AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಎಲ್ಲಿ ಹುಡುಕಿದ್ರೂ ದುಡ್ಡಿಲ್ಲ, ಮುಂದಿನ ಸಲನಾದ್ರೂ ದುಡ್ದು ಇಟ್ಟು ಹೋಗು; ಮನೆ ಮಾಲೀಕರಿಗೆ ಪತ್ರ ಬರೆದ ಕಳ್ಳ

ದುಡ್ಡಿಗಾಗಿ ಕಳ್ಳತನ, ದರೋಡೆ ಮಾಡುವುದನ್ನು ನೀವು ನೋಡುತ್ತೀರಿ. ಆದರೆ ಇಲ್ಲೊಬ್ಬ ಕಳ್ಳನು ಮನೆ ನುಗಿದ್ದು, ಈ ವೇಳೆ ಏನು ಸಿಗದಾಗಿದೆ. ಕೊನೆಗೆ ಮನೆ ಮಾಲೀಕರಿಗೆ ಪತ್ರ ಬರೆದು ಸಲಹೆ ಸಲಹೆ ನೀಡಿದ್ದಾನೆ. ಈ ಕಳ್ಳ ಬರೆದ ಪತ್ರವು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Viral: ಎಲ್ಲಿ ಹುಡುಕಿದ್ರೂ ದುಡ್ಡಿಲ್ಲ, ಮುಂದಿನ ಸಲನಾದ್ರೂ ದುಡ್ದು ಇಟ್ಟು ಹೋಗು; ಮನೆ ಮಾಲೀಕರಿಗೆ ಪತ್ರ ಬರೆದ ಕಳ್ಳ
ಸಾಂದರ್ಭಿಕ ಚಿತ್ರImage Credit source: Pinterest
ಸಾಯಿನಂದಾ
|

Updated on: Nov 26, 2025 | 4:51 PM

Share

ತಮಿಳುನಾಡು, ನವೆಂಬರ್ 26: ಹಣ ಕಂಡರೆ ಹೆಣ ಕೂಡ ಬಾಯಿ ಬಿಡುತ್ತೆ. ಹೀಗಾಗಿ ಕೆಲವರು ಮೈ ದಂಡಿಸಿ ದುಡಿಯದೇ ಕಳ್ಳತನದ (theft) ಹಾದಿ ಹಿಡಿಯುತ್ತಾರೆ. ಆದರೆ ಇಲ್ಲೊಬ್ಬ ಕಳ್ಳನು ಮಾಡಿದ ಕೆಲಸ ನೋಡಿದ್ರೆ ನೀವು ಶಾಕ್ ಆಗ್ತೀರಾ. ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯಲ್ಲಿ (Tirunelveli District of Tamil Nadu) ವಿಚಿತ್ರ ಘಟನೆಯೊಂದು ನಡೆದಿದೆ. ಪಲಯಪೆಟ್ಟೈ ಪ್ರದೇಶದ ಮನೆಯೊಂದಕ್ಕೆ ನುಗ್ಗಿದ ಕಳ್ಳನು ಕದಿಯಲು ಏನು ಸಿಗದ ಕಾರಣ ನಿರಾಸೆಗೊಂಡಿದ್ದಾನೆ. ಕೊನೆಗೆ ಮನೆಮಾಲೀಕರಿಗೆ ಪತ್ರ ಬರೆದಿಟ್ಟು ಹೋಗಿದ್ದು, ಈ ಪತ್ರವು ವೈರಲ್ ಆಗಿದೆ.

ಮನೆಗೆ ನುಗ್ಗಿದ ಕಳ್ಳನು ಹಣ, ಆಭರಣದ ಹುಡುಕಾಟದಲ್ಲಿದ್ದಾಗ ಹುಂಡಿಯಲ್ಲಿದ್ದ 2,000 ರೂ ಮಾತ್ರ ಸಿಕ್ಕಿದೆ. ಇದರಿಂದ ಹತಾಶೆಗೊಂದು ಮನೆಮಾಲೀಕರಿಗೆ ಪತ್ರ ಬರೆಯಲು ನಿರ್ಧರಿಸಿದ್ದಾನೆ. ಈ ಮನೆಯಲ್ಲಿ ಒಂದು ರೂಪಾಯಿ ಕೂಡ ಇಲ್ಲ, ಮುಂದಿನ ಬಾರಿ ಯಾರಾದರೂ ಕದಿಯಲು ಬಂದಾಗ, ಅವರು ಮೋಸ ಹೋಗದಂತೆ ಹಣವನ್ನು ಇಟ್ಟುಕೊಳ್ಳಿ ಎಂದು ಸಲಹೆ ನೀಡಿದ್ದಾನೆ.

ಇದನ್ನೂ ಓದಿ:ಅಂಗಡಿಗೆ ನುಗ್ಗಿದ ಕಳ್ಳನ ಮನಸ್ಸನ್ನು ಗೆದ್ದು ತಂದೆಯನ್ನು ಕಾಪಾಡಿದ ಪುಟಾಣಿ

ಈ ಮನೆಯ ಭದ್ರತಾ ವ್ಯವಸ್ಥೆಯನ್ನು ಟೀಕಿಸಿದ್ದು, ಒಂದೇ ಒಂದು ರೂಪಾಯಿ ಹಣವಿಲ್ಲ, ಇಷ್ಟೊಂದು ಸಿಸಿಟಿವಿ ಕ್ಯಾಮೆರಾಗಳು ಏಕೆ? ಎಂದು ಪತ್ರದಲ್ಲಿ ಪ್ರಶ್ನಿಸಿದ್ದಾನೆ. ಕೊನೆಗೆ ಮುನ್ನೆಚ್ಚರಿಕೆಯಾಗಿ ಈ ಕೃತ್ಯವು ದಾಖಲಾಗದಂತೆ ನೋಡಿಕೊಳ್ಳಲು ಸಿಸಿಟಿವಿ ಕ್ಯಾಮೆರಾದ ಹಾರ್ಡ್ ಡಿಸ್ಕ್ ಕದ್ದೋಯ್ದಿದ್ದಾನೆ. ಅಷ್ಟೇ ಅಲ್ಲದೆ, ಪತ್ರ ಬರೆದ ವೇಳೆಯ ಯಾವುದೇ ಪುರಾವೆಗಳನ್ನು ಬಿಟ್ಟಿಲ್ಲ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು