AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೀನಿಗಾಗಿ ಬೀಸಿದ್ದ ಬಲೆಯಲ್ಲಿ ಸಿಕ್ಕಿಹಾಕಿಕೊಂಡ 15 ಅಡಿ ಉದ್ದದ ದೈತ್ಯ ಹೆಬ್ಬಾವು

ಮೀನುಗಾರರು ಮೀನಿಗಾಗಿ ಬೀಸಿದ್ದಂತಹ ಬಲೆಯಲ್ಲಿ 15 ಅಡಿ ಉದ್ದದ ದೈತ್ಯ ಹೆಬ್ಬಾವೊಂದು ಸಿಕ್ಕಿಹಾಕಿಕೊಂಡಂತಹ ಘಟನೆ ತೆಲಂಗಾಣದಲ್ಲಿ ನಡೆದಿದೆ. ಬಲೆ ತುಂಬಾ ಮೀನು ಸಿಕ್ಕಿ, ಉತ್ತಮ ವ್ಯಾಪಾರ ಆಗ್ಬೇಕು ಅಂತ ಜಲಾಶಯದಲ್ಲಿ ರಾತ್ರಿಯ ವೇಳೆ ಮೀನುಗಾರರು ಬಲೆ ಬೀಸಿ ಹೋಗಿದ್ದು, ಅಕಸ್ಮಾತ್‌ ಆಗಿ ಈ ಬಲೆಗೆ ದೈತ್ಯ ಹೆಬ್ಬಾವು ಬಿದ್ದಿದೆ. ಬಲೆ ಹೊರಗೆಳೆದಾಗ ಅದರಲ್ಲಿದ್ದ ಬೃಹತ್‌ ಹಾವನ್ನು ಕಂಡು ಮೀನುಗಾರರು ಫುಲ್‌ ಶಾಕ್‌ ಆಗಿದ್ದಾರೆ.

ಮಾಲಾಶ್ರೀ ಅಂಚನ್​
| Edited By: |

Updated on: Dec 23, 2024 | 4:22 PM

Share

ಸಾಮಾನ್ಯವಾಗಿ ಹೆಬ್ಬಾವುಗಳಂತಹ ದೈತ್ಯ ಹಾವುಗಳು ದಟ್ಟಾರಣ್ಯಗಳಲ್ಲಿ ಕಾಣಿಸಿಕೊಳ್ಳುತ್ತವೆ. ಆದ್ರೆ ಈಗೀಗ ಈ ದೈತ್ಯ ಹಾವುಗಳು ಜನವಸತಿ ಪ್ರದೇಶಗಳಲ್ಲಿ ಕಾಣಿಸಿಕೊಳ್ಳುವ ಸುದ್ದಿಗಳು ಹೆಚ್ಚಾಗಿ ಕೇಳಿಬರುತ್ತಿವೆ. ಇಲ್ಲೊಂದು ಅಂತಹದ್ದೇ ಘಟನೆ ನಡೆದಿದ್ದು, ಮೀನುಗಾರರು ಮೀನಿಗಾಗಿ ಬೀಸಿದ್ದಂತಹ ಬಲೆಯಲ್ಲಿ 15 ಅಡಿ ಉದ್ದದ ದೈತ್ಯ ಹೆಬ್ಬಾವೊಂದು ಸಿಕ್ಕಿಹಾಕಿಕೊಂಡಿದೆ. ಬಲೆ ತುಂಬಾ ಮೀನು ಸಿಕ್ರೆ ಸಾಕಪ್ಪಾ ಎಂದು ಜಲಾಶಯದಲ್ಲಿ ಮೀನುಗಾರರು ಬಲೆ ಬೀಸಿ ಹೋಗಿದ್ದು, ಮೀನಿನ ಬದಲಿಗೆ ಅಕಸ್ಮಾತ್‌ ಆಗಿ ಈ ಬಲೆಗೆ ದೈತ್ಯ ಹೆಬ್ಬಾವೊಂದು ಬಿದ್ದಿದೆ. ಬಲೆಯಲ್ಲಿ ಬಿದ್ದು ಒದ್ದಾಡುತ್ತಿದ್ದಂತ ಹಾವನ್ನು ಕಂಡು ಮೀನುಗಾರರು ಬೆಚ್ಚಿ ಬಿದ್ದಿದ್ದಾರೆ.

