AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಪುಟ್ಟ ಹುಡುಗಿಯ ಹೃದಯ ಸ್ಪರ್ಶಿ ಉಡುಗೊರೆ ನೋಡಿ ಖುಷಿಪಟ್ಟ ಶಿಕ್ಷಕಿ

ತಂದೆ ತಾಯಿಯ ನಂತರ ಮಕ್ಕಳ ಜೀವನದಲ್ಲಿ ಪ್ರಮುಖ ಪಾತ್ರ ವಹಿಸುವವರೇ ಈ ಶಿಕ್ಷಕರು. ಹೀಗಾಗಿ ಶಿಕ್ಷಕರು ಮಕ್ಕಳಿಗೆ ತುಂಬಾನೇ ಫೇವರಿಟ್ ಆಗಿರುತ್ತಾರೆ. ಈಗಿನ ಕಾಲದಲ್ಲಿ ಮಕ್ಕಳ ಜೊತೆಗೆ ಟೀಚರ್ಸ್ ಸ್ನೇಹಿತರಂತೆ ವರ್ತಿಸುತ್ತಾರೆ. ಇತ್ತೀಚೆಗಷ್ಟೇ ಪುಟಾಣಿಯೊಂದು ಶಿಕ್ಷಕಿಗೆ ತನ್ನ ಕೈಯಾರೆ ಮಾಡಿದ ಉಡುಗೊರೆ ನೀಡಿದ್ದು, ಈ ಹೃದಯಸ್ಪರ್ಶಿ ಕ್ಷಣದ ವಿಡಿಯೋ ವೈರಲ್ ಆಗಿದೆ. ಈ ನಿಷ್ಕಲ್ಮಶ ಪ್ರೀತಿಗೆ ನೆಟ್ಟಿಗರು ಮನಸೋತಿದ್ದಾರೆ.

Video: ಪುಟ್ಟ ಹುಡುಗಿಯ ಹೃದಯ ಸ್ಪರ್ಶಿ ಉಡುಗೊರೆ ನೋಡಿ ಖುಷಿಪಟ್ಟ ಶಿಕ್ಷಕಿ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on:Sep 22, 2025 | 3:40 PM

Share

ಮಕ್ಕಳೆಂದರೆ (children) ಹಾಗೆ, ಯಾರು ತಮ್ಮನ್ನು ಅತಿಯಾಗಿ ಕಾಳಜಿ ವಹಿಸ್ತಾರೋ, ಪ್ರೀತಿಸ್ತಾರೋ ಅವರ ಜೊತೆಗೆ ಆತ್ಮೀಯವಾಗಿ ವರ್ತಿಸುತ್ತದೆ. ಪುಟ್ಟ ಮಕ್ಕಳಿಗೆ ಶಿಕ್ಷಕರು ಎಂದರೆ ಅದೇನೋ ಪ್ರೀತಿ, ಹೀಗಾಗಿ ಏನೇ ಇದ್ರೂ ತನ್ನ ಶಿಕ್ಷಕರ ಜೊತೆಗೆ ಹೇಳಿಕೊಳ್ಳುವುದನ್ನು ನೋಡಬಹುದು. ಕಳೆದ ಶಿಕ್ಷಕರ ದಿನಾಚರಣೆಯಂದು ಪುಟ್ಟ ಹುಡುಗಿಯೊಬ್ಬಳು ಸಿಹಿ ಉಡುಗೊರೆ ನೀಡಿ ಶಿಕ್ಷಕಿಗೆ ವಿಶೇಷವಾಗಿ ಶುಭ ಹಾರೈಸಿದ್ದಳು. ಈ ವಿಡಿಯೋ ಸದ್ಯ ವೈರಲ್ ಆಗಿದೆ. ಹೃದಯಕ್ಕೆ ಹತ್ತಿರವಾಗಿರುವ ಈ ದೃಶ್ಯ ಸದ್ಯ ಎಲ್ಲರ ಗಮನ ಸೆಳೆಯುತ್ತಿದೆ.

