AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಬ್ಬದಂದು ಮಾಂಸಕ್ಕಾಗಿ 19 ಕಾಗೆಗಳನ್ನು ಕೊಂದ ದಂಪತಿ

ತಮಿಳುನಾಡಿನ ತಿರುವಳ್ಳೂರಿನಲ್ಲಿ ಹಬ್ಬದಂದು ಮಾಂಸಕ್ಕಾಗಿ 19 ಕಾಗೆಗಳನ್ನು ಕೊಂದ ದಂಪತಿಯನ್ನು ಬಂಧಿಸಲಾಗಿದೆ. ಅರಣ್ಯ ಇಲಾಖೆಗೆ ಸುಳಿವು ಸಿಕ್ಕಿದ ನಂತರ ದಂಪತಿಯ ಮನೆಯಲ್ಲಿ ಶೋಧ ನಡೆಸಿದಾಗ 19 ಸತ್ತ ಕಾಗೆಗಳು ಪತ್ತೆಯಾಗಿವೆ. ದಂಪತಿ ಬಡತನದಿಂದಾಗಿ ಈ ಕೃತ್ಯ ಎಸಗಿರಬಹುದು ಎಂದು ಅರಣ್ಯ ಇಲಾಖೆ ಶಂಕಿಸಿದೆ. ಈ ಘಟನೆಯ ಕುರಿತು ತನಿಖೆ ನಡೆಯುತ್ತಿದೆ ಮತ್ತು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಬ್ಬದಂದು ಮಾಂಸಕ್ಕಾಗಿ 19 ಕಾಗೆಗಳನ್ನು ಕೊಂದ ದಂಪತಿ
Tamil Nadu Couple Kills 19 Crows For Festival Meat
ಅಕ್ಷತಾ ವರ್ಕಾಡಿ
|

Updated on: Dec 18, 2024 | 6:12 PM

Share

ತಮಿಳುನಾಡು: ಹಬ್ಬದಂದು ಮಾಂಸಕ್ಕಾಗಿ ದಂಪತಿಯೊಂದು ಸುಮಾರು 19 ಕಾಗೆಗಳನ್ನು ಕೊಂದಿರುವ ಘಟನೆ ತಮಿಳುನಾಡಿನ ತಿರುವಳ್ಳೂರಿನಲ್ಲಿ ನಡೆದಿದೆ. ತಿರುವಳ್ಳೂರು ಜಿಲ್ಲೆಯ ನಾಯಪ್ಪಕ್ಕಂ ಮೀಸಲು ಪ್ರದೇಶದ ಬಳಿಯ ತಿರುಪಕ್ಕಂ ಎಂಬ ಗ್ರಾಮದಲ್ಲಿ ವಾಸವಿದ್ದ ರಮೇಶ್ ಮತ್ತು ಭೂಚಮ್ಮ ದಂಪತಿ ಕಾಗೆಗಳನ್ನು ಸಾಯಿಸುತ್ತಿರುವ ಬಗ್ಗೆ ಅರಣ್ಯ ಇಲಾಖೆಗೆ ಸುಳಿವು ಸಿಕ್ಕಿತ್ತು. ಇದರ ಆಧಾರದ ಮೇಲೆ ಅವರ ಮನೆಯಲ್ಲಿ ಶೋಧ ನಡೆಸಿದಾಗ 19 ಸತ್ತ ಕಾಗೆಗಳು ಪತ್ತೆಯಾಗಿವೆ. ಇದನ್ನು ನೋಡಿದ ಅಧಿಕಾರಿಗಳು ಬೆಚ್ಚಿಬಿದ್ದಿದ್ದಾರೆ. ಈ ನಡುವೆ ರಮೇಶ್ ಮತ್ತು ಭೂಚಮ್ಮನನ್ನು ವಿಚಾರಣೆಗೊಳಪಡಿಸಿದಾಗ ಹಬ್ಬದಂದು ಮಾಂಸಕ್ಕಾಗಿ ಕಾಗೆಗಳನ್ನು ಕೊಂದಿರುವುದು ಬೆಳಕಿಗೆ ಬಂದಿದೆ.

ಈ ಜೋಡಿ ಈಗಾಗಲೇ ಬೆಕ್ಕು, ಕಾಗೆ, ನಾಯಿ ಮುಂತಾದ ಪ್ರಾಣಿಗಳನ್ನು ಕೊಂದು ಮಾಂಸಕ್ಕಾಗಿ ಮಾರಾಟ ಮಾಡುತ್ತಿರುವ ದಂಧೆಯಲ್ಲಿರುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಸ್ಥಳೀಯ ಅಂಗಡಿಗಳಲ್ಲಿ ಕೀಟನಾಶಕಗಳನ್ನು ಖರೀದಿಸಿ ಆಹಾರಕ್ಕೆ ಸೇರಿಸಿ ಈ ಕಾಗೆಗಳನ್ನು ಕೊಂದು ಹಾಕಿರಬಹುದು ಎಂದು ಅರಣ್ಯ ಇಲಾಖೆ ಶಂಕೆ ವ್ಯಕ್ತಪಡಿಸಿದೆ. ಹೀಗಾಗಿ ಆ ಭಾಗದ ಎಲ್ಲ ಅಂಗಡಿಗಳಲ್ಲಿ ತಪಾಸಣೆ ನಡೆಸಲಾಗುತ್ತಿದೆ.

ಇದನ್ನೂ ಓದಿ: ಸೆಲ್ಫಿ ಕ್ರೇಜ್: ಕೂದಲೆಳೆ ಅಂತರದಲ್ಲಿ ಭಾರೀ ಅಪಘಾತದಿಂದ ಪಾರಾದ ಮಹಿಳೆ

ಈ ದಂಪತಿಗೆ 4 ಹೆಣ್ಣು ಮಕ್ಕಳು ಮತ್ತು 1 ಮಗ ಇದ್ದು, ಒಂದು ಮನೆಯಲ್ಲಿ 7 ಜನರು ವಾಸಿಸುತ್ತಿದ್ದು, ಕುಟುಂಬವು ಆರ್ಥಿಕವಾಗಿ ಹಿಂದುಳಿದಿರುವ ಕಾರಣ ಬಡತನದಿಂದ ಈ ಕೃತ್ಯದಲ್ಲಿ ಭಾಗಿಯಾಗಿರಬಹುದು ಎಂದು ಅರಣ್ಯ ಇಲಾಖೆ ತಿಳಿಸಿದೆ. ಈ ವೇಳೆ ಕಾಗೆಗಳನ್ನು ಕೊಂದಿರುವ ಘಟನೆಯನ್ನು ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಆರೋಗ್ಯ ಕಾರ್ಯದರ್ಶಿ ಸುಪ್ರಿಯಾ ಸಾಹು ತಿಳಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