AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನದಲ್ಲಿ ಮದುವೆಯಾದರೂ ಕೊವಿಡ್​ ನಿಯಮ ಉಲ್ಲಂಘಿಸಿದ್ದಕ್ಕೆ ಶುರುವಾಯ್ತು ತನಿಖೆ

ವಿಮಾನದಲ್ಲಿ ಮದುವೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದ್ದಂತೆಯೇ ಬಾರೀ ಚರ್ಚೆಗೆ ದಾರಿ ಮಾಡಿಕೊಟ್ಟಿದೆ. ಕೊವಿಡ್​ ಸುರಕ್ಷತಾ ನಿಯಮಗಳ ಉಲ್ಲಂಘನೆ ಮಾಡಿದ್ದರಿಂದ ಈ ಕುರಿತಂತೆ ತನಿಖೆ ನಡೆಯುತ್ತಿದೆ.

ವಿಮಾನದಲ್ಲಿ ಮದುವೆಯಾದರೂ ಕೊವಿಡ್​ ನಿಯಮ ಉಲ್ಲಂಘಿಸಿದ್ದಕ್ಕೆ ಶುರುವಾಯ್ತು ತನಿಖೆ
ಕೊವಿಡ್​ ನಿರ್ಬಂಧನೆ ತಪ್ಪಿಸಲು ವಿಮಾನದಲ್ಲಿ ಮದುವೆಯಾದ ಮಧುರೈ ಜೋಡಿ
shruti hegde
|

Updated on: May 24, 2021 | 4:40 PM

Share

ಕೊವಿಡ್​ ನಿರ್ಬಂಧಗಳನ್ನು ತಪ್ಪಿಸಿ ವಿಮಾನದಲ್ಲಿ ಮದುವೆಯಾದ ಮಧುರೈನ ಜೋಡಿಗಳಿಗೆ ಇದೀಗ ಸಂಕಷ್ಟ ಎದುರಾದಂತಿದೆ. ಮದುವೆಯಾಗು ಪ್ರಯತ್ನದಲ್ಲೇನೋ ಗೆದ್ದರು. ಆದರೀಗ, ಮದುವೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದ್ದಂತೆಯೇ ಬಾರೀ ಚರ್ಚೆಗೆ ದಾರಿ ಮಾಡಿಕೊಟ್ಟಿದೆ. ಕೊವಿಡ್​ ಸುರಕ್ಷತಾ ನಿಯಮಗಳ ಉಲ್ಲಂಘನೆ ಮಾಡಿದ್ದರಿಂದ ಈ ಕುರಿತಂತೆ ತನಿಖೆ ನಡೆಯುತ್ತಿದೆ.

ಮಧುರೈ ಜೋಡಿ ಎರಡು ಗಂಟೆಗಳ ಕಾಲ ವಿಮಾನವನ್ನು ಬಾಡಿಗೆ ಖರೀದಿಸಿ ಮದುವೆಯಾಗಿದ್ದಾರೆ. ಆದರೆ ವಿಡಿಯೋದಲ್ಲಿ ಗಮನಿಸುವಂತೆ ಯಾರೂ ಕೂಡಾ ಕೊವಿಡ್​ ನಿಯಮಾವಳಿಗಳನ್ನು ಪಾಲಿಸಿಲ್ಲ. ಈ ಕಾರಣದಿಂದಾಗಿ ವಿಚಾರಣೆಯ ಬಳಿಕ ಸ್ಪೈಸ್​ ಜೆಟ್​ ವಿಮಾನ ಸಿಬ್ಬಂದಿಯನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ಎಎನ್​ಐ ಸುದ್ದಿ ಸಂಸ್ಥೆ ತಿಳಿಸಿದೆ. ಪದೇ ಪದೇ ವಿನಂತಿಸಿದರೂ ಕೂಡಾ ಪ್ರಯಾಣಿಕರು ನಿಯಮಗಳನ್ನು ಪಾಲಿಸಲಿಲ್ಲ ಎಂದು ಸ್ಪೈಸ್​ ಜೆಟ್​ ಹೇಳಿದ್ದರಿಂದ ವಧು-ವರ ಮತ್ತು ಅವರ ಕುಟುಂಬಸ್ಥರು ಕ್ರಮ ಎದುರಿಸಬೇಕಾಗುತ್ತದೆ.

