AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ನನ್ನ ಆಸ್ತಿಯೆಲ್ಲಾ ಕಬಳಿಸಿ ಇದೀಗ ನನ್ಗೆ ಸರಿಯಾಗಿ ಊಟ ಕೂಡ ಕೊಡ್ತಿಲ್ಲ, ಠಾಣೆ ಮೆಟ್ಟಿಲೇರಿದ ವೃದ್ಧ ತಾಯಿ

ಈ ಕೆಲವೊಬ್ಬರು ತಾವು ಬೆಳೆದು ದೊಡ್ಡವರಾದ ಮೇಲೆ ತಮ್ಮನ್ನು ಸಾಕಿ ಸಲಹಿದ ಹೆತ್ತ ತಂದೆ-ತಾಯಿಯನ್ನು ಕಸಕ್ಕಿಂತ ಕಡೆಯಾಗಿ ನೋಡುತ್ತಾರೆ. ಅಲ್ಲದೆ ವಯಸ್ಸಾದ ಹೆತ್ತವರು ಮನೆಯಲ್ಲಿ ಇರಬಾರದು ಅಂತ ಹೆಂಡತಿ ಮಾತು ಕೇಳಿ ವಯಸ್ಸಾದ ತಂದೆ ತಾಯಿಯನ್ನು ಆಶ್ರಮಕ್ಕೆ ಸೇರಿಸುತ್ತಾರೆ. ಆದ್ರೆ ಇಲ್ಲೊಂದು ವಿಚಿತ್ರ ಘಟನೆ ನಡೆದಿದ್ದು, ತಾಯಿಯ ಅಸ್ತಿಯನ್ನು ಕಬಳಿಸಿ, ಆಕೆಗೆ ಸರಿಯಾಗಿ ಊಟ ನೀಡದೆ ರಾಕ್ಷಸಿ ವರ್ತನೆಯನ್ನು ತೋರಿದ್ದಾರೆ. ಮಕ್ಕಳು ಕೊಡುವ ಕಷ್ಟವನ್ನು ಸಹಿಸಲಾರದೆ ಆ ತಾಯಿ ನಾಲ್ವರು ಪುತ್ರರ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

Video: ನನ್ನ ಆಸ್ತಿಯೆಲ್ಲಾ ಕಬಳಿಸಿ ಇದೀಗ ನನ್ಗೆ ಸರಿಯಾಗಿ ಊಟ ಕೂಡ ಕೊಡ್ತಿಲ್ಲ, ಠಾಣೆ ಮೆಟ್ಟಿಲೇರಿದ ವೃದ್ಧ ತಾಯಿ
ವೈರಲ್​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Aug 26, 2024 | 6:28 PM

