ಹಬ್ಬದಂದು ಮಾಂಸಕ್ಕಾಗಿ 19 ಕಾಗೆಗಳನ್ನು ಕೊಂದ ದಂಪತಿ

ತಮಿಳುನಾಡಿನ ತಿರುವಳ್ಳೂರಿನಲ್ಲಿ ಹಬ್ಬದಂದು ಮಾಂಸಕ್ಕಾಗಿ 19 ಕಾಗೆಗಳನ್ನು ಕೊಂದ ದಂಪತಿಯನ್ನು ಬಂಧಿಸಲಾಗಿದೆ. ಅರಣ್ಯ ಇಲಾಖೆಗೆ ಸುಳಿವು ಸಿಕ್ಕಿದ ನಂತರ ದಂಪತಿಯ ಮನೆಯಲ್ಲಿ ಶೋಧ ನಡೆಸಿದಾಗ 19 ಸತ್ತ ಕಾಗೆಗಳು ಪತ್ತೆಯಾಗಿವೆ. ದಂಪತಿ ಬಡತನದಿಂದಾಗಿ ಈ ಕೃತ್ಯ ಎಸಗಿರಬಹುದು ಎಂದು ಅರಣ್ಯ ಇಲಾಖೆ ಶಂಕಿಸಿದೆ. ಈ ಘಟನೆಯ ಕುರಿತು ತನಿಖೆ ನಡೆಯುತ್ತಿದೆ ಮತ್ತು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಬ್ಬದಂದು ಮಾಂಸಕ್ಕಾಗಿ 19 ಕಾಗೆಗಳನ್ನು ಕೊಂದ ದಂಪತಿ
Tamil Nadu Couple Kills 19 Crows For Festival Meat
Follow us
ಅಕ್ಷತಾ ವರ್ಕಾಡಿ
|

Updated on: Dec 18, 2024 | 6:12 PM

ತಮಿಳುನಾಡು: ಹಬ್ಬದಂದು ಮಾಂಸಕ್ಕಾಗಿ ದಂಪತಿಯೊಂದು ಸುಮಾರು 19 ಕಾಗೆಗಳನ್ನು ಕೊಂದಿರುವ ಘಟನೆ ತಮಿಳುನಾಡಿನ ತಿರುವಳ್ಳೂರಿನಲ್ಲಿ ನಡೆದಿದೆ. ತಿರುವಳ್ಳೂರು ಜಿಲ್ಲೆಯ ನಾಯಪ್ಪಕ್ಕಂ ಮೀಸಲು ಪ್ರದೇಶದ ಬಳಿಯ ತಿರುಪಕ್ಕಂ ಎಂಬ ಗ್ರಾಮದಲ್ಲಿ ವಾಸವಿದ್ದ ರಮೇಶ್ ಮತ್ತು ಭೂಚಮ್ಮ ದಂಪತಿ ಕಾಗೆಗಳನ್ನು ಸಾಯಿಸುತ್ತಿರುವ ಬಗ್ಗೆ ಅರಣ್ಯ ಇಲಾಖೆಗೆ ಸುಳಿವು ಸಿಕ್ಕಿತ್ತು. ಇದರ ಆಧಾರದ ಮೇಲೆ ಅವರ ಮನೆಯಲ್ಲಿ ಶೋಧ ನಡೆಸಿದಾಗ 19 ಸತ್ತ ಕಾಗೆಗಳು ಪತ್ತೆಯಾಗಿವೆ. ಇದನ್ನು ನೋಡಿದ ಅಧಿಕಾರಿಗಳು ಬೆಚ್ಚಿಬಿದ್ದಿದ್ದಾರೆ. ಈ ನಡುವೆ ರಮೇಶ್ ಮತ್ತು ಭೂಚಮ್ಮನನ್ನು ವಿಚಾರಣೆಗೊಳಪಡಿಸಿದಾಗ ಹಬ್ಬದಂದು ಮಾಂಸಕ್ಕಾಗಿ ಕಾಗೆಗಳನ್ನು ಕೊಂದಿರುವುದು ಬೆಳಕಿಗೆ ಬಂದಿದೆ.

