Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಮರಳಶಿಲ್ಪದ ಧ್ವಂಸ ಕೃತ್ಯದಲ್ಲಿ ತೊಡಗಿದ್ದ ಹದಿಹರೆಯದ ಹುಡುಗಿಯರ ಬಂಧನ

Honolulu : ಸ್ವಾದವಿರದ ಬರ್ಗರ್​, ಪಿಝಾ ತಟ್ಟೆಗಳಿಗಿಂತ ವೇಗವಾಗಿ ಈಕೆ ಶಿಲ್ಪವನ್ನು ಧ್ವಂಸ ಮಾಡುತ್ತಿದ್ದಾಳೆ. ಪುಣ್ಯಕ್ಕೆ ಗಾಜನ್ನು ಒಡೆದಿಲ್ಲ. ಈಕೆಯ ಬಗ್ಗೆ ಕನಿಕರವಾಗುತ್ತಿದೆ ಎಂದು ನೆಟ್ಟಿಗರು ಪ್ರತಿಕ್ರಿಯಿಸಿದ್ದಾರೆ.

Viral: ಮರಳಶಿಲ್ಪದ ಧ್ವಂಸ ಕೃತ್ಯದಲ್ಲಿ ತೊಡಗಿದ್ದ ಹದಿಹರೆಯದ ಹುಡುಗಿಯರ ಬಂಧನ
ಹೊನೊಲುಲುವಿನ ರಾಯಲ್​ ಹವಾಯಿನ್​ ಹೋಟೆಲ್​ನಲ್ಲಿರುವ ಮರಳ ಶಿಲ್ಪವನ್ನು ಧ್ವಂಸಗೊಳಿಸುತ್ತಿರುವ ಯುವತಿ
Follow us
ಶ್ರೀದೇವಿ ಕಳಸದ
|

Updated on:Jun 13, 2023 | 12:55 PM

Sand Sculpture: ಕಲೆ ತನ್ನೊಂದಿಗೆ ತಾನು ಇರುವುದು ಹೇಗೆ ಎನ್ನುವ ತಾಳ್ಮೆಯನ್ನು ಮನುಷ್ಯನಿಗೆ ಕಲಿಸಿಕೊಡುತ್ತದೆ. ತನ್ನೊಳಗಿನ ನಿರಾಕಾರಕ್ಕೆ ಆಕಾರ ಕೊಟ್ಟುಕೊಳ್ಳುವುದು ಹೇಗೆಂದು ನಿರ್ದೇಶಿಸುತ್ತದೆ. ತನ್ನ ಸುತ್ತಮುತ್ತಲಿನದನ್ನು ಸಾವಧಾನವಾಗಿ ಅರ್ಥ ಮಾಡಿಕೊಳ್ಳುವ ಬಗೆ ಹೇಗೆಂದು ತಿಳಿಸಿಕೊಳ್ಳುತ್ತದೆ. ಅನ್ಯದ ಕಡೆ ಆಸಕ್ತಿ ಮೂಡುವಂತೆ ಮಾಡಿ ಅದರೊಂದಿಗೆ ಒಳಗೊಳ್ಳುವುದು ಹೇಗೆಂದು ಯೋಚಿಸಲು ಸಹಾಯ ಮಾಡುತ್ತದೆ. ಆದರೆ ಕಲೆಯ ಧ್ಯಾನ ಮತ್ತು ಸ್ಪರ್ಶದಿಂದ ದೂರ ಉಳಿದ ಮನುಷ್ಯ ತನ್ನ ವಿಕಾರಗಳನ್ನೆಲ್ಲ ಸಮಯ, ಸಂದರ್ಭ, ಸ್ಥಳವನ್ನು ಗಮನಿಸದೇ ಹೊರಹಾಕುವ ಸಾಧ್ಯತೆ ಇರುತ್ತದೆ. ಇದೀಗ ವೈರಲ್ ಆಗುತ್ತಿರುವ ಈ ವಿಡಿಯೋ  ಗಮನಿಸಿ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಈ ವಿಡಿಯೋ ಸೆರೆಯಾಗಿರುವುದು ರಾಯಲ್​ ಹವಾಯಿನ್​ ಹೋಟೆಲ್​ನಲ್ಲಿ. ಇಲ್ಲೊಂದು ಮರಳ ಶಿಲ್ಪವಿದೆ. ಒಬ್ಬಾಕೆ ಇದರ ಮೇಲೆ ವಸ್ತುಗಳನ್ನೆಸೆದು ಧ್ವಂಸ ಮಾಡಲು ಯತ್ನಿಸುತ್ತಿದ್ದಾಳೆ. ಇನ್ನೊಬ್ಬಾಕೆ ಮೊಬೈಲ್​ನಲ್ಲಿ ಈ ದೃಶ್ಯವನ್ನು ಸೆರೆಹಿಡಿಯುತ್ತಿದ್ದಾಳೆ. ಇವರಿಬ್ಬರೂ ಹೀಗೆ ಯಾಕೆ ಸೂಕ್ಷ್ಮತೆ ಕಳೆದುಕೊಂಡು ವರ್ತಿಸುತ್ತಿದ್ದಾರೆ ಎನ್ನುವುದು ತಿಳಿದು ಬಂದಿಲ್ಲ. ಇವರಿಬ್ಬರ ಬೇಜವಾಬ್ದಾರಿ ವರ್ತನೆಯ ವಿರುದ್ಧ ಕ್ರಮ ಕೈಗೊಂಡ ಹೊನೊಲುಲು ಪೊಲೀಸರು ಇವರಿಬ್ಬರನ್ನೂ ಬಂಧಿಸಿದ್ದಾರೆ. ಸದ್ಯ, ಈ ಕಲಾಕೃತಿಯ ಕರ್ತೃ ತಕ್ಷಣವೇ ಅದನ್ನು ಮರುರೂಪಿಸಿ ಒಪ್ಪಗೊಳಿಸಿದ್ದಾರೆ.

