Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಬಸ್‌ ನಿಲ್ಲಿಸದ ಚಾಲಕ; ಪರೀಕ್ಷೆಗೆ ತಡ ಆಗುತ್ತೆ ಎಂದು ಮಾರು ದೂರ ಓಡಿ ಬಸ್‌ ಹತ್ತಿದ ವಿದ್ಯಾರ್ಥಿನಿ

12ನೇ ತರಗತಿ ಬೋರ್ಡ್‌ ಪರೀಕ್ಷೆಗೆ ತೆರಳಲು ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಬಸ್‌ ನಿಲ್ಲಿಸದೆ ಚಾಲಕ ಸೀದಾ ಹೋದ ಘಟನೆಯೊಂದು ನಡೆದಿದೆ. ಇನ್ನೂ ತಡವಾದರೆ ಪರೀಕ್ಷೆ ಬರೆಯಲು ಸಾಧ್ಯವಾಗುವುದಿಲ್ಲವೋ ಎಂಬ ಭಯಕ್ಕೆ ವಿದ್ಯಾರ್ಥಿನಿ ತನ್ನ ಪ್ರಾಣವನ್ನೂ ಲೆಕ್ಕಿಸದರೆ ಓಡೋಡಿ ಹೋಗಿ ಆ ಬಸ್‌ ಹತ್ತಿದ್ದು, ಈ ಘಟನೆಯ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಭಾರೀ ವೈರಲ್‌ ಆಗುತ್ತಿದೆ. ವಿದ್ಯಾರ್ಥಿನಿಗೆ ಬಸ್‌ ನಿಲ್ಲಿಸದಿದ್ದಕ್ಕೆ ಆಕ್ರೋಶ ವ್ಯಕ್ತವಾದ ಬಳಿಕ ಚಾಲಕ ಮತ್ತು ಕಂಡಕ್ಟರ್‌ ಇಬ್ಬರನ್ನೂ ಸೇವೆಯಿಂದ ಅಮಾನತುಗೊಳಿಸಲಾಗಿದೆ.

Viral: ಬಸ್‌ ನಿಲ್ಲಿಸದ ಚಾಲಕ; ಪರೀಕ್ಷೆಗೆ ತಡ ಆಗುತ್ತೆ ಎಂದು ಮಾರು ದೂರ ಓಡಿ ಬಸ್‌ ಹತ್ತಿದ ವಿದ್ಯಾರ್ಥಿನಿ
ವೈರಲ್​​ ವಿಡಿಯೋ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Mar 27, 2025 | 11:14 AM

ತಮಿಳುನಾಡು, ಮಾ. 27: 12 ನೇ ತರಗತಿ ಬೋರ್ಡ್‌ ಪರೀಕ್ಷೆ (Board Exma) ಬರೆಯಲು ತೆರಳಿದ್ದ ವಿದ್ಯಾರ್ಥಿನಿಗೆ ಸ್ಥಳದಲ್ಲಿ ಬಸ್‌ (bus) ನಿಲ್ಲಿಸದೆ ಮಾರು ದೂರ ನಿಲ್ಲಿಸುವ ಮೂಲಕ ಚಾಲಕನೊಬ್ಬ ಆಕೆಯನ್ನು ಓಡುವಂತೆ ಮಾಡಿದ ಘಟನೆಯೊಂದು ನಡೆದಿದೆ. ಬಸ್‌ಸ್ಟ್ಯಾಂಡ್‌ (bus stand) ಬಳಿ ನಿಂತಿದ್ದ ವಿದ್ಯಾರ್ಥಿನಿಯನ್ನು ಗಮನಿಸಿದರೂ ಚಾಲಕ (driver) ಬಸ್‌ ನಿಲ್ಲಿಸದೆ ಸೀದಾ ಹೋಗಿದ್ದು, ಇನ್ನೂ ತಡವಾದರೆ ಪರೀಕ್ಷೆ (exam) ಬರೆಯಲು ಸಾಧ್ಯವಾಗುತ್ತೋ ಇಲ್ಲವೋ ಎಂಬ ಭಯದಿಂದ ವಿದ್ಯಾರ್ಥಿನಿ (student) ಜೀವದ ಹಂಗು ತೊರೆದು ಓಡೋಡಿ ಹೋಗಿ ಬಸ್‌ ಹತ್ತಿದ್ದಾಳೆ. ಈ ಘಟನೆಯ ವಿಡಿಯೋವನ್ನು ಯಾರೋ ವಿಡಿಯೋ ಮಾಡಿ ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಈ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ, ಚಾಲಕ ಮತ್ತು ಕಂಡಕ್ಟರ್‌ ಇಬ್ಬರನ್ನೂ ಅಮಾನತುಗೊಳಿಸಲಾಗಿದೆ.