divyadj ಹೆಸರಿನ ಖಾತೆಯಲ್ಲಿ ಶೇರ್ ಮಾಡಲಾದ ಈ ವಿಡಿಯೋದಲ್ಲಿ ಕಳೆದ ಶಿಕ್ಷಕರ ದಿನಾಚರಣೆಯಂದು ಪುಟ್ಟ ಹುಡುಗಿಯೂ ಶಿಕ್ಷಕಿಯ ಬಳಿ ಬಂದು  ಶುಭ ಹಾರೈಸಿದ್ದು, ತನ್ನ ಕೈಯಾರೆ ಮಾಡಿದ ಉಡುಗೊರೆಯನ್ನು ಶಿಕ್ಷಕಿಗೆ ನೀಡಿರುವುದನ್ನು ನೀವು ನೋಡಬಹುದು. ಕವರ್‌ನಿಂದ ಪೆನ್ ಸುತ್ತಲಾಗಿದೆ. ಈ ಕವರ್ ಒಳಗೆ ಪೆನ್ನು ಹಾಗೂ ಹಜ್ಮೋಲಾ ಇರುವುದನ್ನು ಕಂಡು ಶಿಕ್ಷಕಿಯ ತುಟಿಯಲ್ಲಿ ನಗು ಮೂಡಿದೆ.

ಇದನ್ನೂ ಓದಿ
Image
ಪುಟ್ಟ ಹುಡುಗಿಯ ಬೇಡಿಕೆಗೆ ಸ್ಪಂದಿಸಿದ ಯುವಕ
Image
ಐಸ್ ಕ್ರೀಮ್ ಬಾಯಿಗೆ ಇಟ್ಟೊಡನೆ ಪುಟಾಣಿಯ ರಿಯಾಕ್ಷನ್‌ ಹೇಗಿತ್ತು ನೋಡಿ
Image
ಹಸಿವು ತಾಳಲಾರದೇ ಈ ಪುಟ್ಟ ಬಾಲಕ ಮಾಡಿದ ಕೆಲಸ ನೋಡಿದ್ರೆ ಶಾಕ್‌ ಆಗ್ತೀರಾ
Image
ಟೀಚರ್‌ಗೆ ಗೊತ್ತಾಗದಂತೆ ಬಿಸ್ಕೆಟ್‌ ತಿನ್ನುತ್ತಾ ಸಿಕ್ಕಿ ಬಿದ್ದ ಪುಟಾಣಿ

ವೈರಲ್ ವಿಡಿಯೋ ಇಲ್ಲಿದೆ ನೋಡಿ

View this post on Instagram

A post shared by Divya dj (@divyadj762)

ಇದನ್ನೂ ಓದಿ:Video: ಪುಟ್ಟ ಹುಡುಗಿಯ ಬೇಡಿಕೆಗೆ ಸ್ಪಂದಿಸಿದ ಯುವಕ, ಈ ಹುಡುಗಿಯ ಖುಷಿ ನೋಡಿ

ಈ ವಿಡಿಯೋ ಒಂದು ಮಿಲಿಯನ್ ಗೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ ಯಾವುದೇ ಫಿಲ್ಟರ್ ಇಲ್ಲದ ಶುದ್ಧ ಪ್ರೀತಿ ಎಂದಿದ್ದಾರೆ. ಇನ್ನೊಬ್ಬರು, ಇದು ಶುದ್ಧ, ನಿಷ್ಕಲ್ಮಶ ಪ್ರೀತಿ ಎಂದು ಹೇಳಿದ್ದಾರೆ. ಮತ್ತೊಬ್ಬರು ಈ ಪುಟಾಣಿ ಅಪ್ಪುಗೆ ಅರ್ಹಳು ಎಂದು ಹೇಳಿದ್ದು, ಕೆಲವರು ಹಾರ್ಟ್ ಸಿಂಬಲ್ ಕಳಿಸುವ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:39 pm, Mon, 22 September 25

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಸ್ಲೀಪರ್ ಬಸ್ ಭಸ್ಮವಾದ್ರೂ 36 ಪ್ರಯಾಣಿಕರು ಪಾರಾಗಿದ್ಹೇಗೆ?
ಸ್ಲೀಪರ್ ಬಸ್ ಭಸ್ಮವಾದ್ರೂ 36 ಪ್ರಯಾಣಿಕರು ಪಾರಾಗಿದ್ಹೇಗೆ?