AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೀನಿಗಾಗಿ ಬೀಸಿದ್ದ ಬಲೆಯಲ್ಲಿ ಸಿಕ್ಕಿಹಾಕಿಕೊಂಡ 15 ಅಡಿ ಉದ್ದದ ದೈತ್ಯ ಹೆಬ್ಬಾವು

ಮೀನುಗಾರರು ಮೀನಿಗಾಗಿ ಬೀಸಿದ್ದಂತಹ ಬಲೆಯಲ್ಲಿ 15 ಅಡಿ ಉದ್ದದ ದೈತ್ಯ ಹೆಬ್ಬಾವೊಂದು ಸಿಕ್ಕಿಹಾಕಿಕೊಂಡಂತಹ ಘಟನೆ ತೆಲಂಗಾಣದಲ್ಲಿ ನಡೆದಿದೆ. ಬಲೆ ತುಂಬಾ ಮೀನು ಸಿಕ್ಕಿ, ಉತ್ತಮ ವ್ಯಾಪಾರ ಆಗ್ಬೇಕು ಅಂತ ಜಲಾಶಯದಲ್ಲಿ ರಾತ್ರಿಯ ವೇಳೆ ಮೀನುಗಾರರು ಬಲೆ ಬೀಸಿ ಹೋಗಿದ್ದು, ಅಕಸ್ಮಾತ್‌ ಆಗಿ ಈ ಬಲೆಗೆ ದೈತ್ಯ ಹೆಬ್ಬಾವು ಬಿದ್ದಿದೆ. ಬಲೆ ಹೊರಗೆಳೆದಾಗ ಅದರಲ್ಲಿದ್ದ ಬೃಹತ್‌ ಹಾವನ್ನು ಕಂಡು ಮೀನುಗಾರರು ಫುಲ್‌ ಶಾಕ್‌ ಆಗಿದ್ದಾರೆ.

Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Dec 23, 2024 | 4:22 PM

ಸಾಮಾನ್ಯವಾಗಿ ಹೆಬ್ಬಾವುಗಳಂತಹ ದೈತ್ಯ ಹಾವುಗಳು ದಟ್ಟಾರಣ್ಯಗಳಲ್ಲಿ ಕಾಣಿಸಿಕೊಳ್ಳುತ್ತವೆ. ಆದ್ರೆ ಈಗೀಗ ಈ ದೈತ್ಯ ಹಾವುಗಳು ಜನವಸತಿ ಪ್ರದೇಶಗಳಲ್ಲಿ ಕಾಣಿಸಿಕೊಳ್ಳುವ ಸುದ್ದಿಗಳು ಹೆಚ್ಚಾಗಿ ಕೇಳಿಬರುತ್ತಿವೆ. ಇಲ್ಲೊಂದು ಅಂತಹದ್ದೇ ಘಟನೆ ನಡೆದಿದ್ದು, ಮೀನುಗಾರರು ಮೀನಿಗಾಗಿ ಬೀಸಿದ್ದಂತಹ ಬಲೆಯಲ್ಲಿ 15 ಅಡಿ ಉದ್ದದ ದೈತ್ಯ ಹೆಬ್ಬಾವೊಂದು ಸಿಕ್ಕಿಹಾಕಿಕೊಂಡಿದೆ. ಬಲೆ ತುಂಬಾ ಮೀನು ಸಿಕ್ರೆ ಸಾಕಪ್ಪಾ ಎಂದು ಜಲಾಶಯದಲ್ಲಿ ಮೀನುಗಾರರು ಬಲೆ ಬೀಸಿ ಹೋಗಿದ್ದು, ಮೀನಿನ ಬದಲಿಗೆ ಅಕಸ್ಮಾತ್‌ ಆಗಿ ಈ ಬಲೆಗೆ ದೈತ್ಯ ಹೆಬ್ಬಾವೊಂದು ಬಿದ್ದಿದೆ. ಬಲೆಯಲ್ಲಿ ಬಿದ್ದು ಒದ್ದಾಡುತ್ತಿದ್ದಂತ ಹಾವನ್ನು ಕಂಡು ಮೀನುಗಾರರು ಬೆಚ್ಚಿ ಬಿದ್ದಿದ್ದಾರೆ.

