AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವಸ್ಥಾನದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಆನೆ; ಈ ವೈರಲ್ ವಿಡಿಯೋ ಮಿಸ್ ಮಾಡಬೇಡಿ

ತಮ್ಮ ಹುಟ್ಟುಹಬ್ಬವನ್ನು ಆ ರೀತಿ ಆಯೋಜಿಸಬೇಕು, ಈ ರೀತಿ ಆಯೋಜಿಸಬೇಕೆಂದು ಎಲ್ಲರಿಗೂ ಹಲವು ರೀತಿಯ ಪ್ಲಾನ್​ಗಳಿರುವುದು ಸಾಮಾನ್ಯ. ಅದೇ ರೀತಿ ಆನೆಗೂ ಆಸೆ ಇರುತ್ತದೆ ಎಂದು ಅದರ ಹುಟ್ಟುಹಬ್ಬವನ್ನು ಬಹಳ ವಿಶೇಷವಾಗಿ ಆಚರಿಸಲಾಗಿದೆ. ತನ್ನ ಬರ್ತಡೇಗೆ ಸಿಕ್ಕ ಉಡುಗೊರೆಗಳನ್ನು ನೋಡಿ ಗಜರಾಜನಂತೂ ಫುಲ್ ಖುಷಿಯಾಗಿದ್ದಾನೆ.

ದೇವಸ್ಥಾನದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಆನೆ; ಈ ವೈರಲ್ ವಿಡಿಯೋ ಮಿಸ್ ಮಾಡಬೇಡಿ
ಗಜರಾಜನ ಬರ್ತ್​ಡೇ
ಸುಷ್ಮಾ ಚಕ್ರೆ
|

Updated on: Jul 18, 2024 | 5:15 PM

Share

ಚೆನ್ನೈ: ತನ್ನ 22ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡ ಆನೆಯೊಂದು ಬರ್ತಡೇ ಪ್ರಯುಕ್ತ ಮೈಮೇಲೆ ರೇಷ್ಮೆ ಬಟ್ಟೆಯನ್ನು ಹೊದ್ದುಕೊಂಡು, ಸುಂದರವಾಗಿ ಅಲಂಕರಿಸಿಕೊಂಡು, ಕೇಕ್ ಬದಲು ನಾನಾ ರೀತಿಯ ಹಣ್ಣುಗಳನ್ನು ತಿನ್ನುತ್ತಾ ಎಂಜಾಯ್ ಮಾಡುತ್ತಿರುವ ವಿಡಿಯೋ ಭಾರೀ ವೈರಲ್ ಆಗಿದೆ. ಹಣ್ಣುಗಳನ್ನು ತಿಂದು ಪರಿಸರಸ್ನೇಹಿಯಾಗಿ ಬರ್ತಡೇ ಆಚರಿಸಿಕೊಂಡಿರುವ ಈ ಆನೆಯನ್ನು ನೋಡಿದ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಹುಟ್ಟುಹಬ್ಬ ಆಚರಿಸಿಕೊಂಡ ಆನೆಯನ್ನು ಅಖಿಲಾ ಎಂದು ಕರೆಯಲಾಗುತ್ತದೆ. ಈ ಆನೆಯ 22ನೇ ಹುಟ್ಟುಹಬ್ಬವನ್ನು ತಮಿಳುನಾಡಿನ ದೇವಸ್ಥಾನದಲ್ಲಿ ಆಚರಿಸಲಾಯಿತು. ಹುಟ್ಟುಹಬ್ಬದ ಪ್ರಯುಕ್ತ ದೇವಸ್ಥಾನದ ಭಕ್ತರೆಲ್ಲರೂ ನೀಡಿದ ವಿವಿಧ ರೀತಿಯ ಹಣ್ಣುಗಳನ್ನು ನೋಡಿ ಆನೆ ಖುಷಿಯಾಗಿ ತಲೆಯಾಡಿಸುತ್ತಾ ಹಣ್ಣುಗಳನ್ನು ತಿನ್ನುತ್ತಿರುವ ವಿಡಿಯೋ ವೈರಲ್ ಆಗಿದೆ.

ಇದನ್ನೂ ಓದಿ: Shocking Video: ನಾಯಿಯನ್ನು ಹಗ್ಗದಲ್ಲಿ ಕಟ್ಟಿ ಟೆರೇಸ್‌ನಿಂದ ನೇತಾಡಿಸಿದ ಯುವಕ; ಶಾಕಿಂಗ್ ವಿಡಿಯೋ ವೈರಲ್

ತಮಿಳುನಾಡಿನ ಈ ಹೃದಯಸ್ಪರ್ಶಿ ವಿಡಿಯೋದಲ್ಲಿ ಆನೆ ತನ್ನ ಹುಟ್ಟುಹಬ್ಬವನ್ನು ಹಣ್ಣುಹಂಪಲು ಮತ್ತು ಹಬ್ಬದ ಅಲಂಕಾರಗಳೊಂದಿಗೆ ಸಂತೋಷದಿಂದ ಆಚರಿಸುತ್ತಿರುವುದನ್ನು ನೋಡಬಹುದು. ಸುತ್ತಲೂ ನಿಂತ ಜನರು ಹ್ಯಾಪಿ ಬರ್ತಡೇ ಟೂ ಯು ಎಂದು ಆನೆಗೆ ಹುಟ್ಟುಹಬ್ಬದ ಶುಭಾಶಯ ಕೋರುವುದನ್ನು ವಿಡಿಯೋದಲ್ಲಿ ನೋಡಬಹುದು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​