AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಚೆನ್ನೈನಲ್ಲಿ ಆಟೋದಲ್ಲಿ ಪ್ರಯಾಣಿಸಿದ ಸ್ಟಾರ್​ ನಟನ ಸರಳತೆ ನೋಡಿ ಅಭಿಮಾನಿಗಳು ಫುಲ್​ ಖುಷ್​

Valimai ಸಿನಿಮಾ ಬಗ್ಗೆ ಅಜಿತ್ ಅಭಿಮಾನಿಗಳು ಸಿಕ್ಕಾಪಟೆ ಕಾತರದಿಂದ ಕಾಯುತ್ತಿದ್ದು, ಮೇ 1, ಅಜಿತ್​ ಕುಮಾರ್​ ಅವರ 50ನೇ ಹುಟ್ಟುಹಬ್ಬದ ದಿನ ಚಿತ್ರದ ಫಸ್ಟ್​ ಲುಕ್​ನ್ನು ಬಿಡುಗಡೆ ಮಾಡುವುದಾಗಿ ಬೋನಿಕಪೂರ್ ಇತ್ತೀಚೆಗಷ್ಟೇ ತಿಳಿಸಿದ್ದಾರೆ.

Viral Video: ಚೆನ್ನೈನಲ್ಲಿ ಆಟೋದಲ್ಲಿ ಪ್ರಯಾಣಿಸಿದ ಸ್ಟಾರ್​ ನಟನ ಸರಳತೆ ನೋಡಿ ಅಭಿಮಾನಿಗಳು ಫುಲ್​ ಖುಷ್​
ಆಟೋದಲ್ಲಿ ಪ್ರಯಾಣಿಸುತ್ತಿರುವ ತಮಿಳು ಸ್ಟಾರ್ ನಟ
Lakshmi Hegde
|

Updated on: Mar 20, 2021 | 5:59 PM

Share

ತಮಿಳು ಸ್ಟಾರ್​ ನಟ ಅಜಿತ್​ ಕುಮಾರ್​ ತುಂಬ ಸರಳ ವ್ಯಕ್ತಿ. ಅಷ್ಟು ದೊಡ್ಡ ಸ್ಟಾರ್ ಆದರೂ ಸಾಮಾನ್ಯರಂತೆ ಇರುತ್ತಾರೆ. ಇದೇ ಕಾರಣಕ್ಕೆ ಅಭಿಮಾನಿಗಳಿಗೂ ಹತ್ತಿರವಾಗಿದ್ದಾರೆ. ಅಜಿತ್​ ಸಿನಿಲೋಕಕ್ಕೆ ಬಂದ ಪ್ರಾರಂಭದ ದಿನಗಳಲ್ಲಿ ಬಹುತೇಕ ಲವರ್ ಬಾಯ್​ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದರು. ಅವರ ಬಹುತೇಕ ಸಿನಿಮಾಗಳು ತೆಲುಗು ಭಾಷೆಯಲ್ಲಿ ಡಬ್​ ಆಗಿವೆ. ಎಷ್ಟೇ ದೊಡ್ಡ ನಟನಾದರೂ ಇವರು ಮ್ಯಾನ್​ ಆಫ್​ ಸಿಂಪ್ಲಿಸಿಟಿ (ಸರಳ ವ್ಯಕ್ತಿ)ಎಂದೇ ಪ್ರಸಿದ್ಧರಾಗಿದ್ದಾರೆ. ಇವರ ಸರಳತೆಗೆ ಸಾಕ್ಷಿಯಾಗುವ ವಿಡಿಯೋಗಳನ್ನು ಅವರ ಅಭಿಮಾನಿಗಳು ಆಗಾಗ ಟ್ವಿಟರ್​, ಇನ್​ಸ್ಟಾಗ್ರಾಂನಲ್ಲಿ ಆಗಾಗ ಶೇರ್​ ಮಾಡುತ್ತಿರುತ್ತಾರೆ.

ಇತ್ತೀಚೆಗಷ್ಟೇ ಹೈದರಾಬಾದ್​ನ ರಸ್ತೆಗಳಲ್ಲಿ ಅಜಿತ್ ಅವರು ಸೈಕಲ್​ ಹೊಡೆಯುತ್ತಿರುವ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿತ್ತು. ಹಾಗೇ ಇದೀಗ ಅಜಿತ್ ಸಾಮಾನ್ಯರಂತೆ ಆಟೋದಲ್ಲಿ ಪ್ರಯಾಣ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟೆ ಸದ್ದುಮಾಡುತ್ತಿದೆ. ಅಜಿತ್​ ನಟನೆಯ ಥ್ರಿಲ್ಲರ್ ಸಿನಿಮಾ ವಲಿಮೈ ಮುಂಬರುವ ಆಗಸ್ಟ್​ನಲ್ಲಿ ಬಿಡುಗಡೆಯಾಗಲಿದೆ ಎಂದು ಹೇಳಲಾಗಿದೆ.

ಬೋನಿಕಪೂರ್​ ನಿರ್ಮಾಣ ಮಾಡಿ, ಎಚ್​.ವಿನೋದ್​ ನಿರ್ದೇಶಿಸಿರುವ ವಲಿಮೈ ಬಿಡುಗಡೆಗೆ ಕೊವಿಡ್-19 ಅಡ್ಡಿಯಾಗುತ್ತಿದೆ. ಸಿನಿಮಾ ಬಗ್ಗೆ ಯಾವುದೇ ಅಪ್ಡೇಟ್ಸ್​ ಸಿಗುತ್ತಿಲ್ಲ ಎಂದು ಬೇಸರದಲ್ಲಿದ್ದ ಅಭಿಮಾನಿಗಳು ಅಜಿತ್ ಕುಮಾರ್​​ರನ್ನು​ ಚೆನ್ನೈನಲ್ಲಿ ಆಟೋದಲ್ಲಿ ನೋಡಿ ಫುಲ್ ಖುಷಿಯಾಗಿದ್ದಾರೆ. ಸಂಪೂರ್ಣ ಕಪ್ಪು ಬಟ್ಟೆಯನ್ನೇ ಧರಿಸಿದ್ದ ಅಜಿತ್ ಕುಮಾರ್​, ಮುಖಕ್ಕೆ ಮಾಸ್ಕ್​ ಹಾಕಿದ್ದರು. ಆಟೋದಲ್ಲಿ ಒಬ್ಬರೇ ಇದ್ದ ಅವರ ವಿಡಿಯೋವನ್ನು ಸಾರ್ವಜನಿಕರು ಯಾರೋ ಚಿತ್ರೀಕರಿಸಿ, ಸೋಷಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ್ದಾರೆ. ಅದನ್ನೀಗ ಅನೇಕರು ಶೇರ್ ಮಾಡಿಕೊಂಡಿದ್ದಾರೆ.

ವಲಿಮೈ ಬಗ್ಗೆ ಅಜಿತ್ ಅಭಿಮಾನಿಗಳು ಸಿಕ್ಕಾಪಟೆ ಕಾತರದಿಂದ ಕಾಯುತ್ತಿದ್ದು, ಮೇ 1, ಅಜಿತ್​ ಕುಮಾರ್​ ಅವರ 50ನೇ ಹುಟ್ಟುಹಬ್ಬದ ದಿನ ಚಿತ್ರದ ಫಸ್ಟ್​ ಲುಕ್​ನ್ನು ಬಿಡುಗಡೆ ಮಾಡುವುದಾಗಿ ಬೋನಿಕಪೂರ್ ಇತ್ತೀಚೆಗಷ್ಟೇ ತಿಳಿಸಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್