ಈ ಘಟನೆ ಭಾನುವಾರ (ಡಿ.22) ತೆಲಂಗಾಣದ ಕರ್ನೂಲ್‌ ಜಿಲ್ಲೆಯ ಪೆದ್ದಕೊತ್ತಪಲ್ಲಿ ಮಂಡಲದಲ್ಲಿ ನಡೆದಿದ್ದು, ಜೊನ್ನಾಲಬಗಡ ಜಲಾಶಯದಲ್ಲಿ ಮೀನುಗಾರರು ಮೀನಿಗಾಗಿ ಬೀಸಿದ್ದ ಬಲೆಯಲ್ಲಿ ದೈತ್ಯ ಹೆಬ್ಬಾವೊಂದು ಸಿಕ್ಕಿಹಾಕಿಕೊಂಡಿದೆ.

ಇದನ್ನೂ ಓದಿ: ಗರ್ಲ್ಸ್‌ ಹಾಸ್ಟೆಲ್‌ ಬಳಿ ಕಾಣಿಸಿಕೊಂಡ 100 ಕೆಜಿ ತೂಕದ ದೈತ್ಯ ಹೆಬ್ಬಾವು; ರಕ್ಷಣಾ ಕಾರ್ಯ ಹೇಗಿತ್ತು ನೋಡಿ…

ರಾಶಿ ರಾಶಿ ಮೀನು ಸಿಕ್ರೆ ಭಾನುವಾರ ಒಳ್ಳೆಯ ವ್ಯಾಪಾರ ಆಗುತ್ತೆ ಅಂತ ಪ್ಲ್ಯಾನ್‌ ಮಾಡಿ ಮೀನುಗಾರರು ಶನಿವಾರ ರಾತ್ರಿ ಜಲಾಶಯದಲ್ಲಿ ಬಲೆ ಬೀಸಿ ಹೋಗಿದ್ದರು. ಮರುದಿನ ಮುಂಜಾನೆ ಬಲೆಯನ್ನು ಎಳೆದಾಗ ಬಲೆ ತುಂಬಾನೇ ಭಾರವಿದೆ, ಪಕ್ಕಾ ಇದರಲ್ಲಿ ರಾಶಿ ರಾಶಿ ಮೀನು ಇರಬಹುದು ಎಂದು ಮೀನುಗಾರರು ಬಹಳನೇ ಖುಷಿಯಲ್ಲಿದ್ದರು. ಆದ್ರೆ ಬಲೆಯಲ್ಲಿ ಮೀನಿನ ಬದಲಿಗೆ ಬೃಹತ್‌ ಹೆಬ್ಬಾವನ್ನು ಕಂಡು ಅವರೆಲ್ಲಾ ಫುಲ್‌ ಶಾಕ್‌ ಆಗಿದ್ದಾರೆ. ತಕ್ಷಣ ಮೀನುಗಾರರು ಈ ಬಗ್ಗೆ ಅರಣ್ಯಾಧಿಕಾರಿಗಳಿಗೆ ಮಾಹಿತಿಯನ್ನು ನೀಡಿದ್ದು, ಸ್ಥಳಕ್ಕಾಗಮಿಸಿದ ಅರಣ್ಯಾಧಿಕಾರಿಗಳು ಬಲೆಯಲ್ಲಿ ಸಿಕ್ಕ ಹೆಬ್ಬಾವನ್ನು ರಕ್ಷಿಸಿ, ಸುರಕ್ಷಿತ ಸ್ಥಳದಲ್ಲಿ ಬಿಟ್ಟು ಬಂದಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್