ಈ ಜೋಡಿ ಈಗಾಗಲೇ ಬೆಕ್ಕು, ಕಾಗೆ, ನಾಯಿ ಮುಂತಾದ ಪ್ರಾಣಿಗಳನ್ನು ಕೊಂದು ಮಾಂಸಕ್ಕಾಗಿ ಮಾರಾಟ ಮಾಡುತ್ತಿರುವ ದಂಧೆಯಲ್ಲಿರುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಸ್ಥಳೀಯ ಅಂಗಡಿಗಳಲ್ಲಿ ಕೀಟನಾಶಕಗಳನ್ನು ಖರೀದಿಸಿ ಆಹಾರಕ್ಕೆ ಸೇರಿಸಿ ಈ ಕಾಗೆಗಳನ್ನು ಕೊಂದು ಹಾಕಿರಬಹುದು ಎಂದು ಅರಣ್ಯ ಇಲಾಖೆ ಶಂಕೆ ವ್ಯಕ್ತಪಡಿಸಿದೆ. ಹೀಗಾಗಿ ಆ ಭಾಗದ ಎಲ್ಲ ಅಂಗಡಿಗಳಲ್ಲಿ ತಪಾಸಣೆ ನಡೆಸಲಾಗುತ್ತಿದೆ.

ಇದನ್ನೂ ಓದಿ: ಸೆಲ್ಫಿ ಕ್ರೇಜ್: ಕೂದಲೆಳೆ ಅಂತರದಲ್ಲಿ ಭಾರೀ ಅಪಘಾತದಿಂದ ಪಾರಾದ ಮಹಿಳೆ

ಈ ದಂಪತಿಗೆ 4 ಹೆಣ್ಣು ಮಕ್ಕಳು ಮತ್ತು 1 ಮಗ ಇದ್ದು, ಒಂದು ಮನೆಯಲ್ಲಿ 7 ಜನರು ವಾಸಿಸುತ್ತಿದ್ದು, ಕುಟುಂಬವು ಆರ್ಥಿಕವಾಗಿ ಹಿಂದುಳಿದಿರುವ ಕಾರಣ ಬಡತನದಿಂದ ಈ ಕೃತ್ಯದಲ್ಲಿ ಭಾಗಿಯಾಗಿರಬಹುದು ಎಂದು ಅರಣ್ಯ ಇಲಾಖೆ ತಿಳಿಸಿದೆ. ಈ ವೇಳೆ ಕಾಗೆಗಳನ್ನು ಕೊಂದಿರುವ ಘಟನೆಯನ್ನು ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಆರೋಗ್ಯ ಕಾರ್ಯದರ್ಶಿ ಸುಪ್ರಿಯಾ ಸಾಹು ತಿಳಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Amit Shah Press Meet Live:ಅಮಿತ್​ ಶಾ ತುರ್ತು ಸುದ್ದಿಗೋಷ್ಠಿ ನೇರಪ್ರಸಾರ
Amit Shah Press Meet Live:ಅಮಿತ್​ ಶಾ ತುರ್ತು ಸುದ್ದಿಗೋಷ್ಠಿ ನೇರಪ್ರಸಾರ
ತಲೆ ಚಚ್ಚಿಕೊಂಡು ಕಣ್ಣೀರು ಹಾಕಿದ ಚೈತ್ರಾ ಕುಂದಾಪುರ
ತಲೆ ಚಚ್ಚಿಕೊಂಡು ಕಣ್ಣೀರು ಹಾಕಿದ ಚೈತ್ರಾ ಕುಂದಾಪುರ
