AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಟ್ರಾಫಿಕ್​ನಲ್ಲೇ ರಸ್ತೆಯ ಡಿವೈಡರ್ ಮೇಲೆ ಬೈಕ್ ಓಡಿಸಿದ ಯುವಕ; ಭಯಾನಕ ವಿಡಿಯೋ ವೈರಲ್

ಕೆಲವರು ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಹಾಕಲು ಏನೇನೋ ಕಸರತ್ತುಗಳನ್ನು ಮಾಡುತ್ತಾರೆ. ಇದೀಗ ಯುವಕನೊಬ್ಬ ತಮಿಳುನಾಡಿನ ತಿರುಚ್ಚಿಯಲ್ಲಿ ರಸ್ತೆಯ ಡಿವೈಡರ್ ಮೇಲೆ ತನ್ನ ಬೈಕನ್ನು ಅಪಾಯಕಾರಿಯಾಗಿ ಓಡಿಸಿರುವ ವಿಡಿಯೋ ವೈರಲ್ ಆಗಿದೆ. ಈ ವೇಳೆ ಸುರಕ್ಷತಾ ನಿಯಮಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದಾನೆ. ಈ ಸಾಹಸವನ್ನು ಸೆರೆಹಿಡಿಯುವ ವೀಡಿಯೊ ಇಂಟರ್ನೆಟ್‌ನಲ್ಲಿ ವೈರಲ್ ಆಗಿದೆ.

Viral Video: ಟ್ರಾಫಿಕ್​ನಲ್ಲೇ ರಸ್ತೆಯ ಡಿವೈಡರ್ ಮೇಲೆ ಬೈಕ್ ಓಡಿಸಿದ ಯುವಕ; ಭಯಾನಕ ವಿಡಿಯೋ ವೈರಲ್
ಟ್ರಾಫಿಕ್​ನಲ್ಲೇ ರಸ್ತೆಯ ಡಿವೈಡರ್ ಮೇಲೆ ಬೈಕ್ ಓಡಿಸಿದ ತಮಿಳುನಾಡು ಯುವಕ
Follow us
ಸುಷ್ಮಾ ಚಕ್ರೆ
|

Updated on: May 27, 2024 | 6:46 PM

ತಮಿಳುನಾಡಿನ ತಿರುಚ್ಚಿಯಲ್ಲಿ (Trichy) ಕಿರಿದಾದ ರಸ್ತೆ ಡಿವೈಡರ್ ಮೇಲೆ ಯುವಕನೊಬ್ಬ ಬೈಕ್ ಸವಾರಿ ಮಾಡುತ್ತಿದ್ದು, ಈ ವಿಡಿಯೋ ಭಾರೀ ಚರ್ಚೆಗೆ ಕಾರಣವಾಗಿದೆ. ರಸ್ತೆ ಸುರಕ್ಷತೆ ಮತ್ತು ಸ್ಟಂಟ್ ಡ್ರೈವಿಂಗ್ ಕುರಿತು ನೆಟ್ಟಿಗರು ಚರ್ಚೆ ನಡೆಸುತ್ತಿದ್ದಾರೆ. ವೈರಲ್ (Viral Video) ಆಗಿರುವ ವಿಡಿಯೋದಲ್ಲಿ ಯುವಕನು ತಿರುಚ್ಚಿಯ ಕೊಲ್ಲಿಡಂ ನದಿ ಸೇತುವೆಯ ಮೇಲೆ ರಸ್ತೆಯ ಎರಡೂ ಬದಿಗಳಲ್ಲಿ ಭಾರೀ ಟ್ರಾಫಿಕ್ (Traffic) ನಡುವೆ ಕಿರಿದಾದ ರಸ್ತೆ ಡಿವೈಡರ್ ಮೇಲೆ ತನ್ನ ಬೈಕ್ ಅನ್ನು ಓಡಿಸುತ್ತಿರುವುದನ್ನು ಕಾಣಬಹುದು. ಯುವಕ ಹೆಲ್ಮೆಟ್ ಕೂಡ ಧರಿಸದೆ ಈ ಅಪಾಯಕಾರಿ ಸಾಹಸವನ್ನು ಪ್ರದರ್ಶಿಸಿ ತನ್ನ ಪ್ರಾಣವನ್ನೇ ಪಣಕ್ಕಿಟ್ಟಿದ್ದಾನೆ.

