AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Telangana: ಹಲವರಿಗೆ ಅಂಗಾಂಗ ದಾನ; ಸಾವಿನಲ್ಲೂ ಸಾರ್ಥಕತೆ ಮೆರೆದ ಮಹಿಳೆ

ಕುಟುಂಬ ಸದಸ್ಯರಿಗೆ ಅನ್ನ ಬಡಿಸುವಾಗ ಸುಜಾತಾ ಏಕಾಏಕಿ ಕುಸಿದು ಬಿದ್ದಿದ್ದಾರೆ. ಕೂಡಲೇ ಮನೆಯವರು ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದರೂ ಯಾವುದೇ ಪ್ರಯೋಜನವಾಗಿಲ್ಲ. ಎರಡು ದಿನಗಳ ನಂತರ ವೈದ್ಯರು ಆಕೆಯ ಬ್ರೈನ್ ಡೆಡ್ ಎಂದು ದೃಢಪಡಿಸಿದ್ದಾರೆ.

Telangana: ಹಲವರಿಗೆ ಅಂಗಾಂಗ ದಾನ; ಸಾವಿನಲ್ಲೂ ಸಾರ್ಥಕತೆ ಮೆರೆದ ಮಹಿಳೆ
ಮೃತ ಸುಜಾತ (42)
ಅಕ್ಷತಾ ವರ್ಕಾಡಿ
|

Updated on: May 22, 2024 | 10:31 AM

Share

ತೆಲಂಗಾಣ: ಯಾದಾದ್ರಿ ಭುವನಗಿರಿ ಜಿಲ್ಲೆ ಆಲೇರು ಮಂಡಲದ ಬಹದ್ದೂರ್ ಪೇಟೆಯ ಸುಜಾತ (42) ಹಲವರಿಗೆ ಅಂಗಾಂಗ ದಾನ ಮಾಡುವ ಮೂಲಕ ತನ್ನ ಬದುಕನ್ನು ಸಾರ್ಥಕವನ್ನಾಗಿಸಿಕೊಂಡಿದ್ದಾರೆ. ಮನೆಯಲ್ಲಿ ತನ್ನ ಮಕ್ಕಳಿಗೆ ಅನ್ನ ಬಡಿಸುತ್ತಿರುವ ವೇಳೆ ಏಕಾಏಕಿ ಕುಸಿದು ಬಿದ್ದು,ಬ್ರೈನ್‌ ಡೆಡ್‌ ಆಗಿದ್ದ ಸುಜಾತ ಅವರ ಹೃದಯ, ಯಕೃತ್ತು ಹಾಗೂ ಎರಡು ಕಿಡ್ನಿಗಳನ್ನು ಕುಟುಂಬಸ್ಥರು ದಾನ ಮಾಡಿದ್ದಾರೆ.

ಕುಟುಂಬ ಸದಸ್ಯರಿಗೆ ಅನ್ನ ಬಡಿಸುವಾಗ ಸುಜಾತಾ ಏಕಾಏಕಿ ಕುಸಿದು ಬಿದ್ದಿದ್ದಾರೆ. ಕೂಡಲೇ ಮನೆಯವರು ಆಕೆಯನ್ನು ಆಲೇರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ವೈದ್ಯರು ಸುಜಾತಾಳನ್ನು ಪರೀಕ್ಷಿಸಿ ಉತ್ತಮ ಚಿಕಿತ್ಸೆಗಾಗಿ ಜನರಲ್ ಆಸ್ಪತ್ರೆಗೆ ಸ್ಥಳಾಂತರಿಸುವಂತೆ ಸೂಚಿಸಿದ್ದರು. ಚಿಕಿತ್ಸೆಗಾಗಿ ಹೈದರಾಬಾದ್‌ನ ಯಶೋದಾ ಆಸ್ಪತ್ರೆಗೆ ಕರೆದೊಯ್ದರೂ ಯಾವುದೇ ಪ್ರಯೋಜನವಾಗಿಲ್ಲ. ಎರಡು ದಿನಗಳ ನಂತರ ವೈದ್ಯರು ಆಕೆಯ ಬ್ರೈನ್ ಡೆಡ್ ಎಂದು ದೃಢಪಡಿಸಿದ್ದರು.

ಇದರೊಂದಿಗೆ ವೈದ್ಯರು, ಅಂಗಾಂಗ ದಾನದ ಜೀವದಾನ ಟ್ರಸ್ಟ್ ಬಗ್ಗೆ ಆಕೆಯ ಕುಟುಂಬ ಸದಸ್ಯರಿಗೆ ಬಗ್ಗೆ ತಿಳಿಸಿದ್ದಾರೆ. ಜೀವದಾನ ಟ್ರಸ್ಟ್ ಸಿಬ್ಬಂದಿ ಅಂಗಾಂಗ ದಾನದ ಬಗ್ಗೆ ತಿಳಿಸಿದಾಗ ಸುಜಾತಾ ಕುಟುಂಬಸ್ಥರು ಅಂಗಾಂಗ ದಾನಕ್ಕೆ ಒಪ್ಪಿಗೆ ಸೂಚಿಸಿದ್ದಾರೆ. ಆಕೆಯ ಎರಡು ಮೂತ್ರಪಿಂಡಗಳು, ಹೃದಯ, ಯಕೃತ್ತು ಮತ್ತು ಶ್ವಾಸಕೋಶಗಳನ್ನು ತೆಗೆದು ಆರು ಜನರಿಗೆ ಕಸಿ ಮಾಡಲಾಗಿದೆ.

ಇದನ್ನೂ ಓದಿ: ಕೈಗಳಿಗೆ ಹಸಿರು ಬಳೆ ತೊಟ್ಟು, ವಧುವಿನಂತೆ ಸಿಂಗಾರಗೊಂಡು ಹಾಸ್ಟೆಲ್​​ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಯುವಕ

ಮೃತ ಸುಜಾತಾ ಅಂಗಾಂಗ ದಾನದಿಂದ ಆರು ಜೀವಗಳನ್ನು ಉಳಿಸಿದ್ದಾರೆ. ನಂತರ ಅವರ ಸ್ವಗ್ರಾಮ ಬಹದ್ದೂರ್ ಪೇಟಾದಲ್ಲಿ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಲಾಯಿತು. ಅಂಗಾಂಗ ದಾನಕ್ಕೆ ಸುಜಾತಾ ಅವರ ಪತಿ ದಶರಥ ಅವರ ಪುತ್ರ ಸುನೀಲ್ ಹಾಗೂ ಕುಟುಂಬಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಸುಜಾತಾ ದೈಹಿಕವಾಗಿ ಇಲ್ಲದಿದ್ದರೂ ಅಂಗಾಂಗಗಳ ಹಂಚಿಕೆಯೊಂದಿಗೆ ಇತರ ಆರು ಜನರಲ್ಲಿ ಬದುಕುತ್ತಿದ್ದಾರೆ ಎಂದು ಸ್ಥಳೀಯರು ಪ್ರಶಂಸಿಸಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?