ಇದನ್ನೂ ಓದಿ : Viral: ಟೈ ಕಟ್ಟಿಕೊಳ್ಳುವುದು ಹೀಗೆ; ಸಂದರ್ಶನಕ್ಕೆ ಹೊರಟಿದ್ದ ಯುವಕನಿಗೆ ಅಜ್ಜನ ಪಾಠ 

ಈತನಕ 23 ಮಿಲಿಯನ್​ ಜನರು ಈ ವಿಡಿಯೋ ವೀಕ್ಷಿಸಿದ್ದಾರೆ. ಇವರಿಬ್ಬರ ಕೃತ್ಯಕ್ಕೆ ಅನೇಕರು ಬೇಸತ್ತು ಪ್ರತಿಕ್ರಿಯಿಸುತ್ತಿದ್ದಾರೆ. ಸ್ವಾದವಿರದ ಬರ್ಗರ್​, ಪಿಝಾ ತಟ್ಟೆಗಳಿಗಿಂತ ವೇಗವಾಗಿ ಈಕೆ ಮರಳಿನ ಶಿಲ್ಪವನ್ನು ಧ್ವಂಸ ಮಾಡುತ್ತಿದ್ದಾರೆ. ಪುಣ್ಯಕ್ಕೆ ಗಾಜನ್ನು ಆಕೆ ಒಡೆದಿಲ್ಲ. ಈಕೆಯ ಬಗ್ಗೆ ಕನಿಕರವಾಗುತ್ತಿದೆ, ಪೋಷಕರು ಶಿಸ್ತಿನ ಜೀವನದ ಬಗ್ಗೆ ಹೇಳಿಕೊಟ್ಟಿದ್ದರೆ ಈಕೆ ಹೀಗೆ ವರ್ತಿಸುತ್ತಿರಲಿಲ್ಲ… ಅಂತೆಲ್ಲ ಪ್ರತಿಕ್ರಿಯಿಸುತ್ತಿದ್ಧಾರೆ.

ಎಲ್ಲವನ್ನೂ ಪೋಷಕರ ತಲೆಗೇ ಕಟ್ಟಿದರೆ ಹೇಗೆ?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 12:50 pm, Tue, 13 June 23

ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