AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಿಯಕರನೊಂದಿಗೆ ಓಡಿ ಹೋಗಲು ಮುಂದಾದ ಯುವತಿ; ಮಗಳ ಕಾಲಿಗೆ ಬಿದ್ದು ಕಣ್ಣೀರಿಟ್ಟ ತಂದೆ

ಸೋಷಿಯಲ್‌ ಮೀಡಿಯಾದಲ್ಲಿ ಪ್ರತಿನಿತ್ಯ ಹಲವಾರು ದೃಶ್ಯಗಳು ವೈರಲ್‌ ಆಗುತ್ತಿರುತ್ತವೆ. ಅವುಗಳಲ್ಲಿ ಕೆಲವೊಂದು ದೃಶ್ಯಗಳು ನಮ್ಮ ಕಣ್ಣಂಚಲ್ಲಿ ನೀರು ತರಿಸುತ್ತವೆ. ಅಂತಹದೊಂದು ಮನಕಲಕುವ ದೃಶ್ಯ ಇದೀಗ ವೈರಲ್‌ ಆಗಿದ್ದು, ಪ್ರಿಯಕರನೊಂದಿಗೆ ಓಡಿ ಹೋಗಲು ಮುಂದಾದ ಮಗಳ ಕಾಲಿಗೆ ಬಿದ್ದು, ನಮ್ಮನ್ನ ಬಿಟ್‌ ಹೋಗ್ಬೇಡ ಮಗಳೇ ಎಂದು ಗೋಗರೆದಿದ್ದಾರೆ. ಅಷ್ಟಕ್ಕೂ ಇದು ನೈಜ ಘಟನೆಯೇ ಅಥವಾ ಸ್ಕ್ರಿಪ್ಟೆಡ್‌ ವಿಡಿಯೋನಾ? ಈ ಕುರಿತ ಮಾಹಿತಿ ಇಲ್ಲಿದೆ.

ಪ್ರಿಯಕರನೊಂದಿಗೆ ಓಡಿ ಹೋಗಲು ಮುಂದಾದ ಯುವತಿ; ಮಗಳ ಕಾಲಿಗೆ ಬಿದ್ದು ಕಣ್ಣೀರಿಟ್ಟ ತಂದೆ
Father Pleads With Daughter To Not Go With Boyfriend
ಮಾಲಾಶ್ರೀ ಅಂಚನ್​
| Edited By: |

Updated on:Mar 23, 2025 | 12:23 PM

Share

ಇತ್ತೀಚಿನ ದಿನಗಳಲ್ಲಿ ಹೆಚ್ಚಿನವರು ಪ್ರೇಮ ವಿವಾಹವಾಗಲು (Love marriage) ಇಷ್ಟಪಡುತ್ತಾರೆ. ಕೆಲವರು ತಂದೆ, ತಾಯಿ, ಕುಟುಂಬದವರನ್ನು ಒಪ್ಪಿಸಿ ಅದ್ದೂರಿಯಾಗಿ ಮದುವೆಯಾದರೆ, ಇನ್ನೂ ಕೆಲವರು ತಂದೆ-ತಾಯಿ ಒಪ್ಪಿಲ್ಲ ಎಂದು ಮನೆ ಬಿಟ್ಟು ಓಡಿ ಹೋಗಿ ಮದುವೆಯಾಗುತ್ತಾರೆ. ಅದೇ ರೀತಿ ತಮಿಳುನಾಡಿನಲ್ಲೊಂದು (Tamil Nadu) ಘಟನೆ ನಡೆದಿದ್ದು, ಯುವತಿಯೊಬ್ಬಳು ನಡು ರಾತ್ರಿಯಲ್ಲಿ ಪ್ರಿಯಕರನೊಂದಿಗೆ ಓಡಿ ಹೋಗಲು ಯತ್ನಿಸಿದ್ದಾಳೆ. ಆ ಸಂದರ್ಭದಲ್ಲಿ ಅಸಹಾಯಕ ತಂದೆ ಮಗಳ ಕಾಲಿಗೆ ಬಿದ್ದು, ದಯವಿಟ್ಟು ನಮ್ಮನ್ನು ಬಿಟ್‌ ಹೋಗ್ಬೇಡ ಮಗಳೇ ಎಂದು ಗೋಗರೆದಿದ್ದಾರೆ. ಇಲ್ಲಿ ಅಪ್ಪ ತನಗೆ ಮಗಳು ಬೇಕೆಂದು ಬಯಸಿದರೆ, ಮಗಳು ಮಾತ್ರ ಹೆತ್ತು-ಹೊತ್ತು ಸಾಕಿ ತಂದೆ ತಾಯಿಯನ್ನೇ ಬಿಟ್ಟು ನೆನ್ನೆ ಮೊನ್ನೆ ಪರಿಚಯವಾದ ಯುವಕನೊಂದಿಗೆ ಓಡಿ ಹೋಗಲು ಮುಂದಾಗಿದ್ದಾಳೆ. ಈ ನಾಟಕೀಯ ದೃಶ್ಯ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ.