ಲಾಕ್​ಡೌನ್​ ಜಾರಿಯಲ್ಲಿರುವುದರಿಂದ ತಮಿಳುನಾಡಿನ ಮಧುರೈನ ಜೋಡಿಗಳು ಬೆಂಗಳೂರಿಗೆ ತಲುಪುವ ವಿಮಾನವನ್ನು ಬಾಡಿಗೆ ಪಡೆದು ಮಾರ್ಗ ಮಧ್ಯದಲ್ಲಿ ಮದುವೆಯಾದರು. ಮದುವೆ ಆಗುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಒಂದು ವಿಡಿಯೋದಲ್ಲಿ ಕ್ಯಾಮರಾಕ್ಕೆ ಮುಖ ಮಾಡಿ ವಧುವಿಗೆ ವರ ಮಂಗಳಸೂತ್ರ ಕಟ್ಟುವುದನ್ನು ನೋಡಬಹುದು. ಆ ವಿಡಿಯೋದಲ್ಲಿ ಜೋಡಿಗಳ ಹಿಂದೆ ನಿಂತಿರುವ ಜನರೆಲ್ಲರೂ ಕಾಣುತ್ತಾರೆ. ಆದರೆ ಹೆಚ್ಚಿನವರಾರೂ ಕೂಡಾ ಮುಖಗವಸು ಧರಿಸಿರುವುದಿಲ್ಲ ಎಂಬುದು ಬಹಿರಂಗವಾಗಿದೆ.

ಡೈರೆಕ್ಟರೇಟ್​ ಜನರಲ್​ ಆಫ್​ ಸಿವಿಲ್​ ಏವಿಯೇಷನ್​(ಡಿಜಿಸಿಎ) ತಂಡವು ವಿಮಾನದಲ್ಲಿ ನಡೆದ ಮದುವೆಯ ಕುರಿತಾಗಿ ತನಿಖೆಯನ್ನು ಪ್ರಾರಂಭಿಸಿದೆ. ವಿಮಾನ ನಿಲ್ದಾಣ ಪ್ರಾಧಿಕಾರ ಮತ್ತು ವಿಮಾನದ ಸಂಪೂರ್ಣ ಮಾಹಿತಿಯನ್ನು ಕಲೆಹಾಕುತ್ತಿದೆ. ಕೊವಿಡ್​ ಸುರಕ್ಷತಾ ಕ್ರಮದ ಉಲ್ಲಂಘನೆಯ ವಿರುದ್ಧ ದೂರು ದಾಖಲಿಸುವಂತೆ ಸ್ಪೈಸ್​ ಜೆಟ್​ಗೆ ಕೇಳಲಾಗಿದೆ ಎಂಬುದನ್ನು ಡಿಜಿಸಿಎ ಸುದ್ದಿ ಸಂಸ್ಥೆ ಎನ್​ಐ ಸುದ್ದಿ ಸಂಸ್ಥೆಗೆ ಮಾಹಿತಿ ಹಂಚಿಕೊಂಡಿದೆ.

‘ಮಧುರೈನಿಂದ ನಿನ್ನೆ​ ವಿಮಾನವನ್ನು ಬುಕ್​ ಮಾಡಲಾಗಿದೆ. ಈ ಮದುವೆ ಸಮಾರಂಭದ ಕುರಿತಾಗಿ ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳಿಗೆ ತಿಳಿದಿರಲಿಲ್ಲ’ ಎಂದು ಮಧುರೈ ವಿಮಾನ ನಿಲ್ದಾಣ ನಿರ್ದೇಶಕ ಎಸ್​.ಸೆಂಥಿಲ್​ ವಲವಾನ್​ ಎಎನ್​ಐಗೆ ತಿಳಿಸಿದ್ದಾರೆ. ಪದೇ ಪದೇ ವಿನಂತಿ ಮಾಡಿಕೊಳ್ಳುತ್ತಿದ್ದರೂ, ಅರಿವು ಮೂಡಿಸುತ್ತಿದ್ದರೂ ಕೂಡಾ ಪ್ರಯಾಣಿಕರು ಕೊವಿಡ್​ ನಿಯಮಗಳನ್ನು ಅನುಸರಿಸಿಲ್ಲ. ಹಾಗಾಗಿ ವಿಮಾನಯಾನ, ನಿಯಮಗಳ ಪ್ರಕಾರ ಸೂಕ್ತ ಕ್ರಮ ತೆಗೆದುಕೊಳ್ಳುತ್ತಿದೆ ಎಂದು ಸ್ಪೈಸ್​ ಜೆಟ್​ ವಕ್ತಾರ ತಿಳಿಸಿದ್ದಾರೆ.

ಇದನ್ನೂ ಓದಿ: Viral Video: ಕೊವಿಡ್​ ನಿರ್ಬಂಧಗಳನ್ನು ತಪ್ಪಿಸಲು ವಿಮಾನದಲ್ಲಿ ಮದುವೆಯಾದ ಜೋಡಿ

Follow Us
shruti hegde
shruti hegde
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!