಯಾಲಯ ವ್ಯಕ್ತಿಯೊಬ್ಬರಿಗೆ 2 ಲಕ್ಷ ರೂ. ಪರಿಹಾರ ನೀಡುವಂತೆ ಆದೇಶಿಸಿದ್ದು, ಇದಕ್ಕಾಗಿ ಈ ವ್ಯಕ್ತಿ 1 ಮತ್ತು 2 ರೂ. ನಾಣ್ಯದ ರೂಪದಲ್ಲಿ ಪತ್ನಿಗೆ 80 ಸಾವಿರ ರೂ. ಪರಿಹಾರ ಹಣವನ್ನು ನೀಡಿದ್ದಾರೆ. ಹೌದು ಆ ವ್ಯಕ್ತಿ 80 ಸಾವಿರ ರೂ. ಮೌಲ್ಯದ 1-2 ರೂಪಾಯಿ ಚಿಲ್ಲರೆ ಹಣದ ಕಟ್ಟನ್ನು ಕೋರ್ಟ್‌ಗೆ ಹೊತ್ತು ತಂದಿದ್ದು, ಈ ಸುದ್ದಿ ಇದೀಗ ಸಖತ್‌ ವೈರಲ್‌ ಆಗುತ್ತಿದೆ.

ಟೈಮ್ಸ್‌ ಆಫ್‌ ಇಂಡಿಯಾ ವರದಿ ಪ್ರಕಾರ ಈ ಘಟನೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದಿದ್ದು, ವ್ಯಕ್ತಿಯೊಬ್ಬರು ವಿಚ್ಛೇದಿತ ಪತ್ನಿಗೆ ಜೀವನಾಂಶ ನೀಡಲು ಸುಮಾರು 80 ಸಾವಿರ ಮೌಲ್ಯದ 1 ಮತ್ತು ಎರಡು ರೂಪಾಯಿ ಚಿಲ್ಲರೆ ಹಣದ ಕಟ್ಟನ್ನು ಕೋರ್ಟ್‌ಗೆ ತಂದಿದ್ದಾರೆ.

ಇದನ್ನೂ ಓದಿ: ಪ್ರಿಯಕರನ ಜೊತೆ ಇದ್ದಾಗ ದಿಢೀರನೇ ಮನೆಗೆ ಎಂಟ್ರಿ ಕೊಟ್ಟ ಗಂಡ; ಮುಂದೆನಾಯಿತು?

ಟ್ಯಾಕ್ಸಿ ಚಾಲಕನಾಗಿ ಕೆಲಸ ಮಾಡುತ್ತಿದ್ದ 37 ವರ್ಷ ವಯಸ್ಸಿನ ವ್ಯಕ್ತಿಯೊಬ್ಬರ ಪತ್ನಿ ಕಳೆದ ವರ್ಷ ಕೊಯಮತ್ತೂರು ಹೆಚ್ಚುವರಿ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಇದೀಗ ಕೋರ್ಟ್‌ 2 ಲಕ್ಷ ರೂ. ಜೀವನಾಂಶ ನೀಡಬೇಕೆಂದು ಆ ವ್ಯಕ್ತಿಗೆ ಆದೇಶ ನೀಡಿದ್ದು, ನ್ಯಾಯಾಲಯದ ಆದೇಶದ ಮೇರೆಗೆ ಮಾಜಿ ಪತ್ನಿಗೆ ಪರಿಹಾರ ಹಣ ನೀಡುವ ಸಲುವಾಗಿ ಆ ವ್ಯಕ್ತಿ ಸುಮಾರು 80 ಸಾವಿರ ಮೌಲ್ಯದ 1 ಮತ್ತು ಎರಡು ರೂಪಾಯಿ ನಾಣ್ಯಗಳ 20 ಕಟ್ಟುಗಳನ್ನು ನ್ಯಾಯಾಲಯಕ್ಕೆ ತಂದಿದ್ದಾರೆ. ನಾಣ್ಯಗಳ ರೂಪದಲ್ಲಿಯೇ ವಿಚ್ಛೇದಿತ ಪತ್ನಿಗೆ ಪರಿಹಾರ ಹಣ ನೀಡಿದ್ದು, ಈ ಹಣವನ್ನು ನಗದು ರೂಪದಲ್ಲಿಯೇ ನೀಡಬೇಕು ಎಂದು ಕೋರ್ಟ್‌ ಹೇಳಿದ್ದಕ್ಕೆ ಆ ವ್ಯಕ್ತಿ ಮರುದಿನ ಕರೆನ್ಸಿ ನೋಟು ರೂಪದಲ್ಲಿ ಹಣ ನೀಡಿದ್ದಾರೆ. ಮತ್ತು ಬಾಕಿ ಉಳಿದ 1.2 ಲಕ್ಷ ರೂ ಹಣವನ್ನು ಆದಷ್ಟು ಬೇಗ ಪಾವತಿಸುವಂತೆ ನ್ಯಾಯಾಲಯ ಸೂಚಿಸಿದೆ. ಈ ಸುದ್ದಿ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗುತ್ತಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಲಂಚ ಸ್ವೀಕರಿಸುತ್ತಿದ್ದಾಗ ಗುಬ್ಬಿ ಆರ್‌ಎಫ್‌ಒ ಲೋಕಾಯುಕ್ತ ಬಲೆಗೆ
ಲಂಚ ಸ್ವೀಕರಿಸುತ್ತಿದ್ದಾಗ ಗುಬ್ಬಿ ಆರ್‌ಎಫ್‌ಒ ಲೋಕಾಯುಕ್ತ ಬಲೆಗೆ
ಕರ್ತವ್ಯ ಲೋಪ ಕೇಸ್​: ಶಾಸಕ ಉಮೇಶ್ ಮೇಟಿ ಸೊಸೆ ಡಾ ಅಂಕಿತಾ ಯರಗಲ್​​ ವಜಾ
ಕರ್ತವ್ಯ ಲೋಪ ಕೇಸ್​: ಶಾಸಕ ಉಮೇಶ್ ಮೇಟಿ ಸೊಸೆ ಡಾ ಅಂಕಿತಾ ಯರಗಲ್​​ ವಜಾ
ಗಣಪತಿ ಮೆರವಣಿಗೆಗೆ ಇರುವ ಕಂಡೀಷನ್​​, ಈದ್​ ಮಿಲಾದ್​ಗೆ ಯಾಕಿಲ್ಲ?: ಅಶೋಕ್​
ಗಣಪತಿ ಮೆರವಣಿಗೆಗೆ ಇರುವ ಕಂಡೀಷನ್​​, ಈದ್​ ಮಿಲಾದ್​ಗೆ ಯಾಕಿಲ್ಲ?: ಅಶೋಕ್​
ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ
ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ
ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