ಈ ಘಟನೆ ತಮಿಳುನಾಡಿನ ತಿರುಪತ್ತೂರು ಜಿಲ್ಲೆಯಲ್ಲಿ ನಡೆದಿದ್ದು, ಚಾಲಕನೊಬ್ಬ ಬಸ್‌ಸ್ಟ್ಯಾಂಡ್‌ನಲ್ಲಿ ಬಸ್‌ ನಿಲ್ಲಿಸದೆ, ಪರೀಕ್ಷೆಗೆ ತೆರಳಿದ್ದ ವಿದ್ಯಾರ್ಥಿನಿಯನ್ನು ಬಸ್‌ ಹಿಂದೆ ಓಡುವಂತೆ ಮಾಡಿದ ಘಟನೆ ನಡೆದಿದೆ. ಕೊಥಕೋಟೈ ಬಸ್‌ ನಿಲ್ದಾಣದ ಬಳಿ ಸರ್ಕಾರಿ ಬಸ್‌ಗಾಗಿ ವಿದ್ಯಾರ್ಥಿನಿ ಕಾದು ನಿಂತಿದ್ದು, ಆದರೆ ಆಕೆಯನ್ನೂ ನೋಡಿಯೂ ಬಸ್‌ ಚಾಲಕ ಬಸ್‌ ನಿಲ್ಲಿಸದೆ ವೇಗವಾಗಿ ಹೋಗಿದ್ದಾನೆ. ಬೋರ್ಡ್‌ ಪರೀಕ್ಷೆ ಇರುವ ಕಾರಣ ಬಸ್‌ ಮಿಸ್‌ ಆದ್ರೆ ಪರೀಕ್ಷೆ ಬರೆಯಲು ಸಾಧ್ಯವಾಗುವುದಿಲ್ಲ ಎಂಬ ಭಯದಿಂದ ಆ ವಿದ್ಯಾರ್ಥಿನಿ ಓಡಿ ಹೋಗಿ ಬಸ್‌ ಹತ್ತಿದ್ದಾಳೆ. ಈ ದೃಶ್ಯವನ್ನು ಬೈಕ್‌ ಸವಾರನೊಬ್ಬ ವಿಡಿಯೋ ಮಾಡಿ ಸೋಷಿಯಲ್‌ ಮೀಡಿಯಾದಲ್ಲಿ ಹರಿ ಬಿಟ್ಟಿದ್ದಾನೆ. ಈ ಘಟನೆಯ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾದ ಬಳಿಕ ಇದಕ್ಕೆ ಪ್ರತಿಕ್ರಿಯಿಸಿದ ತಮಿಳುನಾಡು ಸಾರಿಗೆ ಇಲಾಖೆ ಅಧಿಕಾರಿಗಳು ಚಾಲಕ ಮುನಿರಾಜ್‌ ಹಾಗೂ ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡಿದ್ದ ಕಂಡಕ್ಟರ್‌ ಅಶೋಕ್‌ ಕುಮಾರ್‌ನನ್ನು ಸೇವೆಯಿಂದ ಅಮಾನತುಗೊಳಿಸಿದ್ದಾರೆ.

ಇದನ್ನೂ ಓದಿ
Image
ಹಿರಿ ಜೀವಗಳಿಗೆ  ಮರುಮದುವೆ ಮಾಡಿಸಿದ ಮೊಮ್ಮಕ್ಕಳು
Image
ರಾತ್ರಿಯ ರೊಮ್ಯಾ‌ನ್ಸ್ ವಿಡಿಯೋ ಶೇರ್‌ ಮಾಡಿದ ನವಜೋಡಿ
Image
ಕೋಪದಲ್ಲಿ ಗಂಡನ ನಾಲಿಗೆ ಕಚ್ಚಿ ತುಂಡರಿಸಿದ ಹೆಂಡತಿ
Image
ಯಾವ ಲಾಭದಾಯಕ ಉದ್ದಿಮೆಗೂ ಕಮ್ಮಿಯಿಲ್ಲ ಈ ಚೇಳು ಸಾಕಾಣಿಕೆ

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಈ ಘಟನೆಗೆ ಸಂಬಂಧಿಸಿದ ವಿಡಿಯೋವನ್ನು ಗೌತಮ್‌ (gautyou) ಎಂಬವರು ತಮ್ಮ ಎಕ್ಸ್‌ ಖಾತೆಯಲ್ಲಿ ಶೇರ್‌ ಮಾಡಿದ್ದಾರೆ. ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಚಾಲಕ ಬಸ್‌ ನಿಲ್ಲಿಸಿಲ್ಲವೆಂದು ವಿದ್ಯಾರ್ಥಿನಿಯೋರ್ವಳು ಪರೀಕ್ಷೆಗೆ ತಡವಾದರೆ ಕಷ್ಟ ಎಂದು ಅದೇ ಬಸ್ಸಿನ ಹಿಂದೆ ಜೀವದ ಹಂಗು ತೊರೆದು ಓಡೋಡಿ ಹೋಗುತ್ತಿರುವ ದೃಶ್ಯವನ್ನು ಕಾಣಬಹುದು. ಒಂದಷ್ಟು ದೂರ ಹೋದ ಬಳಿಕ ಬಸ್‌ ನಿಲ್ಲಿಸಿದ್ದು, ನಂತರ ಬಸ್‌ ಹತ್ತಿ ವಿದ್ಯಾರ್ಥಿ ಪರೀಕ್ಷೆ ಬರೆಯಲು ಹೋಗಿದ್ದಾಳೆ.

ಇದನ್ನೂ ಓದಿ: ಕಬ್ಬಿನ ಹಾಲು ತೆಗೆಯುವ ಯಂತ್ರಕ್ಕೆ ಸಿಲುಕಿದ ಜಡೆ

ಮಾರ್ಚ್‌ 25 ರಂದು ಶೇರ್‌ ಮಾಡಲಾದ ಈ ವಿಡಿಯೋ 3 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼನನ್ನ ಶಾಲಾ ದಿನಗಳಲ್ಲಿ ನಾನು ಕೂಡಾ ಇದೇ ರೀತಿ ಬಸ್‌ ಹಿಂದೆ ಓಡಿದ್ದೆʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼಇಂತಹ ಘಟನೆಗಳು ತಮಿಳುನಾಡಿನಲ್ಲಿ ಸಾಮಾನ್ಯವಾಗಿದೆ, ಬಸ್‌ ಚಾಲಕರು ಹೀಗೆ ಅತಿರೇಕದ ವರ್ತನೆಯನ್ನೇ ತೋರುತ್ತಾರೆʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