AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೃದ್ಧ ಮಾವನಿಗೆ ಮನಬಂದಂತೆ ಚಪ್ಪಲಿಯಲ್ಲಿ ಹೊಡೆದ ಸೊಸೆ; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ವೀಲ್​​ ಚೇರ್‌ನಲ್ಲಿದ್ದ ವೃದ್ಧನಿಗೆ ಆತನ ಸೊಸೆ ಚಪ್ಪಲಿಯಿಂದ ಹೊಡೆಯುತ್ತಿರುವ ವಿಡಿಯೋ ವೈರಲ್​ ಆಗಿದೆ. ಈ ಘಟನೆ ತೆಲಂಗಾಣದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಗಳು ಹೊರಬಿದ್ದ ನಂತರ, ನೆಟ್ಟಿಗರು ಈ ಕ್ರೂರ ಕೃತ್ಯವನ್ನು ಖಂಡಿಸುತ್ತಿದ್ದಾರೆ ಮತ್ತು ಮಹಿಳೆಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸುತ್ತಿದ್ದಾರೆ. ಘಟನೆಯ ನಿಜವಾದ ಕಾರಣ ಇನ್ನೂ ಅಸ್ಪಷ್ಟವಾಗಿದೆ.

ಅಕ್ಷತಾ ವರ್ಕಾಡಿ
|

Updated on: Dec 08, 2024 | 2:39 PM

Share

ಕಾಲುಗಳ ಸ್ವಾಧೀನ ಕಳೆದುಕೊಂಡು ವೀಲ್ ಚೇರ್ ನಲ್ಲಿದ್ದ ವೃದ್ಧ ಮಾವನಿಗೆ ಸೊಸೆಯೊಬ್ಬಳು ಮನಬಂದಂತೆ ಚಪ್ಪಲಿಯಲ್ಲಿ ಹೊಡೆಯುತ್ತಿರುವ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗಿದೆ. ಈ ಘಟನೆಯು ನವೆಂಬರ್‌ನಲ್ಲಿ ನಡೆದಿದ್ದು, ಸಿಸಿಟಿವಿ ದೃಶ್ಯಗಳು ಈಗ ಸಾಮಾಜಿಕ ಮಾಧ್ಯಮದಲ್ಲಿ ಹೇಗೆ ಕಾಣಿಸಿಕೊಂಡಿದೆ. ಈ ಘಟನೆ ತೆಲಂಗಾಣದಲ್ಲಿ ನಡೆದಿರುವುದಾಗಿ ವರದಿಯಾಗಿದೆ.

ವೈರಲ್​ ಆಗಿರುವ ವಿಡಿಯೋದಲ್ಲಿ ಮಹಿಳೆ ಕಾಲಿನಲ್ಲಿದ್ದ ಚಪ್ಪಲಿ ತೆಗೆದು ವೃದ್ದನಿಗೆ ಮನಬಂದಂತೆ ಥಳಿಸಿರುವುದನ್ನು ಕಾಣಬಹುದು. ಘಟನೆ ಮನೆಯ ಮುಂಭಾಗದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಹಿಳೆಯ ಮುದುಕನಿಗೆ ಹೊಡೆಯುತ್ತಿರುವಾಗ ಸಾಕು ನಾಯಿ ