AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಆಕಸ್ಮಿಕವಾಗಿ ಹುಂಡಿಗೆ ಬಿದ್ದ ಐಫೋನ್;‌ ಸಿಮ್‌ ಕೊಡ್ಬೋದು ಆದ್ರೆ ಫೋನ್‌ ಕೊಡಲು ಸಾಧ್ಯವಿಲ್ಲ ಎಂದ ದೇವಸ್ಥಾನ ಆಡಳಿತ ಮಂಡಳಿ

ಇಲ್ಲೊಂದು ವಿಚಿತ್ರ ಪ್ರಕರಣ ಬೆಳಕಿಗೆ ಬಂದಿದ್ದು, ಭಕ್ತರೊಬ್ಬರು ದೇವಾಲಯದ ಹುಂಡಿಗೆ ಕಾಣಿಕೆ ಹಾಕುವ ಸಂದರ್ಭದಲ್ಲಿ ಅವರ ಜೇಬಿನಲ್ಲಿದ್ದ ಐಫೋನ್‌ ಆಕಸ್ಮಿಕವಾಗಿ ಹುಂಡಿಗೆ ಬಿದ್ದಿದೆ. ಅವರು ಕೂಡಲೇ ದೇವಾಲಯದ ಅಧಿಕಾರಿಗಳನ್ನು ಸಂಪರ್ಕಿಸಿದ್ದು, ಒಮ್ಮೆ ಹುಂಡಿಗೆ ಬಿದ್ದ ವಸ್ತು ಅದು ದೇವರಿಗೆ ಸಲ್ಲುತ್ತದೆ ಅದನ್ನು ವಾಪಸ್‌ ನೀಡಲಾಗುವುದಿಲ್ಲ ಎಂದು ದೇವಸ್ಥಾನ ಆಡಳಿತ ಮಂಡಳಿ ಫೋನ್‌ ಕೊಡಲು ನಿರಾಕರಿಸಿದೆ. ಈ ಸುದ್ದಿ ಇದೀಗ ಸಖತ್‌ ವೈರಲ್‌ ಆಗುತ್ತಿದೆ.

Viral: ಆಕಸ್ಮಿಕವಾಗಿ ಹುಂಡಿಗೆ ಬಿದ್ದ ಐಫೋನ್;‌ ಸಿಮ್‌ ಕೊಡ್ಬೋದು ಆದ್ರೆ ಫೋನ್‌ ಕೊಡಲು ಸಾಧ್ಯವಿಲ್ಲ ಎಂದ ದೇವಸ್ಥಾನ ಆಡಳಿತ ಮಂಡಳಿ
Devotee's Iphone Dropped Into Donation Box Declared Temple Property
ಮಾಲಾಶ್ರೀ ಅಂಚನ್​
| Edited By: |

Updated on: Dec 22, 2024 | 12:16 PM

Share

ಸಾಮಾನ್ಯವಾಗಿ ನಾವೆಲ್ಲರೂ ದೇವಸ್ಥಾನಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ದೇವರ ದರ್ಶನ ಪಡೆದು ಕಾಣಿಕೆ ಹುಂಡಿಗೆ ಹಣ ಹಾಕುತ್ತೇವೆ ಅಲ್ವಾ. ಅದೇ ರೀತಿ ಇಲ್ಲೊಬ್ರು ಭಕ್ತರು ಕೂಡಾ ದೇವಾಲಯವೊಂದಕ್ಕೆ ದೇವರ ದರ್ಶನ ಪಡೆಯಲು ಬಂದಿದ್ದ ಸಂದರ್ಭದಲ್ಲಿ ಕಾಣಿಕೆ ಹುಂಡಿಗೆ ಹಣ ಹಾಕಲು ಮುಂದಾಗಿದ್ದಾರೆ. ಹೀಗೆ ಕಾಣಿಕೆ ಹಾಕುವ ಸಂದರ್ಭದಲ್ಲಿ ಅವರ ಜೇಬಿನಲ್ಲಿದ್ದ ದುಬಾರಿ ಬೆಲೆಯ ಐಫೋನ್‌ ಕೂಡಾ ಆಕಸ್ಮಿಕವಾಗಿ ಹುಂಡಿಗೆ ಜಾರಿ ಬಿದ್ದಿದೆ. ಅವರು ಕೂಡಲೇ ದೇವಾಲಯದ ಅಧಿಕಾರಿಗಳನ್ನು ಸಂಪರ್ಕಿಸಿದ್ದು, ಒಮ್ಮೆ ಹುಂಡಿಗೆ ಬಿದ್ದ ವಸ್ತು ಅದು ದೇವರಿಗೆ ಸಲ್ಲುತ್ತದೆ ಅದನ್ನು ವಾಪಸ್‌ ನೀಡಲಾಗುವುದಿಲ್ಲ ಎಂದು ದೇವಸ್ಥಾನ ಆಡಳಿತ ಮಂಡಳಿ ಫೋನ್‌ ಕೊಡಲು ನಿರಾಕರಿಸಿದೆ. ಈ ಸುದ್ದಿ ಇದೀಗ ಸಖತ್‌ ವೈರಲ್‌ ಆಗುತ್ತಿದೆ.

