AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral : ಕನ್ನಡ ಮಾತಾಡೋ ಹಾಗಿದ್ರೆ ಮಾತ್ರ ಅಂಗಡಿಗೆ ಬಾ ಪರಭಾಷಿಕನಿಗೆ ಖಡಕ್ ವಾರ್ನಿಂಗ್ ಕೊಟ್ಟ ಮಹಿಳೆ

ಈಗಿನ ಕಾಲದಲ್ಲಿ ಇಂಗ್ಲೀಷ್ ನಲ್ಲಿ ಮಾತಾಡಿದರೆ ಗೌರವ ಹೆಚ್ಚು ಎನ್ನುವ ಭಾವನೆ ಅನೇಕರಲ್ಲಿದೆ. ಹೀಗಾಗಿ ಕನ್ನಡ ಮಾತನಾಡಲು ಗೊತ್ತಿದ್ದರೂ ಕೂಡ ಇಂಗ್ಲೀಷ್ ನಲ್ಲಿ ವ್ಯವಹರಿಸುವವರೇ ಹೆಚ್ಚು. ಆದರೆ ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಸಣ್ಣ ಟೀ ಸ್ಟಾಲ್‌ ನಡೆಸುತ್ತಿರುವ ಮಹಿಳೆಯೊಬ್ಬರು ವ್ಯಕ್ತಿಯೊಬ್ಬನಿಗೆ ಕನ್ನಡ ಮಾತನಾಡು ಎಂದು ಖಡಕ್ ಆಗಿ ಹೇಳಿದ್ದಾರೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಈ ಮಹಿಳೆಯ ಕನ್ನಡ ಉಳಿಸಬೇಕು ಬೆಳೆಸಬೇಕು ಎನ್ನುವ ಭಾವನೆಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Viral : ಕನ್ನಡ ಮಾತಾಡೋ ಹಾಗಿದ್ರೆ ಮಾತ್ರ ಅಂಗಡಿಗೆ ಬಾ ಪರಭಾಷಿಕನಿಗೆ ಖಡಕ್ ವಾರ್ನಿಂಗ್ ಕೊಟ್ಟ ಮಹಿಳೆ
ವೈರಲ್ ವಿಡಿಯೋImage Credit source: Twitter
ಸಾಯಿನಂದಾ
|

Updated on: Apr 25, 2025 | 10:50 AM

Share

ನಾವುಗಳು ಇಂಗ್ಲೀಷ್ (english) ಭಾಷೆಯಲ್ಲಿಯೇ ಮಾತನಾಡುವ ಮೂಲಕ ನಮ್ಮ ಭಾಷೆಯನ್ನೇ ಕಡೆಗಣಿಸುತ್ತಿದ್ದೇವೆ. ಹೀಗಾಗಿ ಕರ್ನಾಟಕ (karnataka) ದಲ್ಲಿ ಕನ್ನಡ ಮಾತನಾಡಿ ಎನ್ನುವ ಆಕ್ರೋಶಭರಿತ ಮಾತುಗಳು ಕೇಳಬರುತ್ತಿರುತ್ತವೆ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಸಣ್ಣ ಟೀ ಸ್ಟಾಲ್‌ ನಡೆಸುತ್ತಿರುವ ಮಹಿಳೆಯೊಬ್ಬರು ವ್ಯಕ್ತಿಯೊಬ್ಬನಿಗೆ ಕನ್ನಡದಲ್ಲಿ ಮಾತನಾಡಿದ್ರೆ ಮಾತ್ರ ನನ್ನ ಅಂಗಡಿಗೆ ಬಾ ಎಂದು ಖಡಕ್ ವಾರ್ನಿಂಗ್ ನೀಡಿದ್ದಾರೆ. ಈ ವಿಡಿಯೋವೊಂದು ಸೋಶಿಯಲ್ ಮೀಡಿಯಾ ದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

ಕನ್ನಡ ಮನಸುಗಳು ಕರ್ನಾಟಕ ಹೆಸರಿನ ಖಾತೆಯಲ್ಲಿ ಈ ವಿಡಿಯೋವನ್ನು ಶೇರ್ ಮಾಡಿಕೊಳ್ಳಲಾಗಿದೆ. ಈ ವಿಡಿಯೋದಲ್ಲಿ ಮಹಿಳೆಯೊಬ್ಬರು ಸಣ್ಣ ಟೀ ಸ್ಟಾಲ್ ನಡೆಸುತ್ತಿರುವುದನ್ನು ನೋಡಬಹುದು. ಈ ಸ್ಟಾಲ್ ಗೆ ವ್ಯಕ್ತಿಯೊಬ್ಬನು ಬಂದಿದ್ದಾನೆ. ಪರಭಾಷಾ ವ್ಯಕ್ತಿಯೂ ಕನ್ನಡ ಮಾತನಾಡದೇ ತನ್ನದೇ ಭಾಷೆಯಲ್ಲೇ ಏನನ್ನೋ ಕೇಳಿದ್ದಾನೆ. ಇದರಿಂದ ಕೋಪಗೊಂಡ ಮಹಿಳೆ, ʼಏಯ್‌.. ಕನ್ನಡದಲ್ಲಿ ಕೇಳು. ಕನ್ನಡ ಮಾತಾಡೋ ಹಾಗಿದ್ರೆ ಅಂಗಡಿ ಹತ್ರ ಬಾ.. ಇಲ್ಲ ಬರಬೇಡʼ ಎಂದು ಖಡಕ್ ಆಗಿ ಹೇಳಿರುವುದನ್ನು ನೋಡಬಹುದು. ಅಷ್ಟೇ ಅಲ್ಲದೇ ನಾಳೆಯಿಂದ ಕನ್ನಡ ಮಾತನಾಡಿದ್ರೆ ಮಾತ್ರ ಐಟಂ ಇಲ್ಲದಿದ್ರೆ ಇಲ್ಲ ಎಂದು ಎಚ್ಚರಿಕೆ ಕೂಡ ನೀಡಿದ್ದಾಳೆ. ಈ ವಿಡಿಯೋವನ್ನು ಮೊಬೈಲ್ ಕ್ಯಾಮೆರಾದಲ್ಲಿ ಸೆರೆ ಹಿಡಿಯುತ್ತಿದ್ದ ವ್ಯಕ್ತಿಯ ಜೊತೆಗೂ ಮಾತನಾಡಿದ್ದು, ಎಲ್ಲರಿಗೂ ನಾನು ನಿನ್ನೆಯಿಂದ ಅದನ್ನೇ ಹೇಳ್ತಾ ಇರೋದು ಸರ್, ಕನ್ನಡ ಮಾತಾನಾಡಡಿದ್ರೆ ಐಟಂ ಕೊಡುವುದೇ ಇಲ್ಲ ಎಂದಿದ್ದಾರೆ.

