AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು: ಕಸದ ತೊಟ್ಟಿಯಲ್ಲಿ 100 ಗ್ರಾಂ ಚಿನ್ನದ ನಾಣ್ಯವನ್ನು ಕಂಡು ಬೆರಗಾದ ಕೆಲಸಗಾರ್ತಿ! ಮಾಲೀಕರಿಗೆ ಹಿಂತಿರುಗಿಸಿದ್ದಕ್ಕೆ ಪೊಲೀಸರಿಂದ ಮೆಚ್ಚುಗೆ

Viral News: ಮೇರಿ ಅವರು ಸೋಮವಾರ ತಿರುವೊಟ್ಟಿಯುರ್​ ಬೀದಿಯಲ್ಲಿ ಕಸವನ್ನು ಬೇರ್ಪಡಿಸುತ್ತಿರವಾಗ ನಾಣ್ಯದ ಶಬ್ದ ಕೇಳಿಸಿತು. ಚೀಲದಲ್ಲಿ ಚಿನ್ನದ ನಾಣ್ಯಗಳಿದ್ದವು. ಪೊಲೀಸರ ಸಹಾಯದಿಂದ ಚಿನ್ನದ ನಾಣ್ಯವನ್ನು ಮಾಲೀಕರಿಗೆ ಹಿಂತಿರುಗಿಸಿದ್ದಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

ತಮಿಳುನಾಡು: ಕಸದ ತೊಟ್ಟಿಯಲ್ಲಿ 100 ಗ್ರಾಂ ಚಿನ್ನದ ನಾಣ್ಯವನ್ನು ಕಂಡು ಬೆರಗಾದ ಕೆಲಸಗಾರ್ತಿ! ಮಾಲೀಕರಿಗೆ ಹಿಂತಿರುಗಿಸಿದ್ದಕ್ಕೆ ಪೊಲೀಸರಿಂದ ಮೆಚ್ಚುಗೆ
ಸಂಗ್ರಹ ಚಿತ್ರ
TV9 Web
| Edited By: |

Updated on: Oct 20, 2021 | 10:58 AM

Share

ಕಸದ ತೊಟ್ಟಿಯಲ್ಲಿ ಸಿಕ್ಕ 100 ಗ್ರಾಂ ಚಿನ್ನದ ನಾಣ್ಯವನ್ನು ಹಿಂತಿರುಗಿಸಿದ ಬಳಿಕ ತಮಿಳುನಾಡಿನ ಕೆಲಸಗಾರ್ತಿಯ ಪ್ರಾಮಾಣಿಕತೆಗೆ ಮೆಚ್ಚುಗೆ ವ್ಯಕ್ತವಾಗಿದೆ. ಮೇರಿ ಅವರು ಸೋಮವಾರ ತಿರುವೊಟ್ಟಿಯುರ್​ ಬೀದಿಯಲ್ಲಿ ಕಸವನ್ನು ಬೇರ್ಪಡಿಸುತ್ತಿರವಾಗ ನಾಣ್ಯದ ಶಬ್ದ ಕೇಳಿಸಿತು. ಚೀಲದಲ್ಲಿ ಚಿನ್ನದ ನಾಣ್ಯಗಳಿದ್ದವು. ಅದನ್ನು ನೋಡಿದ ಮೇರಿ ಆಶ್ಚರ್ಯಚಕಿತಳಾಗಿದ್ದಾಳೆ. ಬಳಿಕ 100 ಗ್ರಾಂ ನಾಣ್ಯವನ್ನು ಪೊಲಿಸರಿಗೆ ಒಪ್ಪಿಸಲು ತೀರ್ಮಾನಿಸಿದ್ದಾಳೆ.

ಏತನ್ಮಧ್ಯೆ ತಿರುವೊಟ್ಟಿಯುರ್​ನ ಗಣೇಶ್ ರಾಮನ್ ಅವರು, ಮನೆಯಿಂದ 100 ಗ್ರಾಂ ಚಿನ್ನದ ನಾಣ್ಯ ನಾಪತ್ತೆಯಾಗಿದೆ ಎಂದು ದೂರು ದಾಖಲಿಸಿದ್ದರು. ಚಿನ್ನದ ನಾಣ್ಯವನ್ನು ಚಿಕ್ಕ ಚೀಲದಲ್ಲಿ ಸುತ್ತಿ ತನ್ನ ಹಾಸಿಗೆಯ ಕೆಳಗೆ ಇಟ್ಟುಕೊಂಡಿದ್ದೆ ಎಂಬ ಮಾಹಿತಿಯನ್ನು ಪೊಲೀಸರ ಬಳಿ ಹಂಚಿಕೊಂಡಿದ್ದರು. ನಾಣ್ಯವು ಅದೇಗೋ ಕಸದ ಬುಟ್ಟಿಗೆ ಸೇರಿ ನಾಪತ್ತೆಯಾಗಿದೆ ಎಂದು ಹೇಳಿದ್ದಾರೆ.

ಎಲ್ಲಾ ರೀತಿಯ ಪರಿಶೀಲನೆಗಾಗಿ ಪೊಲೀಸರು ಹತ್ತಿರದಲ್ಲಿದ್ದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದಾರೆ. ಕೆಲಸದಾಕೆ ಮೇರಿ ಮತ್ತು ಮಾಲೀಕರನ್ನು ಪೊಲೀಸ್ ಠಾಣೆಗೆ ಕರೆಸಿ ಮಾಲೀಕರಿಗೆ ನಾಣ್ಯವನ್ನು ಹಿಂತಿರುಗಿಸಲಾಗಿದೆ. ಪೊಲೀಸರು ಮೇರಿ ಅವರ ಪ್ರಾಮಾಣಿಕತೆಯನ್ನು ಮೆಚ್ಚಿಕೊಂಡಿದ್ದಾರೆ. ಏಕೆಂದರೆ ಜೀವನ ಸಾಗಿಸಲು ಕಷ್ಟಪಡುತ್ತಿರುವ ಸಂದರ್ಭದಲ್ಲಿಯೂ ಸಹ ಅವರು ನಾಣ್ಯವನ್ನು ತಮ್ಮ ಬಳಿ ಇಟ್ಟುಕೊಳ್ಳುವ ಯೋಚನೆ ಮಾಡಿಲ್ಲ ಎಂದು ಮೇರಿ ಪ್ರಾಮಾಣಿಕತೆಗೆ ಮೆಚ್ಚುಗೆ ಸೂಚಿಸಿದ್ದಾರೆ.

ಇದನ್ನೂ ಓದಿ:

Viral News: ರೆಸ್ಟೋರೆಂಟ್​ನಲ್ಲಿ ಬರೋಬ್ಬರಿ 38 ಲಕ್ಷ ರೂ. ಖರ್ಚು ಮಾಡಿ ನಾಲ್ವರ ಡಿನ್ನರ್ ಪಾರ್ಟಿ! ಬಿಲ್​ ಇಲ್ಲಿದೆ ನೋಡಿ

Viral News: ಮನೆಯ ಹಿಂಭಾಗದಲ್ಲಿ 90ಕ್ಕೂ ಹೆಚ್ಚು ಹಾವಿನ ಮರಿಗಳನ್ನು ಕಂಡು ಬೆಚ್ಚಿಬಿದ್ದ ಮಹಿಳೆ!

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