ಈ ಘಟನೆ ತಮಿಳುನಾಡಿನ ತಿರುಪೋರೂರಿನ ಅರುಲ್ಮಿಗು ಕಂದಸ್ವಾಮಿ ದೇವಸ್ಥಾನದಲ್ಲಿ ನಡೆದಿದ್ದು, ಇತ್ತೀಚಿಗೆ ಈ ದೇವಸ್ಥಾನಕ್ಕೆ ಭಕ್ತರೊಬ್ಬರು ಭೇಟಿ ನೀಡಿದ್ದಂತಹ ಸಂದರ್ಭದಲ್ಲಿ ಆಕಸ್ಮಿಕವಾಗಿ ಅವರ ದುಬಾರಿ ಬೆಲೆಯ ಐಫೋನ್‌ ಕಾಣಿಕೆ ಹುಂಡಿಗೆ ಜಾರಿ ಬಿದ್ದಿದೆ. ಫೋನನ್ನು ಹಿಂದಿರುಗಿಸುವಂತೆ ಕೇಳಿದಾಗ, ಹುಂಡಿಗೆ ಬಿದ್ದ ಯಾವುದೇ ವಸ್ತುವನ್ನು ಹಿಂದಿರುಗಿಸಲು ಸಾಧ್ಯವಿಲ್ಲ ಎಂದು ದೇವಾಲಯದ ಆಡಳಿತ ಮಂಡಳಿ ಹೇಳಿಕೆ ನೀಡಿದೆ.

ಟೈಮ್ಸ್‌ ಆಫ್‌ ಇಂಡಿಯಾ ವರದಿ ಪ್ರಕಾರ, ವಿನಾಯಕಪುರಂ ನಿವಾಸಿ ದಿನೇಶ್‌ ಅವರು ತಮ್ಮ ಕುಟುಂಬದೊಂದಿಗೆ ದೇವಾಲಯಕ್ಕೆ ಪ್ರಾರ್ಥನೆ ಸಲ್ಲಿಸಲು ಬಂದಿದ್ದರು. ಹೀಗೆ ಪೂಜೆ ಮುಗಿಸಿ ಹುಂಡಿಗೆ ಕಾಣಿಕೆ ಹಾಕಲು ಜೇಬಿನಿಂದ ಹಣ ತೆಗೆಯುವ ಸಂದರ್ಭದಲ್ಲಿ ಜೇಬಿನಲ್ಲಿದ್ದ ಐಫೋನ್‌ ಜಾರಿ ಹುಂಡಿಗೆ ಬಿದ್ದಿದೆ. ಕೂಡಲೇ ದಿನೇಶ್‌ ದೇವಸ್ಥಾನದ ಅಧಿಕಾರಿಗಳನ್ನು ಸಂಪರ್ಕಿಸಿ ತಮ್ಮ ಫೋನ್‌ ವಾಪಸ್‌ ನೀಡುವಂತೆ ಮನವಿ ಮಾಡಿದ್ದಾರೆ. ಆದರೆ ದೇವಾಲಯದ ಆಡಳಿತ ಮಂಡಳಿಯು ದೇವಸ್ಥಾನದ ಸಂಪ್ರದಾಯವನ್ನು ಉಲ್ಲೇಖಿಸಿ, ಹುಂಡಿಯಲ್ಲಿ ಹಾಕುವ ಯಾವುದೇ ವಸ್ತುವನ್ನು ವಾಪಸ್‌ ನೀಡಲಾಗುವುದಿಲ್ಲ, ಅದೆಲ್ಲವೂ ದೇವರಿಗೆ ಸಲ್ಲುತ್ತದೆ. ಅದು ಆಕಸ್ಮಿಕವಾಗಿ ಬಿದ್ದರೂ ಹಿಂದಿರುಗಿಸಲಾಗುವುದಿಲ್ಲ ಎಂದು ಹೇಳಿದೆ.

ಇದನ್ನೂ ಓದಿ: ಮುಖೇಶ್​​ ಅಂಬಾನಿಯ ಕಿರಿಯ ಸೊಸೆ ತೊಟ್ಟ ಈ ಉಡುಪಿನ ಬೆಲೆ ಬರೋಬ್ಬರಿ 2.54 ಲಕ್ಷ ರೂ.

ಇದರಿಂದ ನಿರಾಶೆಗೊಂಡ ದಿನೇಶ್‌ ಧಾರ್ಮಿಕ ದತ್ತಿ ಇಲಾಖೆ ಅಧಿಕಾರಿಗಳಿಗೆ ದೂರು ಸಲ್ಲಿಸಿ ಹುಂಡಿಯನ್ನು ಯಾವಾಗ ತೆರೆಯಲಾಗುತ್ತದೆ ಎಂಬ ಮಾಹಿತಿಯನ್ನು ಪಡೆದರು. ಅಂತಿಮವಾಗಿ ಎರಡು ತಿಂಗಳ ಬಳಿಕ ಶುಕ್ರವಾರ (ಡಿ.20) ಐಫೋನ್‌ ಸಿಗುವ ಭರವಸೆಯಲ್ಲಿ ದಿನೇಶ್‌ ದೇವಸ್ಥಾನಕ್ಕೆ ಬಂದಿದ್ದು, ಯಾವುದೇ ಕಾರಣಕ್ಕೂ ಹುಂಡಿಯಲ್ಲಿ ಬಿದ್ದ ಫೋನನ್ನು ಕೊಡಲು ಸಾಧ್ಯವಿಲ್ಲ ಬೇಕಾದರೆ ಸಿಮ್‌ ಅನ್ನು ತೆಗೆದುಕೊಳ್ಳಿ ಎಂದು ಆಡಳಿತ ಮಂಡಳಿಯ ಅಧಿಕಾರಿಗಳು ಹೇಳಿದ್ದಾರೆ. ಈ ಸುದ್ದಿ ಇದೀಗ ಭಾರಿ ಚರ್ಚೆಯನ್ನು ಹುಟ್ಟು ಹಾಕಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!