Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು: ಕಸದ ತೊಟ್ಟಿಯಲ್ಲಿ 100 ಗ್ರಾಂ ಚಿನ್ನದ ನಾಣ್ಯವನ್ನು ಕಂಡು ಬೆರಗಾದ ಕೆಲಸಗಾರ್ತಿ! ಮಾಲೀಕರಿಗೆ ಹಿಂತಿರುಗಿಸಿದ್ದಕ್ಕೆ ಪೊಲೀಸರಿಂದ ಮೆಚ್ಚುಗೆ

Viral News: ಮೇರಿ ಅವರು ಸೋಮವಾರ ತಿರುವೊಟ್ಟಿಯುರ್​ ಬೀದಿಯಲ್ಲಿ ಕಸವನ್ನು ಬೇರ್ಪಡಿಸುತ್ತಿರವಾಗ ನಾಣ್ಯದ ಶಬ್ದ ಕೇಳಿಸಿತು. ಚೀಲದಲ್ಲಿ ಚಿನ್ನದ ನಾಣ್ಯಗಳಿದ್ದವು. ಪೊಲೀಸರ ಸಹಾಯದಿಂದ ಚಿನ್ನದ ನಾಣ್ಯವನ್ನು ಮಾಲೀಕರಿಗೆ ಹಿಂತಿರುಗಿಸಿದ್ದಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

ತಮಿಳುನಾಡು: ಕಸದ ತೊಟ್ಟಿಯಲ್ಲಿ 100 ಗ್ರಾಂ ಚಿನ್ನದ ನಾಣ್ಯವನ್ನು ಕಂಡು ಬೆರಗಾದ ಕೆಲಸಗಾರ್ತಿ! ಮಾಲೀಕರಿಗೆ ಹಿಂತಿರುಗಿಸಿದ್ದಕ್ಕೆ ಪೊಲೀಸರಿಂದ ಮೆಚ್ಚುಗೆ
ಸಂಗ್ರಹ ಚಿತ್ರ
Follow us
TV9 Web
| Updated By: shruti hegde

Updated on: Oct 20, 2021 | 10:58 AM

ಕಸದ ತೊಟ್ಟಿಯಲ್ಲಿ ಸಿಕ್ಕ 100 ಗ್ರಾಂ ಚಿನ್ನದ ನಾಣ್ಯವನ್ನು ಹಿಂತಿರುಗಿಸಿದ ಬಳಿಕ ತಮಿಳುನಾಡಿನ ಕೆಲಸಗಾರ್ತಿಯ ಪ್ರಾಮಾಣಿಕತೆಗೆ ಮೆಚ್ಚುಗೆ ವ್ಯಕ್ತವಾಗಿದೆ. ಮೇರಿ ಅವರು ಸೋಮವಾರ ತಿರುವೊಟ್ಟಿಯುರ್​ ಬೀದಿಯಲ್ಲಿ ಕಸವನ್ನು ಬೇರ್ಪಡಿಸುತ್ತಿರವಾಗ ನಾಣ್ಯದ ಶಬ್ದ ಕೇಳಿಸಿತು. ಚೀಲದಲ್ಲಿ ಚಿನ್ನದ ನಾಣ್ಯಗಳಿದ್ದವು. ಅದನ್ನು ನೋಡಿದ ಮೇರಿ ಆಶ್ಚರ್ಯಚಕಿತಳಾಗಿದ್ದಾಳೆ. ಬಳಿಕ 100 ಗ್ರಾಂ ನಾಣ್ಯವನ್ನು ಪೊಲಿಸರಿಗೆ ಒಪ್ಪಿಸಲು ತೀರ್ಮಾನಿಸಿದ್ದಾಳೆ.

ಏತನ್ಮಧ್ಯೆ ತಿರುವೊಟ್ಟಿಯುರ್​ನ ಗಣೇಶ್ ರಾಮನ್ ಅವರು, ಮನೆಯಿಂದ 100 ಗ್ರಾಂ ಚಿನ್ನದ ನಾಣ್ಯ ನಾಪತ್ತೆಯಾಗಿದೆ ಎಂದು ದೂರು ದಾಖಲಿಸಿದ್ದರು. ಚಿನ್ನದ ನಾಣ್ಯವನ್ನು ಚಿಕ್ಕ ಚೀಲದಲ್ಲಿ ಸುತ್ತಿ ತನ್ನ ಹಾಸಿಗೆಯ ಕೆಳಗೆ ಇಟ್ಟುಕೊಂಡಿದ್ದೆ ಎಂಬ ಮಾಹಿತಿಯನ್ನು ಪೊಲೀಸರ ಬಳಿ ಹಂಚಿಕೊಂಡಿದ್ದರು. ನಾಣ್ಯವು ಅದೇಗೋ ಕಸದ ಬುಟ್ಟಿಗೆ ಸೇರಿ ನಾಪತ್ತೆಯಾಗಿದೆ ಎಂದು ಹೇಳಿದ್ದಾರೆ.

ಎಲ್ಲಾ ರೀತಿಯ ಪರಿಶೀಲನೆಗಾಗಿ ಪೊಲೀಸರು ಹತ್ತಿರದಲ್ಲಿದ್ದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದಾರೆ. ಕೆಲಸದಾಕೆ ಮೇರಿ ಮತ್ತು ಮಾಲೀಕರನ್ನು ಪೊಲೀಸ್ ಠಾಣೆಗೆ ಕರೆಸಿ ಮಾಲೀಕರಿಗೆ ನಾಣ್ಯವನ್ನು ಹಿಂತಿರುಗಿಸಲಾಗಿದೆ. ಪೊಲೀಸರು ಮೇರಿ ಅವರ ಪ್ರಾಮಾಣಿಕತೆಯನ್ನು ಮೆಚ್ಚಿಕೊಂಡಿದ್ದಾರೆ. ಏಕೆಂದರೆ ಜೀವನ ಸಾಗಿಸಲು ಕಷ್ಟಪಡುತ್ತಿರುವ ಸಂದರ್ಭದಲ್ಲಿಯೂ ಸಹ ಅವರು ನಾಣ್ಯವನ್ನು ತಮ್ಮ ಬಳಿ ಇಟ್ಟುಕೊಳ್ಳುವ ಯೋಚನೆ ಮಾಡಿಲ್ಲ ಎಂದು ಮೇರಿ ಪ್ರಾಮಾಣಿಕತೆಗೆ ಮೆಚ್ಚುಗೆ ಸೂಚಿಸಿದ್ದಾರೆ.

ಇದನ್ನೂ ಓದಿ:

Viral News: ರೆಸ್ಟೋರೆಂಟ್​ನಲ್ಲಿ ಬರೋಬ್ಬರಿ 38 ಲಕ್ಷ ರೂ. ಖರ್ಚು ಮಾಡಿ ನಾಲ್ವರ ಡಿನ್ನರ್ ಪಾರ್ಟಿ! ಬಿಲ್​ ಇಲ್ಲಿದೆ ನೋಡಿ

Viral News: ಮನೆಯ ಹಿಂಭಾಗದಲ್ಲಿ 90ಕ್ಕೂ ಹೆಚ್ಚು ಹಾವಿನ ಮರಿಗಳನ್ನು ಕಂಡು ಬೆಚ್ಚಿಬಿದ್ದ ಮಹಿಳೆ!

ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