ಇದನ್ನೂ ಓದಿ
Image
ಚೀನಾದ ಈ ರೆಸ್ಟೋರೆಂಟ್ ನಲ್ಲಿ ಆನೆ ಲದ್ದಿಯಿಂದ ತಯಾರಾಗುತ್ತೆ ಸ್ವೀಟ್
Image
ಟ್ರಾಫಿಕ್ ಕ್ಲಿಯರ್ ಮಾಡಿ ಆ್ಯಂಬುಲೆನ್ಸ್ ಹೋಗಲು ದಾರಿ ಮಾಡಿಕೊಟ್ಟ ಮದುಮಗ
Image
ನನಗೆ ಇಷ್ಟ ಇಲ್ಲದಿದ್ರೂ ಅಮ್ಮ ಹೋಮ್ ವರ್ಕ್ ಮಾಡಿಸ್ತಾಳೆ, ಈ ವಿಡಿಯೋ ನೋಡಿ
Image
ಏಳು ವರ್ಷಗಳ ಬಳಿಕ ಸ್ನೇಹಿತರಿಬ್ಬರ ಅನಿರೀಕ್ಷಿತ ಭೇಟಿಯ ಕ್ಷಣ ಇಲ್ಲಿದೆ ನೋಡಿ

ಇದನ್ನೂ ಓದಿ : ಚೀನಾದ ಈ ರೆಸ್ಟೋರೆಂಟ್ ನಲ್ಲಿ ಆನೆ ಲದ್ದಿಯಿಂದ ತಯಾರಾಗುತ್ತೆ ಎಲಿಫೆಂಟ್ ಡಂಗ್ ಡೆಸರ್ಟ್, ಬೆಲೆ ಕೇಳಿದ್ರೆ ಶಾಕ್ ಆಗ್ತೀರಾ

ವೈರಲ್ ವಿಡಿಯೋ ಇಲ್ಲಿದೆ ನೋಡಿ

ಈ ವಿಡಿಯೋವೊಂದು ಹದಿನೈದು ಸಾವಿರಕ್ಕೂ ಅಧಿಕ ವೀಕ್ಷಣೆ ಕಂಡಿದ್ದು ನೆಟ್ಟಿಗರು ಕನ್ನಡ ಉಳಿಯಬೇಕು ಎನ್ನುವ ಈ ಮಹಿಳೆಯ ಕಾಳಜಿಗೆ ಮೆಚ್ಚಿಕೊಂಡಿದ್ದಾರೆ. ಈ ವಿಡಿಯೋಗೆ ಬಳಕೆದಾರರೊಬ್ಬರು, ‘ಕರ್ನಾಟಕಕ್ಕೆ ಜೈ ಅಕ್ಕಂಗೆ ಜೈ’ ಎಂದಿದ್ದಾರೆ. ಮತ್ತೊಬ್ಬರು, ‘ಕನ್ನಡ ಉಳಿಸಬೇಕು ಬೆಳೆಸಬೇಕು ಎನ್ನುವ ಭಾವನೆಯಿರುವ ವ್ಯಕ್ತಿಗಳಿದ್ದರೆ ಮಾತ್ರ ಕರುನಾಡಿನಲ್ಲಿ ಕನ್ನಡ ಭಾಷೆ ಹೆಚ್ಚೆಚ್ಚು ಬಳಕೆಯಾಗಲು ಸಾಧ್ಯ’ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ‘ಕನ್ನಡ ಉಳಿದಿರುವುದು ಮತ್ತು ಬೆಳೆಯುತ್ತಿರುವುದು ಕನ್ನಡ ಮಂದಿಯಿಂದಲೇ ಹೊರತು ಯಾವ ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದಲ್ಲ, ಯಾವ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದಲ್ಲ, ಯಾವ ಕನ್ನಡ ಸಾಹಿತ್ಯ ಪರಿಷತ್ತಿನಿಂದಲ್ಲ!’ ಎಂದಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?