Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು ನವದಂಪತಿಗೆ ವಿವಾಹ ಮಂಟಪದಲ್ಲಿ ಪೆಟ್ರೋಲ್ ಡೀಸೆಲ್ ಕೊಡುಗೆ

ಚೆಂಗಲಪಟ್ಟು ಜಿಲ್ಲೆಯ ಚೆಯ್ಯೂರ್ ಗ್ರಾಮದಲ್ಲಿ ನಡೆದ ಮದುವೆ ವೇಳೆ ದಂಪತಿಗೆ ಗೆಳೆಯರು ಪೆಟ್ರೋಲ್-ಡೀಸೆಲ್ ಇದ್ದ ಬಾಟಲಿ ಕೊಟ್ಟು ಶುಭ ಹಾರೈಸಿದರು.

ತಮಿಳುನಾಡು ನವದಂಪತಿಗೆ ವಿವಾಹ ಮಂಟಪದಲ್ಲಿ ಪೆಟ್ರೋಲ್ ಡೀಸೆಲ್ ಕೊಡುಗೆ
ವಧು-ವರರಿಗೆ ಪೆಟ್ರೋಲ್-ಡೀಸೆಲ್ ಉಡುಗೊರೆ ನೀಡಲಾಯಿತು.
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Apr 08, 2022 | 9:19 AM

ಚೆಂಗಲಪಟ್ಟು: ಹೊಸ ಬಾಳಿನ ಹೊಸಿಲಲಿ ನಿಂತಿದ್ದ ತಮಿಳುನಾಡಿನ ನವದಂಪತಿಗೆ ಗೆಳೆಯರು ಪೆಟ್ರೋಲ್ ಮತ್ತು ಡೀಸೆಲ್​ನ ಒಂದೊಂದು ಬಾಟಲಿಗಳ ಉಡುಗೊರೆ ನೀಡಿದ್ದಾರೆ. ಈ ವಿಡಿಯೊ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಚೆಂಗಲಪಟ್ಟು ಜಿಲ್ಲೆಯ ಚೆಯ್ಯೂರ್ ಗ್ರಾಮದಲ್ಲಿ ನಡೆದ ಮದುವೆ ವೇಳೆ ದಂಪತಿಗೆ ಗೆಳೆಯರು ಪೆಟ್ರೋಲ್-ಡೀಸೆಲ್ ಇದ್ದ ಬಾಟಲಿ ಕೊಟ್ಟು ಶುಭ ಹಾರೈಸಿದರು. ದೇಶದ ಇತರೆಲ್ಲ ರಾಜ್ಯಗಳಂತೆ ತಮಿಳುನಾಡಿನಲ್ಲಿಯೂ ಕಳೆದ 15 ದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಒಂಭತ್ತು ರೂಪಾಯಿಗೂ ಹೆಚ್ಚಾಗಿವೆ. ಚೆನ್ನೈ ನಗರದಲ್ಲಿ ಪ್ರಸ್ತುತ ಒಂದು ಲೀಟರ್​ ಪೆಟ್ರೋಲ್​ಗೆ ₹ 110.85 ಹಾಗೂ ಡೀಸೆಲ್ ₹ 100.94ರಂತೆ ಮಾರಾಟವಾಗುತ್ತಿದೆ. ವರ ಗ್ರೇಸ್ ಕುಮಾರ್ ಮತ್ತು ವಧು ಕೀರ್ತನಾರ ಗೆಳೆಯರು ಬೆಲೆ ಹೆಚ್ಚಳವನ್ನು ಗಮನಿಸಿ, ಪೆಟ್ರೋಲ್-ಡೀಸೆಲ್ ಕೊಡುಗೆ ನೀಡಲು ನಿರ್ಧರಿಸಿದರು.

ಪೆಟ್ರೋಲ್ ಬಂಕ್​ಗಳಲ್ಲಿ ನೋ ಸ್ಟಾಕ್ ಬೋರ್ಡ್

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 111.16 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.86 ರೂಪಾಯಿ ದಾಖಲಾಗಿದೆ. ಬೆಂಗಳೂರಿನ ಬಹುತೇಕ ಪೆಟ್ರೋಲ್ ಬಂಕ್​ಗಳಲ್ಲಿ ನೋ ಸ್ಟಾಕ್ ಬೋರ್ಡ್ ಹಾಕಲಾಗಿದೆ. ಸಮಯಕ್ಕೆ ಸರಿಯಾಗಿ ಪೆಟ್ರೋಲ್, ಡೀಸೆಲ್ ಸಿಗದೆ ವಾಹನ ಸವಾರರು ಪರದಾಡುತ್ತಿದ್ದಾರೆ. ತೈಲ ದರ ಏರಿಕೆಯಿಂದ ಕಂಗೆಟ್ಟಿರುವ ಸರಬರಾಜು ಕಂಪನಿಗಳು ಆರ್ಥಿಕ ಹೊರೆ ಇಳಿಸಲು ಸರಬರಾಜಿಗೆ ಮಿತಿ ಹಾಕಿವೆ. ಮಾರುಕಟ್ಟೆಯಲ್ಲಿರುವ ಬೇಡಿಕೆಯಷ್ಟು ಇಂಧನ ಪೂರೈಕೆಯಾಗ್ತಿಲ್ಲ. ರಾಜ್ಯಕ್ಕೆ ಇಂಧನ ಪೂರೈಕೆಯಾಗದೆ ಬಂಕ್ ಮಾಲೀಕರು ಇಕ್ಕಟ್ಟಿನಲ್ಲಿ ಸಿಲುಕಿವೆ. ಹಲವು ಪೆಟ್ರೋಲ್ ಬಂಕ್​ಗಳಲ್ಲಿ ನೋ ಸ್ಟಾಕ್ ಬೋರ್ಡ್ ಅಳವಡಿಸಲಾಗಿದೆ. ಇದರಿಂದ ವಾಹನಗಳಲ್ಲಿ ಓಡಾಡುವ ಸವಾರರಿಗೆ ಸಮಸ್ಯೆ ಎದುರಾಗಿದೆ.

