AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಟಾರ್ಗೆಟ್ ಮಾತ್ರ ಹೆಚ್ಚಾಗ್ತವೆ, ಸಂಬಳವಲ್ಲ; ರಿಸೈನ್ ಲೆಟರ್‌ನಲ್ಲಿ ಉದ್ಯೋಗಿ ಹೇಳಿದ್ದಿಷ್ಟೇ

ಸೋಶಿಯಲ್ ಮೀಡಿಯಾದಲ್ಲಿ ಉದ್ಯೋಗಿಗಗಳ ರಾಜೀನಾಮೆ ಪತ್ರದ ಫೋಟೋ ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಉದ್ಯೋಗ ತೊರೆಯುವಾಗ ಔಪಚಾರಿಕವಾಗಿ ರಾಜೀನಾಮೆ ನೀಡುವುದನ್ನು ನೀವು ನೋಡಿರುತ್ತೀರಿ. ಇದೀಗ ಉದ್ಯೋಗಿಯ ರಾಜೀನಾಮೆ ಪತ್ರವೊಂದು ವೈರಲ್ ಆಗಿದ್ದು, ಆದರೆ ಜಾಬ್ ರಿಸೈನ್ ಮಾಡುವ ನಿರ್ಧಾರ ಹಿಂದಿನ ಕಾರಣ ತಿಳಿದ್ರೆ ನೀವು ಶಾಕ್ ಆಗ್ತೀರಾ. ಈ ಬಗ್ಗೆ ಉದ್ಯೋಗಿಯೂ ಲೆಟರ್‌ನಲ್ಲಿ ಉಲ್ಲೇಖಿಸಿದ್ದು, ಈ ಕುರಿತಾದ ಸ್ಟೋರಿ ಇಲ್ಲಿದೆ.

Viral: ಟಾರ್ಗೆಟ್ ಮಾತ್ರ ಹೆಚ್ಚಾಗ್ತವೆ, ಸಂಬಳವಲ್ಲ; ರಿಸೈನ್ ಲೆಟರ್‌ನಲ್ಲಿ ಉದ್ಯೋಗಿ ಹೇಳಿದ್ದಿಷ್ಟೇ
ಸಾಂದರ್ಭಿಕ ಚಿತ್ರImage Credit source: Pinterest
ಸಾಯಿನಂದಾ
|

Updated on: Oct 19, 2025 | 12:00 PM

Share

ಟಾಂಜಾನಿಯಾ, ಅಕ್ಟೋಬರ್ 19: ಕೆಲವರು ತಮ್ಮ ಕೆಲಸದ (Job) ಸ್ಥಳದಲ್ಲಿ ಅನುಭವಿಸುವ ಕಷ್ಟ ಹೇಳಲಾಗದು. ಈ ಒತ್ತಡಭರಿತ ಕೆಲಸದಿಂದಾಗಿ ಈ ಉದ್ಯೋಗ ಬೇಡ ಎನ್ನುವ ನಿರ್ಧಾರಕ್ಕೆ ಕೆಲವರು ಬರುವವರೇ ಹೆಚ್ಚು. ಕೆಲ ಸ್ಥಳಗಳಲ್ಲಿ ಬಾಸ್ ಕಿರಿಕಿರಿ ಹೆಚ್ಚೇ ಇರುತ್ತದೆ. ಈ ಕಾರಣದಿಂದಾಗಿ ರಾಜೀನಾಮೆ ನೀಡುತ್ತಾರೆ. ಈ ಉದ್ಯೋಗಿಯದ್ದು ಇದೇ ಗೋಳು. ಟಾಂಜಾನಿಯಾದಲ್ಲಿರುವ ಜೇ ಡೆಕೋರ್ ಕಂಪನಿಯ (Jay decor) ಉದ್ಯೋಗಿಯೂ ಬಾಸ್ ಕಿರಿಕಿರಿ ತಾಳಲಾರದೆ ಜಾಬ್ ರಿಸೈನ್ ಮಾಡಿದ್ದಾನೆ. ಇದೀಗ ಉದ್ಯೋಗಿ ನೀಡಿದ ರಾಜೀನಾಮೆ ಪತ್ರ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

ಉದ್ಯೋಗಿಯ ರಾಜೀನಾಮೆ ಪತ್ರದಲ್ಲಿ ಏನಿದೆ?

