AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಭಾರೀ ಮಳೆಗೆ ರಸ್ತೆ ಕಾಣದೆ ಚರಂಡಿ ಗುಂಡಿಗೆ ಬಿದ್ದ ಮಗು ಮತ್ತು ಮೂರು ಮಹಿಳೆಯರು

ಮಳೆಗಾಲದಲ್ಲಿ ಮಳೆ ನೀರು ಹರಿದು ಹೋಗಲು ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದಿದ್ದರೆ ಆ ನೀರು ರಸ್ತೆಯಲ್ಲಿ ತುಂಬಿ ಹೋಗುತ್ತದೆ. ಹೀಗೆ ಮಳೆ ನೀರಿನಿಂದ ರಸ್ತೆ ಕಾಣದೆ ಅಪಘಾತಗಳು ಸಂಭವಿಸಿದ ಘಟನೆಗಳು ಈ ಹಿಂದೆಯೂ ನಡೆದಿವೆ. ಇದೀಗ ಅಂತಹದೇ ಘಟನೆಯೊಂದು ನಡೆಸಿದ್ದು, ಆಕಡೆಯಿಂದ ರಸ್ತೆ ದಾಟಿ ಈ ಕಡೆ ಬರುತ್ತಿದ್ದ ಮೂವರು ಮಹಿಳೆಯರು ಭಾರೀ ಮಳೆಗೆ ರಸ್ತೆ ಕಾಣದೆ ಮಗುವಿನ ಸಮೇತ ರಸ್ತೆ ಮಧ್ಯದಲ್ಲಿದ್ದ ತೆರೆದ ಚರಂಡಿ ಹೊಂಡಕ್ಕೆ ಬಿದ್ದಿದ್ದಾರೆ. ಈ ಕುರಿತ ವಿಡಿಯೋ ಇದೀಗ ವೈರಲ್ ಆಗುತ್ತಿದೆ.

Video: ಭಾರೀ ಮಳೆಗೆ ರಸ್ತೆ ಕಾಣದೆ ಚರಂಡಿ ಗುಂಡಿಗೆ ಬಿದ್ದ ಮಗು ಮತ್ತು ಮೂರು ಮಹಿಳೆಯರು
ವೈರಲ್​​ ವಿಡಿಯೋ
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​|