ಸತತ ಬೆಲೆ ಏರಿಕೆ?

ಭಾರತದಲ್ಲಿ ನಾಲ್ಕೂವರೆ ತಿಂಗಳ ಬಳಿಕ ಪೆಟ್ರೋಲ್, ಡೀಸೆಲ್ ಬೆಲೆಯನ್ನು ಸತತವಾಗಿ ಏರಿಕೆ ಮಾಡಲಾಗುತ್ತಿದೆ. ಈ ಮಧ್ಯೆ, ನಿನ್ನೆ ಮತ್ತು ಇಂದು (ಏಪ್ರಿಲ್ 7-8, 2022) ಇಂಧನ ದರದಲ್ಲಿ ಯಾವುದೇ ಏರಿಕೆ ಕಂಡುಬಂದಿಲ್ಲ. ಮಾರ್ಚ್ 22ರಂದು ಆರಂಭವಾದ ಬೆಲೆ ಏರಿಕೆ ಸತತವಾಗಿ ಹೆಚ್ಚುತ್ತಲೇ ಇದೆ. ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿದಿನ ಏರುತ್ತಲೇ ಇದೆ. ಅದರ ಪರಿಣಾಮ ಕಳೆದ 17 ದಿನಗಳಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ಗೆ ಸರಾಸರಿ ₹ 10 ರಷ್ಟು ಹೆಚ್ಚಾಗಿದೆ. ಮೊದಲ ನಾಲ್ಕು ದಿನಗಳಲ್ಲಿ ಇಂಧನ ಬೆಲೆಗಳನ್ನು ದಿನಕ್ಕೆ ಪ್ರತಿ ಲೀಟರ್ಗೆ ತಲಾ 80 ಪೈಸೆಯಂತೆ ಹೆಚ್ಚಿಸಲಾಗಿಯಿತು. ನಂತರದ ದಿನಗಳಲ್ಲಿ ಪೆಟ್ರೋಲ್ ಧಾರಣೆಯನ್ನು ಲೀಟರ್ಗೆ 50 ಮತ್ತು 30, ಮತ್ತೆ 80 ಪೈಸೆಯಷ್ಟು ಹೆಚ್ಚಿಸಲಾಗುತ್ತಿದೆ. ಇಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲಯಲ್ಲಿ ಏರಿಕೆ ಮಾಡಲಾಗಿಲ್ಲ.

ತೈಲ ಕಂಪನಿಗಳು ಪ್ರತಿದಿನ ಬೆಳಗ್ಗೆಯೇ ವಿವಿಧ ಪ್ರಮುಖ ನಗರಗಳ ಪೆಟ್ರೋಲ್-ಡೀಸೆಲ್ ಬೆಲೆಯನ್ನು ಬಿಡುಗಡೆ ಮಾಡುತ್ತವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಕ್ಕೆ ಇರುವ ಬೆಲೆ ಆಧಾರದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ನಿರ್ಧರಿಸಲಾಗುತ್ತದೆ. ಸ್ಥಳೀಯ ಚಿಲ್ಲರೆ ಮಾರಾಟ ದರಕ್ಕೆ ಅನುಗುಣವಾಗಿ ಪ್ರತಿ ರಾಜ್ಯದಲ್ಲಿಯೂ ಪೆಟ್ರೋಲ್-ಡೀಸೆಲ್ ದರಗಳಲ್ಲಿ ವ್ಯತ್ಯಾಸ ಆಗುತ್ತದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಬೆಸ್ಕಾಂ ಸಿಬ್ಬಂದಿ ನಿರ್ಲಕ್ಷ್ಯ; ಮನೆಯಲ್ಲಿದ್ದ ಟಿವಿ, ಫ್ರಿಡ್ಜ್, ವಾಷಿಂಗ್ ಮಷೀನ್‌ ಸುಟ್ಟು ಭಸ್ಮ

ಇದನ್ನೂ ಓದಿ: ರಷ್ಯಾ ವಾಯುಗಡಿ ಪ್ರವೇಶಿಸಿ ಉಕ್ರೇನ್​ನ ಸೇನಾ ಹೆಲಿಕಾಪ್ಟರ್: ಇಂಧನ ಸ್ಥಾವರದ ಮೇಲೆ ಬಾಂಬ್ ದಾಳಿ

Published On - 9:17 am, Fri, 8 April 22

‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