ಸ್ವತಃ ಕಂಪನಿಯೂ ಜೇ ಡೆಕೋರ್ ಹೆಸರಿನ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಲಾದ ಈ ಪೋಸ್ಟ್ ನಲ್ಲಿ ಎಸಿ ಮಿಂಜಾ ಎಂಬ ಉದ್ಯೋಗಿ ತನ್ನ ಬಾಸ್ ಮತ್ತು ಕಂಪನಿಯ ರೂಲ್ಸ್ ಗಳಿಂದ ಬೇಸೆತ್ತು ರಾಜೀನಾಮೆ ನೀಡಿದ್ದಾನೆ. ಈ ರಾಜೀನಾಮೆ ಪತ್ರದಲ್ಲಿ ಉದ್ಯೋಗಿಯೂ ಈ ಕಂಪನಿಯಲ್ಲಿ ಟಾರ್ಗೆಟ್ ಮಾತ್ರ ಹೆಚ್ಚಾಗ್ತವೆ, ಸಂಬಳವಲ್ಲ. ನಾನು ರಾಜೀನಾಮೆ ನೀಡುತ್ತಿದ್ದೇನೆ. ಇಲ್ಲಿ ನಾನು ಕೆಲಸ ಮಾಡುತ್ತೇನೆ. ಆದರೆ, ನಾನು ಮ್ಯಾಜಿಕ್ ಮಾಡುವುದಿಲ್ಲ ಎಂದು ಪತ್ರದಲ್ಲಿ ತಿಳಿಸಿದ್ದಾನೆ.

ಇದನ್ನೂ ಓದಿ
Image
ಇಂಟರ್ವ್ಯೂನಲ್ಲಿ ಯುವತಿಯನ್ನು ರಿಜೆಕ್ಟ್ ಮಾಡಿದ ಕಂಪನಿ, ಮುಂದೇನಾಯ್ತು ನೋಡಿ
Image
ಕೆಲಸದ ಬಗ್ಗೆ ಮೆಚ್ಚುಗೆಯ ಮಾತುಗಳಿಲ್ಲ; ಕೆಲಸ ಬಿಡಲು ಕಾರಣ ತಿಳಿಸಿದ ಮಹಿಳೆ
Image
ಪೈಲ್ಸ್​​​ ಆಗಿದೆ, ರಜೆ ಕೊಡಿ ಅಂದ್ರೆ ಮ್ಯಾನೇಜರ್ ಹೇಳಿದ್ದೇನು ಗೊತ್ತಾ?​​
Image
ರಾತ್ರಿ ಒಂಬತ್ತಾದ್ರೂ ಮುಗಿಯದ ವರ್ಕ್, ಮಹಿಳೆಯ ಕೆಲಸ ನೋಡಿ ಅಚ್ಚರಿಪಟ್ಟ ವ್ಲಾ

ವೈರಲ್ ಪೋಸ್ಟ್ ಇಲ್ಲಿದೆ ನೋಡಿ

ಇದನ್ನೂ ಓದಿ:Viral: ಹೈಲಿ ಕ್ವಾಲಿಫೈಡ್‌ ಎಂದು ಇಂಟರ್ವ್ಯೂನಲ್ಲಿ ಯುವತಿಯನ್ನು ರಿಜೆಕ್ಟ್ ಮಾಡಿದ ಕಂಪನಿ, ಮುಂದೇನಾಯ್ತು ಗೊತ್ತಾ?

ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆ ಈ ವ್ಯಕ್ತಿಯ ಧೈರ್ಯವನ್ನು ಮೆಚ್ಚಿದ್ದಾರೆ. ಒಬ್ಬ ಬಳಕೆದಾರರು ಇದ್ದದ್ದನ್ನು ಇದ್ದ ಹಾಗೆ ಹೇಳಲು ಗುಂಡಿಗೆ ಬೇಕು ಎಂದಿದ್ದಾರೆ. ಮತ್ತೊಬ್ಬರು ಈ ವ್ಯಕ್ತಿ ಅತೀ ಬುದ್ಧಿವಂತ ಎಂದು ಹೇಳಿದ್ದಾರೆ. ರಾಜೀನಾಮೆ ಪತ್ರದಲ್ಲಿ ಬರೆದಿರುವ ಸಾಲುಗಳು ಸಣ್ಣದಾಗಿದ್ದರೂ ಕ್ಲಿಯರ್ ಆಗಿದೆ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನು ಕೆಲವರು ಈ ರಾಜೀನಾಮೆ ಪತ್ರ ನೋಡಿ ನಗುವ ಇಮೋಜಿ ಕಳುಹಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬೇಸಿಗೆ ಧಗೆ ಹೆಚ್ಚಾಗುತ್ತಿದ್ದಂತೆ ಚಿಲ್ ಬಿಯರ್‌ಗೆ ಭಾರಿ ಡಿಮ್ಯಾಂಡ್
ಬೇಸಿಗೆ ಧಗೆ ಹೆಚ್ಚಾಗುತ್ತಿದ್ದಂತೆ ಚಿಲ್ ಬಿಯರ್‌ಗೆ ಭಾರಿ ಡಿಮ್ಯಾಂಡ್
ಪ್ರತಿಕೃತಿ ಸುಡುವಾಗ ಬಿಜೆಪಿ ಶಾಸಕಿ ಕೂದಲಿಗೆ ಹೊತ್ತಿದ ಬೆಂಕಿ
ಪ್ರತಿಕೃತಿ ಸುಡುವಾಗ ಬಿಜೆಪಿ ಶಾಸಕಿ ಕೂದಲಿಗೆ ಹೊತ್ತಿದ ಬೆಂಕಿ
ಡಾ. ರಾಜ್ ಸಮಾಧಿ ವಿವಾದ: ನಾನು ಹೇಳಿದ ವಿಚಾರ ಸುಳ್ಳಲ್ಲ ಎಂದ ಚೇತನ್ ಅಹಿಂಸಾ
ಡಾ. ರಾಜ್ ಸಮಾಧಿ ವಿವಾದ: ನಾನು ಹೇಳಿದ ವಿಚಾರ ಸುಳ್ಳಲ್ಲ ಎಂದ ಚೇತನ್ ಅಹಿಂಸಾ
ರೈಲು ಹತ್ತಲು ಹೋಗಿ ಕಾಲು ಜಾರಿ ಬಿದ್ದು ಪ್ರಾಣ ಕಳೆದುಕೊಂಡ ಮಹಿಳೆ
ರೈಲು ಹತ್ತಲು ಹೋಗಿ ಕಾಲು ಜಾರಿ ಬಿದ್ದು ಪ್ರಾಣ ಕಳೆದುಕೊಂಡ ಮಹಿಳೆ
ಮೇ 15ಕ್ಕೆ ಗುಡ್ ನ್ಯೂಸ್ ಸಿಗತ್ತಾ? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆಶಿ!
ಮೇ 15ಕ್ಕೆ ಗುಡ್ ನ್ಯೂಸ್ ಸಿಗತ್ತಾ? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆಶಿ!
ಬರಿದಾದ ಜಲಾಶಯವೇ ಮಕ್ಕಳಿಗೀಗ ಕ್ರಿಕೆಟ್​​ ಮೈದಾನ!
ಬರಿದಾದ ಜಲಾಶಯವೇ ಮಕ್ಕಳಿಗೀಗ ಕ್ರಿಕೆಟ್​​ ಮೈದಾನ!
ನಡುರಸ್ತೆಯಲ್ಲಿ ಒಂಟಿ‌ ಕೋರೆ‌ ಸಲಗದ ಬಿಂದಾಸ್ ವಾಕ್!
ನಡುರಸ್ತೆಯಲ್ಲಿ ಒಂಟಿ‌ ಕೋರೆ‌ ಸಲಗದ ಬಿಂದಾಸ್ ವಾಕ್!
ಅಕ್ರಮ ಗೋ ಸಾಗಾಟ ವಾಹನ ತಡೆದು 23 ಗೋವುಗಳನ್ನು ರಕ್ಷಿಸಿದ BJP ಶಾಸಕ
ಅಕ್ರಮ ಗೋ ಸಾಗಾಟ ವಾಹನ ತಡೆದು 23 ಗೋವುಗಳನ್ನು ರಕ್ಷಿಸಿದ BJP ಶಾಸಕ
ಡಾ. ರಾಜ್​ಕುಮಾರ್ ಸಮಾಧಿ ವಿವಾದ: ಕ್ಷಮೆ ಕೇಳುವಾಗ ಸತಾಯಿಸಿದ್ರಾ ನಟ ಚೇತನ್?
ಡಾ. ರಾಜ್​ಕುಮಾರ್ ಸಮಾಧಿ ವಿವಾದ: ಕ್ಷಮೆ ಕೇಳುವಾಗ ಸತಾಯಿಸಿದ್ರಾ ನಟ ಚೇತನ್?
ವೈಟ್​ಹೌಸ್​ನಲ್ಲಿ ಗುಂಡಿನ ದಾಳಿ ನಡೆಸಿದ ವ್ಯಕ್ತಿಯ ಫೋಟೊ ಬಿಡುಗಡೆ
ವೈಟ್​ಹೌಸ್​ನಲ್ಲಿ ಗುಂಡಿನ ದಾಳಿ ನಡೆಸಿದ ವ್ಯಕ್ತಿಯ ಫೋಟೊ ಬಿಡುಗಡೆ