ಮೇ 23ರಂದು ಪೆರುಂಬಿಡುಗು ಮುತ್ತುರಾಯರ್ ಅವರ ಜನ್ಮದಿನವಾದ ‘ಮುತ್ತರಾಯರ್ ಸತ್ಯ ವಿಜಾ’ ಸಂದರ್ಭದಲ್ಲಿ ಯುವಕರ ಗುಂಪೊಂದು ಬೈಕ್ ಮೆರವಣಿಗೆ ನಡೆಸಿದಾಗ ಯುವಕನೊಬ್ಬ ಡಿವೈಡರ್ ಮೇಲೆ ಬೈಕ್ ಓಡಿಸಿರುವ ಘಟನೆ ನಡೆದಿದೆ.

ಇದನ್ನೂ ಓದಿ: Prajwal Revanna Video: ಪ್ರಜ್ವಲ್​ ವಿಡಿಯೋ ಹೇಳಿಕೆ ಬೆನ್ನಲ್ಲೇ ಎಸ್​ಐಟಿ ಅಲರ್ಟ್, ಗೌಡರ ಕುಟುಂಬ ನಿರಳ

ಸ್ಥಳೀಯರ ಪ್ರಕಾರ, ಪೊಲೀಸರ ನಿರ್ಬಂಧಗಳ ಹೊರತಾಗಿಯೂ ಅನೇಕ ಯುವಕರು ಬೈಕ್ ಸ್ಟಂಟ್‌ಗಳನ್ನು ಪ್ರದರ್ಶಿಸಿದರು. ರಸ್ತೆಗಳಲ್ಲಿ ಅತಿ ವೇಗದಲ್ಲಿ ಬೈಕ್ ಚಲಾಯಿಸುತ್ತಿದ್ದರು. ಈ ವಿಡಿಯೋ ವಿವಿಧ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ನಂತರ ಅನೇಕ ಸ್ಥಳೀಯರು ಈ ವ್ಯಕ್ತಿಯ ಅಪಾಯಕಾರಿ ಬೈಕ್ ಸ್ಟಂಟ್‌ಗಾಗಿ ಪೊಲೀಸರು ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಬೆಂಗಳೂರಿನ ಫ್ಲೈಓವರ್ ಮೇಲೆ ವ್ಯಕ್ತಿಯೊಬ್ಬ ಮಹಿಳೆಯನ್ನು ತನ್ನ ತೊಡೆಯ ಮೇಲೆ ಕೂರಿಸಿಕೊಂಡು ಅಪಾಯಕಾರಿಯಾಗಿ ಬೈಕ್ ಓಡಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಒಂದು ವಾರದ ಬಳಿಕ ಈ ಘಟನೆಯ ವಿಡಿಯೋ ವೈರಲ್ ಆಗಿದೆ. ವೈರಲ್ ಆಗಿರುವ ವಿಡಿಯೋ ಗಮನಿಸಿದ ಪೊಲೀಸರು ಇಬ್ಬರನ್ನೂ ಪತ್ತೆ ಹಚ್ಚಿದ್ದಾರೆ.

ಇನ್ನಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಚಲಿಸುತ್ತಿದ್ದ ಬಸ್​ನಲ್ಲಿ ಬೆಂಕಿ, ಐವರು ಸಾವು
ಚಲಿಸುತ್ತಿದ್ದ ಬಸ್​ನಲ್ಲಿ ಬೆಂಕಿ, ಐವರು ಸಾವು
Daily Devotional: ಕಾಲುಂಗುರ ಕಳೆದು ಹೋದರೆ ಅದರ ಮುನ್ಸೂಚನೆ ಏನು?
Daily Devotional: ಕಾಲುಂಗುರ ಕಳೆದು ಹೋದರೆ ಅದರ ಮುನ್ಸೂಚನೆ ಏನು?
ಈ ದಿನ ಜ್ಯೇಷ್ಠ ನಕ್ಷತ್ರ, ಸಿದ್ಧಯೋಗ: ಯಾವ ರಾಶಿಗಳಿಗೆ ಶುಭ ದಿನ ತಿಳಿಯಿರಿ
ಈ ದಿನ ಜ್ಯೇಷ್ಠ ನಕ್ಷತ್ರ, ಸಿದ್ಧಯೋಗ: ಯಾವ ರಾಶಿಗಳಿಗೆ ಶುಭ ದಿನ ತಿಳಿಯಿರಿ
ತುಂಬ ಆ್ಯಕ್ಟೀವ್ ಆಗಿದ್ದ ರಾಕೇಶ್​ಗೆ ಹೃದಯಾಘಾತ, ನಂಬೋಕೆ ಆಗಲಿಲ್ಲ: ರಘು
ತುಂಬ ಆ್ಯಕ್ಟೀವ್ ಆಗಿದ್ದ ರಾಕೇಶ್​ಗೆ ಹೃದಯಾಘಾತ, ನಂಬೋಕೆ ಆಗಲಿಲ್ಲ: ರಘು
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