AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Telangana: ಹಲವರಿಗೆ ಅಂಗಾಂಗ ದಾನ; ಸಾವಿನಲ್ಲೂ ಸಾರ್ಥಕತೆ ಮೆರೆದ ಮಹಿಳೆ

ಕುಟುಂಬ ಸದಸ್ಯರಿಗೆ ಅನ್ನ ಬಡಿಸುವಾಗ ಸುಜಾತಾ ಏಕಾಏಕಿ ಕುಸಿದು ಬಿದ್ದಿದ್ದಾರೆ. ಕೂಡಲೇ ಮನೆಯವರು ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದರೂ ಯಾವುದೇ ಪ್ರಯೋಜನವಾಗಿಲ್ಲ. ಎರಡು ದಿನಗಳ ನಂತರ ವೈದ್ಯರು ಆಕೆಯ ಬ್ರೈನ್ ಡೆಡ್ ಎಂದು ದೃಢಪಡಿಸಿದ್ದಾರೆ.

Telangana: ಹಲವರಿಗೆ ಅಂಗಾಂಗ ದಾನ; ಸಾವಿನಲ್ಲೂ ಸಾರ್ಥಕತೆ ಮೆರೆದ ಮಹಿಳೆ
ಮೃತ ಸುಜಾತ (42)
ಅಕ್ಷತಾ ವರ್ಕಾಡಿ
|

Updated on: May 22, 2024 | 10:31 AM

Share

ತೆಲಂಗಾಣ: ಯಾದಾದ್ರಿ ಭುವನಗಿರಿ ಜಿಲ್ಲೆ ಆಲೇರು ಮಂಡಲದ ಬಹದ್ದೂರ್ ಪೇಟೆಯ ಸುಜಾತ (42) ಹಲವರಿಗೆ ಅಂಗಾಂಗ ದಾನ ಮಾಡುವ ಮೂಲಕ ತನ್ನ ಬದುಕನ್ನು ಸಾರ್ಥಕವನ್ನಾಗಿಸಿಕೊಂಡಿದ್ದಾರೆ. ಮನೆಯಲ್ಲಿ ತನ್ನ ಮಕ್ಕಳಿಗೆ ಅನ್ನ ಬಡಿಸುತ್ತಿರುವ ವೇಳೆ ಏಕಾಏಕಿ ಕುಸಿದು ಬಿದ್ದು,ಬ್ರೈನ್‌ ಡೆಡ್‌ ಆಗಿದ್ದ ಸುಜಾತ ಅವರ ಹೃದಯ, ಯಕೃತ್ತು ಹಾಗೂ ಎರಡು ಕಿಡ್ನಿಗಳನ್ನು ಕುಟುಂಬಸ್ಥರು ದಾನ ಮಾಡಿದ್ದಾರೆ.

ಕುಟುಂಬ ಸದಸ್ಯರಿಗೆ ಅನ್ನ ಬಡಿಸುವಾಗ ಸುಜಾತಾ ಏಕಾಏಕಿ ಕುಸಿದು ಬಿದ್ದಿದ್ದಾರೆ. ಕೂಡಲೇ ಮನೆಯವರು ಆಕೆಯನ್ನು ಆಲೇರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ವೈದ್ಯರು ಸುಜಾತಾಳನ್ನು ಪರೀಕ್ಷಿಸಿ ಉತ್ತಮ ಚಿಕಿತ್ಸೆಗಾಗಿ ಜನರಲ್ ಆಸ್ಪತ್ರೆಗೆ ಸ್ಥಳಾಂತರಿಸುವಂತೆ ಸೂಚಿಸಿದ್ದರು. ಚಿಕಿತ್ಸೆಗಾಗಿ ಹೈದರಾಬಾದ್‌ನ ಯಶೋದಾ ಆಸ್ಪತ್ರೆಗೆ ಕರೆದೊಯ್ದರೂ ಯಾವುದೇ ಪ್ರಯೋಜನವಾಗಿಲ್ಲ. ಎರಡು ದಿನಗಳ ನಂತರ ವೈದ್ಯರು ಆಕೆಯ ಬ್ರೈನ್ ಡೆಡ್ ಎಂದು ದೃಢಪಡಿಸಿದ್ದರು.

ಇದರೊಂದಿಗೆ ವೈದ್ಯರು, ಅಂಗಾಂಗ ದಾನದ ಜೀವದಾನ ಟ್ರಸ್ಟ್ ಬಗ್ಗೆ ಆಕೆಯ ಕುಟುಂಬ ಸದಸ್ಯರಿಗೆ ಬಗ್ಗೆ ತಿಳಿಸಿದ್ದಾರೆ. ಜೀವದಾನ ಟ್ರಸ್ಟ್ ಸಿಬ್ಬಂದಿ ಅಂಗಾಂಗ ದಾನದ ಬಗ್ಗೆ ತಿಳಿಸಿದಾಗ ಸುಜಾತಾ ಕುಟುಂಬಸ್ಥರು ಅಂಗಾಂಗ ದಾನಕ್ಕೆ ಒಪ್ಪಿಗೆ ಸೂಚಿಸಿದ್ದಾರೆ. ಆಕೆಯ ಎರಡು ಮೂತ್ರಪಿಂಡಗಳು, ಹೃದಯ, ಯಕೃತ್ತು ಮತ್ತು ಶ್ವಾಸಕೋಶಗಳನ್ನು ತೆಗೆದು ಆರು ಜನರಿಗೆ ಕಸಿ ಮಾಡಲಾಗಿದೆ.

ಇದನ್ನೂ ಓದಿ: ಕೈಗಳಿಗೆ ಹಸಿರು ಬಳೆ ತೊಟ್ಟು, ವಧುವಿನಂತೆ ಸಿಂಗಾರಗೊಂಡು ಹಾಸ್ಟೆಲ್​​ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಯುವಕ

ಮೃತ ಸುಜಾತಾ ಅಂಗಾಂಗ ದಾನದಿಂದ ಆರು ಜೀವಗಳನ್ನು ಉಳಿಸಿದ್ದಾರೆ. ನಂತರ ಅವರ ಸ್ವಗ್ರಾಮ ಬಹದ್ದೂರ್ ಪೇಟಾದಲ್ಲಿ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಲಾಯಿತು. ಅಂಗಾಂಗ ದಾನಕ್ಕೆ ಸುಜಾತಾ ಅವರ ಪತಿ ದಶರಥ ಅವರ ಪುತ್ರ ಸುನೀಲ್ ಹಾಗೂ ಕುಟುಂಬಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಸುಜಾತಾ ದೈಹಿಕವಾಗಿ ಇಲ್ಲದಿದ್ದರೂ ಅಂಗಾಂಗಗಳ ಹಂಚಿಕೆಯೊಂದಿಗೆ ಇತರ ಆರು ಜನರಲ್ಲಿ ಬದುಕುತ್ತಿದ್ದಾರೆ ಎಂದು ಸ್ಥಳೀಯರು ಪ್ರಶಂಸಿಸಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