ಈ ಘಟನೆ ಭಾನುವಾರ (ಡಿ.22) ತೆಲಂಗಾಣದ ಕರ್ನೂಲ್‌ ಜಿಲ್ಲೆಯ ಪೆದ್ದಕೊತ್ತಪಲ್ಲಿ ಮಂಡಲದಲ್ಲಿ ನಡೆದಿದ್ದು, ಜೊನ್ನಾಲಬಗಡ ಜಲಾಶಯದಲ್ಲಿ ಮೀನುಗಾರರು ಮೀನಿಗಾಗಿ ಬೀಸಿದ್ದ ಬಲೆಯಲ್ಲಿ ದೈತ್ಯ ಹೆಬ್ಬಾವೊಂದು ಸಿಕ್ಕಿಹಾಕಿಕೊಂಡಿದೆ.

ಇದನ್ನೂ ಓದಿ: ಗರ್ಲ್ಸ್‌ ಹಾಸ್ಟೆಲ್‌ ಬಳಿ ಕಾಣಿಸಿಕೊಂಡ 100 ಕೆಜಿ ತೂಕದ ದೈತ್ಯ ಹೆಬ್ಬಾವು; ರಕ್ಷಣಾ ಕಾರ್ಯ ಹೇಗಿತ್ತು ನೋಡಿ…

ರಾಶಿ ರಾಶಿ ಮೀನು ಸಿಕ್ರೆ ಭಾನುವಾರ ಒಳ್ಳೆಯ ವ್ಯಾಪಾರ ಆಗುತ್ತೆ ಅಂತ ಪ್ಲ್ಯಾನ್‌ ಮಾಡಿ ಮೀನುಗಾರರು ಶನಿವಾರ ರಾತ್ರಿ ಜಲಾಶಯದಲ್ಲಿ ಬಲೆ ಬೀಸಿ ಹೋಗಿದ್ದರು. ಮರುದಿನ ಮುಂಜಾನೆ ಬಲೆಯನ್ನು ಎಳೆದಾಗ ಬಲೆ ತುಂಬಾನೇ ಭಾರವಿದೆ, ಪಕ್ಕಾ ಇದರಲ್ಲಿ ರಾಶಿ ರಾಶಿ ಮೀನು ಇರಬಹುದು ಎಂದು ಮೀನುಗಾರರು ಬಹಳನೇ ಖುಷಿಯಲ್ಲಿದ್ದರು. ಆದ್ರೆ ಬಲೆಯಲ್ಲಿ ಮೀನಿನ ಬದಲಿಗೆ ಬೃಹತ್‌ ಹೆಬ್ಬಾವನ್ನು ಕಂಡು ಅವರೆಲ್ಲಾ ಫುಲ್‌ ಶಾಕ್‌ ಆಗಿದ್ದಾರೆ. ತಕ್ಷಣ ಮೀನುಗಾರರು ಈ ಬಗ್ಗೆ ಅರಣ್ಯಾಧಿಕಾರಿಗಳಿಗೆ ಮಾಹಿತಿಯನ್ನು ನೀಡಿದ್ದು, ಸ್ಥಳಕ್ಕಾಗಮಿಸಿದ ಅರಣ್ಯಾಧಿಕಾರಿಗಳು ಬಲೆಯಲ್ಲಿ ಸಿಕ್ಕ ಹೆಬ್ಬಾವನ್ನು ರಕ್ಷಿಸಿ, ಸುರಕ್ಷಿತ ಸ್ಥಳದಲ್ಲಿ ಬಿಟ್ಟು ಬಂದಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