ಧರಣಿ ಮರೆತು ಸಚಿವೆ ಜತೆ ಸೆಲ್ಫೀ ತೆಗೆದುಕೊಂಡ ಅಂಗನವಾಡಿ ಕಾರ್ಯಕರ್ತೆಯರು!
ಧರಣಿ ಮರೆತು ಸಚಿವೆ ಜತೆ ಸೆಲ್ಫೀ ತೆಗೆದುಕೊಂಡ ಅಂಗನವಾಡಿ ಕಾರ್ಯಕರ್ತೆಯರು!
ಬೆಂಗಳೂರು ಬೆಳೆದರೆ ಅದು ರಾಜ್ಯದ ಬೆಳವಣಿಗೆ ಅಲ್ಲ: ಲಕ್ಷ್ಮಣ ಸವದಿ
ಬೆಂಗಳೂರು ಬೆಳೆದರೆ ಅದು ರಾಜ್ಯದ ಬೆಳವಣಿಗೆ ಅಲ್ಲ: ಲಕ್ಷ್ಮಣ ಸವದಿ
ಮತ್ತೇ ಮುನ್ನೆಲೆಗೆ ಬಂದ ಐಎಎಸ್ ಮತ್ತು ಐಪಿಎಸ್ ಅಧಿಕಾರಿಣಿಗಳ ಜಗಳ
ಮತ್ತೇ ಮುನ್ನೆಲೆಗೆ ಬಂದ ಐಎಎಸ್ ಮತ್ತು ಐಪಿಎಸ್ ಅಧಿಕಾರಿಣಿಗಳ ಜಗಳ
ಯತ್ನಾಳ್ ಆರೋಪಗಳಿಗೆ ಕೌಂಟರ್ ನೀಡಿದ ಖರ್ಗೆ ಮತ್ತು ಎಂಬಿ ಪಾಟೀಲ್
ಯತ್ನಾಳ್ ಆರೋಪಗಳಿಗೆ ಕೌಂಟರ್ ನೀಡಿದ ಖರ್ಗೆ ಮತ್ತು ಎಂಬಿ ಪಾಟೀಲ್
ಉತ್ತರ ಕರ್ನಾಟಕದ ಭವ್ಯ ಪರಂಪರೆಯನ್ನು ಸದನದಲ್ಲಿ ವಿವರಿಸಿದ ಯತ್ನಾಳ್
ಉತ್ತರ ಕರ್ನಾಟಕದ ಭವ್ಯ ಪರಂಪರೆಯನ್ನು ಸದನದಲ್ಲಿ ವಿವರಿಸಿದ ಯತ್ನಾಳ್
ಬಿಳಿಗಿರಿರಂಗನಬೆಟ್ಟ ಮುಖ್ಯರಸ್ತೆಯಲ್ಲಿ ಕಾಡಾನೆಗಳ ಹಿಂಡು, ಹುಲಿ ಪ್ರತ್ಯಕ್ಷ
ಬಿಳಿಗಿರಿರಂಗನಬೆಟ್ಟ ಮುಖ್ಯರಸ್ತೆಯಲ್ಲಿ ಕಾಡಾನೆಗಳ ಹಿಂಡು, ಹುಲಿ ಪ್ರತ್ಯಕ್ಷ
ನಿವೃತ್ತಿ ಘೋಷಣೆಗೂ ಮುನ್ನ ವಿರಾಟ್ ಕೊಹ್ಲಿ ಮುಂದೆ ಕಣ್ಣೀರಿಟ್ಟ ಅಶ್ವಿನ್
ನಿವೃತ್ತಿ ಘೋಷಣೆಗೂ ಮುನ್ನ ವಿರಾಟ್ ಕೊಹ್ಲಿ ಮುಂದೆ ಕಣ್ಣೀರಿಟ್ಟ ಅಶ್ವಿನ್
ಸರ್ಕಾರೀ ಆಸ್ಪತ್ರೆಗಳ ವಿಷಯದಲ್ಲಿ ನೆಗೆಟಿವ್ ಮಾತು ಸರಿಯಲ್ಲ: ಕೋನರೆಡ್ಡಿ
ಸರ್ಕಾರೀ ಆಸ್ಪತ್ರೆಗಳ ವಿಷಯದಲ್ಲಿ ನೆಗೆಟಿವ್ ಮಾತು ಸರಿಯಲ್ಲ: ಕೋನರೆಡ್ಡಿ