Share

ತಂದೆ-ತಾಯಿ ಅದೆಷ್ಟೋ ಕನಸುಗಳನ್ನು ಹೊತ್ತು, ನಮ್ಮ ಮಗ ಅಥವಾ ಮಗಳು ಕೊನೆಗಾಲದಲ್ಲಿ ನಮ್ಮನ್ನು ಚೆನ್ನಾಗಿ ನೋಡಿಕೊಳ್ಳುತ್ತಾರೆ ಎಂದು ಕಷ್ಟಪಟ್ಟು ಮಕ್ಕಳನ್ನು ಸಾಕುತ್ತಾರೆ. ಆದ್ರೆ ಈ ಮಕ್ಕಳು ತಂದೆ ತಾಯಿಗೆ ವಯಸ್ಸಾಗುತ್ತಿದ್ದಂತೆ ಈ ಮುದಿ ಜೀವಗಳ ಸೇವೆ ಯಾರ್ ಮಾಡ್ತಾರೆ ಎಂದು ಹೆತ್ತವರ ಆಸ್ತಿಯನ್ನೆಲ್ಲಾ ತಮ್ಮ ಹೆಸರಿಗೆ ಬರೆಸಿಕೊಂಡು ಅವರನ್ನು ಆಶ್ರಮಕ್ಕೆ ಸೇರಿಸಿ ಬಿಡುತ್ತಾರೆ. ಇಲ್ಲವೇ ಚುಚ್ಚು ಮಾತುಗಳನ್ನಾಡುತ್ತಾ ಮನೆಯಲ್ಲಿಯೇ ಇರಿಸಿಕೊಳ್ಳುತ್ತಾರೆ. ಹೆತ್ತ ಮಕ್ಕಳಿಂದಲೇ ಕಷ್ಟ, ನೋವು ಅನುಭವಿಸಿದ ಹಿರಿ ಜೀವಗಳ ಅದೆಷ್ಟೋ ಕಥೆಗಳು ನಮ್ಮ ಕಣ್ಣ ಮುಂದೆಯೇ ಇವೆ. ಇದೀಗ ಅಂತಹದ್ದೇ ಅಮಾಯಕ ಹಿರಿ ಜೀವದ ಕಥೆಯೊಂದು ವೈರಲ್ ಆಗಿದೆ. ಹೆತ್ತವರು ಯಾರಿಗೆ ಬೇಕು ಅವರ ಅಸ್ತಿ ಇದ್ರೆ ಸಾಕು ಎಂದು ಮಕ್ಕಳು ಹೆತ್ತ ತಾಯಿಯ ಅಸ್ತಿಯನ್ನು ಕಬಳಿಸಿ, ಆಕೆಗೆ ಸರಿಯಾಗಿ ಊಟ ನೀಡದೆ ರಾಕ್ಷಸಿ ವರ್ತನೆಯನ್ನು ತೋರಿದ್ದಾರೆ. ಮಕ್ಕಳು ಕೊಡುವ ಕಷ್ಟವನ್ನು ಸಹಿಸಲಾರದೆ ಆ ತಾಯಿ ನಾಲ್ವರು ಪುತ್ರರ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಈ ಘಟನೆ ತೆಲಂಗಾಣದ ಕರೀಂನಗರ ಜಿಲ್ಲೆಯ ತಿಮ್ಮಾಪುರ ಮಂಡಲದ ಅಳುಗುನೂರು ಗ್ರಾಮದಲ್ಲಿ ನಡೆದಿದ್ದು, ಮಕ್ಕಳು ಸರಿಯಾಗಿ ಊಟ ಕೊಡುತ್ತಿಲ್ಲವೆಂದು ವೃದ್ಧ ತಾಯಿ ಪುತ್ರರ ವಿರುದ್ಧ ಠಾಣೆ ಮೆಟ್ಟಿಲೇರಿದ್ದಾರೆ. ನನ್ಗೆ ನಾಲ್ವರು ಪುತ್ರರಿದ್ದು ಅವರಿಗೆಲ್ಲಾ ಮದುವೆ ಮಾಡಿ, ನನ್ನ ಆಸ್ತಿಯನ್ನೆಲ್ಲಾ ಅವರ ಹೆಸರಿಗೆ ಬರೆದುಕೊಟ್ಟಿದ್ದೇನೆ. ಆದ್ರೆ ಅವರು ನನ್ನನ್ನು ಪುಟ್ಟ ಗುಡಿಸಲಿನಲ್ಲಿಟ್ಟು ಸರಿಯಾಗಿ ಊಟ ಕೂಡಾ ನೀಡುತ್ತಿಲ್ಲ ಎಂದು ಪೊಲೀಸರಿಗೆ ದೂರನ್ನು ನೀಡಿದ್ದಾರೆ.

ಈ ಕುರಿತ ಪೋಸ್ಟ್ ಒಂದನ್ನು Telugu Scribe ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, “ಆಸ್ತಿಯನ್ನೆಲ್ಲಾ ಕಬಳಿಸಿ ಇದೀಗ ಊಟವನ್ನು ಕೊಡದೆ ಕಷ್ಟ ಕೊಡುತ್ತಿರುವ ನಾಲ್ವರು ಪುತ್ರರ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ವೃದ್ಧೆ” ಎಂಬ ಶೀರ್ಷಿಕೆಯನ್ನು ಬರೆದುಕೊಳ್ಳಲಾಗಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ವೈರಲ್ ವಿಡಿಯೋದಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ವೃದ್ಧ ತಾಯಿ ಠಾಣೆಗೆ ಬಂದು ಸರಿಯಾಗಿ ಊಟ ಕೊಡದ ಪುತ್ರರ ವಿರುದ್ಧ ದೂರು ನೀಡುತ್ತಿರುವ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಪಾರ್ಕಿನಲ್ಲಿ ಕುಳಿತಿದ್ದ ಮುಸ್ಲಿಂ ಯುವತಿ ಹಾಗೂ ಹಿಂದೂ ಯುವಕನಿಗೆ ಕಪಾಳ ಮೋಕ್ಷ ಮಾಡಿದ ಇಸ್ಲಾಂ ವ್ಯಕ್ತಿಗಳು

ಇಂದು ಮಧ್ಯಾಹ್ನ ಹಂಚಿಕೊಳ್ಳಲಾದ ಈ ಪೋಸ್ಟ್ 12 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ‘ತಾಯಿಯನ್ನು ನೋಡಿಕೊಳ್ಳಲಾಗದವರು ನಬದುಕಿದ್ದೂ ವ್ಯರ್ಥ’ ಎಂಬ ಕಾಮೆಂಟ್ ಬರೆದುಕೊಂಡಿದ್ದಾರೆ. ಇನ್ನೊಬ್ಬ ಬಳಕೆದಾರರು ‘ಇಂತಹ ನೀಚ ಮಕ್ಕಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಹೇಳಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