ಮಗಳು ತನ್ನ ಗೆಳೆಯನೊಂದಿಗೆ ನಡು ರಾತ್ರಿ ಓಡಿ ಹೋಗಲು ಯತ್ನಿಸಿದಾಗ, ಕಣ್ಣೀರಿಡುತ್ತಾ ಆಕೆಯ ಹಿಂದೆಯೇ ಬಂದ ತಂದೆ ಮಗಳ ಕಾಲಿಗೆ ಬಿದ್ದು ನಮ್ಮನ್ನು ಬಿಟ್‌ ಹೋಗ್ಬೇಡ ಮಗಳೇ ಎಂದು ಬೇಡಿಕೊಂಡಿದ್ದಾರೆ. ಈ ಮನಕಲಕುವ ದೃಶ್ಯವನ್ನು ಕಂಡು ನೆಟ್ಟಿಗರು ಭಾವುಕರಾಗಿದ್ದಾರೆ. ತಮಿಳುನಾಡಿನಲ್ಲಿ ನಡೆದ ಘಟನೆಯ ಈ ವಿಡಿಯೋವನ್ನು ಪರಿಶೀಲಿಸಿದಾಗ ಇದು ನೈಜ ಘಟನೆಯಲ್ಲ ಬದಲಿಗೆ ಇದೊಂದು ಶಾರ್ಟ್‌ ಫಿಲ್ಮ್‌ ಎಂಬುದು ತಿಳಿದು ಬಂದಿದೆ.

ಈ ಕುರಿತ ವಿಡಿಯೋವನ್ನು UttarandhraNow ಹೆಸರಿನ ಎಕ್ಸ್‌ ಖಾತೆಯಲ್ಲಿ ಶೇರ್‌ ಮಾಡಲಾಗಿದೆ. ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ನಡು ರಾತ್ರಿಯಲ್ಲಿ ಯುವತಿಯೊಬ್ಬಳು ತನ್ನ ತಂದೆಯ ಮಾತನ್ನು ದಿಕ್ಕರಿಸಿ ಪ್ರಿಯಕರನೊಂದಿಗೆ ಓಡಿ ಹೋಗಲು ಯತ್ನಿಸುತ್ತಿರುವ ದೃಶ್ಯವನ್ನು ಕಾಣಹುದು. ಯುವತಿಯ ಹಿಂದೆಯೇ ಹೋದ ತಂದೆ ಆಕೆಯ ಕಾಲಿಗೆ ಬಿದ್ದು, ದಯವಿಟ್ಟು ನಮ್ಮನ್ನು ಬಿಟ್‌ ಹೋಗ್ಬೇಡ ಮಗಳೇ ಎಂದು ಗೋಗರೆಯುತ್ತಿರುವ ಹೃದಯ ವಿದ್ರಾವಕ ದೃಶ್ಯವನ್ನು ಕಾಣಬಹುದು.

ಮತ್ತಷ್ಟು ಓದಿ: Viral: ತಾಯಿ ಮಗನ ಈ ಹಾಡಿನ ಮೋಡಿಗೆ ಫಿದಾ ಆಗದವರೇ ಇಲ್ಲ

ಮಾರ್ಚ್‌ 22 ರಂದು ಶೇರ್‌ ಮಾಡಲಾದ ಈ ವಿಡಿಯೋ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಇದು ನಿಜವಲ್ಲ, ಕಿರು ಚಿತ್ರವಾಗಿದೆʼ ಎಂಬ ಕಾಮೆಂಟ್‌ ಬರೆದುಕೊಂಡಿದೆ. ಇನ್ನೊಬ್ಬ ಬಳಕೆದಾರರು ʼಸಾಕಿ ಸಲುಹಿದ ತಂದೆ-ತಾಯಿಯೇ ಬೇಡವಾದರೆʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼಇದು ಸ್ಕ್ರಿಪ್ಟೆಡ್‌ ವಿಡಿಯೋʼ ಎಂದು ಹೇಳಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:22 pm, Sun, 23 March 25

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!