AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂದ ಹೆಚ್ಚಿಸಲು ಬರೋಬ್ಬರಿ 100 ಪ್ಲಾಸ್ಟಿಕ್​ ಸರ್ಜರಿ ಮಾಡಿಸಿದ 18ರ ಯುವತಿ

ಪೂರ್ವ ಚೀನಾದ ಝೌ ಚುನಾ ಎಂಬ ಹುಡುಗಿ 13 ನೇ ವಯಸ್ಸಿನಿಂದ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡು ಬಂದಿದ್ದಾಳೆ. ಅಂದರೆ ಈಗ ಈಕೆಗೆ 18 ವರ್ಷ. ಆಕೆ ತನ್ನ ನೆಚ್ಚಿನ ನಟಿ ಎಥೆಲ್ ಯು ಅವರಂತೆ ಸುಂದರವಾಗಿ ಕಾಣಲು ಇಲ್ಲಿಯವರೆಗೆ 100 ಸರ್ಜರಿಗಳನ್ನು ಮಾಡಿಸಿದ್ದಾಳೆ.

ಅಂದ ಹೆಚ್ಚಿಸಲು ಬರೋಬ್ಬರಿ 100 ಪ್ಲಾಸ್ಟಿಕ್​ ಸರ್ಜರಿ ಮಾಡಿಸಿದ 18ರ ಯುವತಿ
100 ಪ್ಲಾಸ್ಟಿಕ್​ ಸರ್ಜರಿ ಮಾಡಿಸಿದ 18ರ ಯುವತಿ
ಅಕ್ಷತಾ ವರ್ಕಾಡಿ
|

Updated on:Mar 05, 2024 | 11:01 AM

Share

ನೈಸರ್ಗಿಕ ಸೌಂದಯಕ್ಕಿಂತ ತಮ್ಮ ಇಚ್ಛೆಗೆ ತಕ್ಕಂತೆ ಮುಖದ ಅಥವಾ ದೇಹದ ಆಕಾರವನ್ನು ಬದಲಾಯಿಸಲು ಇತ್ತೀಚೆಗೆ ಹೆಚ್ಚಿನ ಜನರು ಪ್ಲಾಸ್ಟಿಕ್​​ ಸರ್ಜರಿ (Plastic surgery) ಮಾಡಿಸಿಕೊಳ್ಳುತ್ತಾರೆ. ಆದರೆ ಇಲ್ಲೊಬ್ಬಳು ಬಾಲಕಿ ತನ್ನ 13 ನೇ ವಯಸ್ಸಿಗೆ ಪ್ಲಾಸ್ಟಿಕ್​​ ಸರ್ಜರಿಯ ಆಕರ್ಷಣೆಗೆ ಒಳಗಾಗಿದ್ದು, ಇದೀಗಾಗಲೇ 5ವರ್ಷದಲ್ಲಿ 100 ಪ್ಲಾಸ್ಟಿಕ್​ ಸರ್ಜರಿ ಮಾಡಿಸಿದ್ದಾಳೆ. ಇದಕ್ಕಾಗಿ ಈವರೆಗೆ 563,000 ಡಾಲರ್ ಅಂದರೆ ಸುಮಾರು 4 ಕೋಟಿಗಳಷ್ಟು ಹಣವನ್ನು ಖರ್ಚು ಮಾಡಿದ್ದಾಳೆ.

ಸೌತ್ ಚೀನಾ ಮಾರ್ನಿಂಗ್ ಪೋಸ್ಟ್ ವರದಿಯ ಪ್ರಕಾರ, ಪೂರ್ವ ಚೀನಾದ ಝೆಜಿಯಾಂಗ್ ಪ್ರಾಂತ್ಯದ ನಿವಾಸಿ ಝೌ ಚುನಾ ಎಂಬ ಈ ಹುಡುಗಿ 13 ನೇ ವಯಸ್ಸಿನಿಂದ ಪ್ಲಾಸ್ಟಿಕ್ ಸರ್ಜರಿಗೆ ವ್ಯಸನಿಯಾಗಿದ್ದಳು. ಅಂದರೆ ಈಗ ಈಕೆಗೆ 18 ವರ್ಷ. ಆಕೆ ತನ್ನ ನೆಚ್ಚಿನ ನಟಿ ಎಥೆಲ್ ಯು ಅವರಂತೆ ಸುಂದರವಾಗಿ ಕಾಣಲು ಇಲ್ಲಿಯವರೆಗೆ 100 ಸರ್ಜರಿಗಳನ್ನು ಮಾಡಿಸಿದ್ದಾಳೆ ಎಂಬುದು ತಿಳಿದುಬಂದಿದೆ.

ಝೌ ಚುನಾ

ಝೌ ಇಂಟರ್ನ್ಯಾಷನಲ್ ಸ್ಕೂಲ್ ಆಫ್ ಶಾಂಘೈನಲ್ಲಿ ವ್ಯಾಸಂಗ ಮಾಡುತ್ತಿರುವ ದಿನದಿಂದ ತನ್ನ ತರಗತಿಯಲ್ಲಿ ತನಗಿಂತ ಸುಂದರವಾಗಿ ಯಾರು ಕೂಡ ಇರಬಾರದು ಎಂದು ಮುಖದ ಆಕಾರವನ್ನು ಬದಲಾಯಿಸಲು ಪ್ಲಾಸ್ಟಿಕ್​​ ಸರ್ಜರಿ ಮಾಡಿಸುತ್ತಾ ಬಂದಿದ್ದಾಳೆ.

ಇದನ್ನೂ ಓದಿ: ನಿಮಗಿದು ಗೊತ್ತೆ? ಸುಟ್ಟ ಗಾಯಗಳಿಗೆ ರಾಮ ಬಾಣ ಈ ವಿಶೇಷ ಮೀನಿನ ಚರ್ಮ!

ಈಗಾಗಲೇ ಕಣ್ಣುಗಳ ಆಕಾರ ಬದಲಾಯಿಸಲು 10 ಬಾರಿ ಸರ್ಜರಿಗಳನ್ನು ಮಾಡಿಸಿದ್ದಾಳೆ. ಇದಲ್ಲದೇ ಗುಂಡು ಮುಖವನ್ನು ಬದಲಾಯಿಸಲು ಬೋನ್​​ ಶೇವಿಂಗ್​​​ ಕೂಡ ಮಾಡಿಸಿಕೊಂಡಿದ್ದು, ಇದು ಅತ್ಯಂತ ನೋವಿನ ಶಸ್ತ್ರ ಚಿಕಿತ್ಸೆ ಎಂದು ಝೌ ಚುನಾ ಹೇಳಿಕೊಂಡಿದ್ದಾಳೆ. ಕೇವಲ 15 ವರ್ಷದಲ್ಲೇ ಬೋನ್​​ ಶೇವಿಂಗ್ ಶಸ್ತ್ರಕ್ರಿಯೆಗೆ ಒಳಗಾಗಿದ್ದ ಈಕೆ 10 ಗಂಟೆಗಳ ಕಾಲ ನಡೆದ ಶಸ್ತ್ರ ಚಿಕಿತ್ಸೆಯಲ್ಲಿ 15 ದಿನಗಳ ಕಾಲ ಹಾಸಿಗೆಯಲ್ಲಿಯೇ ಇದ್ದಳು ಎಂದು ತಿಳಿದುಬಂದಿದೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 11:00 am, Tue, 5 March 24

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