Updated on: Aug 21, 2024 | 5:18 PM

Share

ರಸ್ತೆ ಪಕ್ಕದಲ್ಲಿನ ತೆರೆದ ಚರಂಡಿ ಗುಂಡಿಗಳನ್ನು ಮುಚ್ಚುವುದು ಅಥವಾ ಚರಂಡಿ ದುರಸ್ತಿಯ ಸಮಯದಲ್ಲಿ ಬ್ಯಾರಿಕೇಡ್ ಇಲ್ಲವೇ ಎಚ್ಚರಿಕೆಯ ಫಲಕವನ್ನು ಅಳವಡಿಸಿವುದು ಅಧಿಕಾರಿಗಳ ಕರ್ತವ್ಯ. ಹೀಗೆ ಸಂಬಂಧಪಟ್ಟ ಅಧಿಕಾರಿಗಳು ಸರಿಯಾದ ರೀತಿಯಲ್ಲಿ ಕರ್ತವ್ಯ ನಿರ್ವಹಿಸದೆ ಚರಂಡಿ ಗುಂಡಿಗಳಿಗೆ ಬಿದ್ದು ಅಮಾಯಕ ಜನ ಪ್ರಾಣ ಕಳೆದುಕೊಂಡಿದ್ದಾರೆ. ಮಳೆಗಾಲದಲ್ಲಂತೂ ಈ ಸಮಸ್ಯೆ ತೀರಾ ಹೆಚ್ಚಿರುತ್ತದೆ. ಹೌದು ಮಳೆ ನೀರಿಗೆ ರಸ್ತೆ ಕಾಣದೆ ಕೆಲವೊಬ್ಬರು ಸೀದಾ ಚರಂಡಿ ಗುಂಡಿಗೆ ಕಾಲಿಟ್ಟು ಬಿಡುತ್ತಾರೆ. ಅದೇ ರೀತಿ ಇಲ್ಲೊಂದು ಘಟನೆಯೂ ನಡೆದಿದ್ದು, ಆಕಡೆಯಿಂದ ರಸ್ತೆ ದಾಟಿ ಈ ಕಡೆ ಬರುತ್ತಿದ್ದ ಮೂವರು ಮಹಿಳೆಯರು ಭಾರೀ ಮಳೆಗೆ ರಸ್ತೆ ಕಾಣದೆ ಮಗುವಿನ ಸಮೇತ ಆ ಮೂವರು ದೊಪ್ಪನೆ ತೆರೆದ ಚರಂಡಿ ಹೊಂಡಕ್ಕೆ ಬಿದ್ದಿದ್ದಾರೆ. ತಕ್ಷಣ ಸ್ಥಳೀಯರ ಸಹಾಯಕ್ಕೆ ಧಾವಿಸಿ ಮಗು ಮತ್ತು ಆ ಮಹಿಳೆಯರನ್ನು ರಕ್ಷಿಸಿದ್ದಾರೆ. ಈ ಕುರಿತ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಮಂಗಳವಾರ ಸಂಜೆ (ಆ. 20) ತಮಿಳುನಾಡಿನ ಸತ್ತೂರಿನಲ್ಲಿ ಈ ಘಟನೆ ನಡೆದಿದ್ದು, ಮಳೆ ನೀರು ರಸ್ತೆ ಪೂರ್ತಿ ತುಂಬಿದ್ದರಿಂದ ರಸ್ತೆ ಕಾಣದೆ ಮೂವರು ಮಹಿಳೆಯರು ಮಗುವಿನ ಸಮೇತ ತೆರೆದ ಚರಂಡಿ ಗುಂಡಿಗೆ ಬಿದ್ದಿದ್ದಾರೆ. ಚರಂಡಿ ನಿರ್ಮಾಣಕ್ಕಾಗಿ ರಾಜ್ಯ ಹೆದ್ದಾರಿ ಇಲಾಖೆಯು ರಸ್ತೆ ಪಕ್ಕ ಸುಮಾರು ಮೂರು ಅಡಿ ಆಳದ ಕಂದಕವನ್ನು ಅಗೆದಿತ್ತು. ಆದರೆ ಅಲ್ಲಿ ಯಾವುದೇ ರೀತಿಯ ಬ್ಯಾರಿಕೇಡ್ ಅಥವಾ ಇನ್ನಾವುದೇ ಎಚ್ಚರಿಕೆ ಫಲಕವನ್ನು ಆಳವಡಿಸಿರಲಿಲ್ಲ. ಇದರಿಂದ ರಸ್ತೆ ದಾಟುವಾಗ ಮಳೆ ನೀರಿಗೆ ರಸ್ತೆ ಕಾಣದೆ ಮಹಿಳೆಯರು ಚರಂಡಿ ಗುಂಡಿಗೆ ಬಿದ್ದಿದ್ದಾರೆ. ಸ್ಥಳೀಯರ ಸಹಾಯದಿಂದ ಅದೃಷ್ಟವಶಾತ್ ಈ ನಾಲ್ಕು ಜನ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ದೃಶ್ಯ ಅಲ್ಲಿದ್ದ ಅಂಗಡಿಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಈ ಕುರಿತ ಪೋಸ್ಟ್ ಒಂದನ್ನು ಸುಂದರ್ ಸುಬ್ಬಯ್ಯ (Sundar Subbiah) ಎಂಬವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವೈರಲ್ ವಿಡಿಯೋದಲ್ಲಿ ಮೂವರು ಮಹಿಳೆಯರು ಅತ್ತ ಕಡೆಯಿಂದ ಇತ್ತ ಕಡೆ ಬರಲು ರಸ್ತೆ ದಾಟುತ್ತಿರುವ ದೃಶ್ಯವನ್ನು ಕಾಣಬಹುದು. ಭಾರೀ ಮಳೆಯ ಕಾರಣ ರಸ್ತೆ ತುಂಬೆಲ್ಲಾ ನೀರು ತುಂಬಿದ್ದರಿಂದ ಸರಿಯಾಗಿ ರಸ್ತೆ ಕಾಣದೆ ಆ ಮೂವರು ಮಗುವಿನ ಸಮೇತ ಚರಂಡಿ ಗುಂಡಿಗೆ ಬಿದ್ದಿದ್ದಾರೆ. ತಕ್ಷಣ ಸ್ಥಳೀಯರು ಓಡಿ ಹೋಗಿ ಆ ನಾಲ್ಕು ಜನರನ್ನು ರಕ್ಷಣೆ ಮಾಡಿದ್ದಾರೆ.

ಇದನ್ನೂ ಓದಿ: ಅಮ್ಮನ ಜತೆ ನನ್ನನ್ನೂ ಮಣ್ಣು ಮಾಡಿ, ಅವಳನ್ನು ಬಿಟ್ಟಿರಲಾರೆ, ತಾಯಿ ದೇಹವನ್ನು ಬಿಗಿದಪ್ಪಿದ ಕೋತಿ ಮರಿ

ದುರಸ್ತಿಯ ವೇಳೆ ಚರಂಡಿಯ ಸುತ್ತಲೂ ಎಚ್ಚರಿಕೆಯ ಫಲಕಗಳು ಮತ್ತು ಬ್ಯಾರಿಕೇಡ್ ಗಳನ್ನು ಅಳವಡಿಸದೆ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ಬಗ್ಗೆ ಸ್ಥಳೀಯರು ಆಕ್ರೋಶ ಹೊರ ಹಾಕಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?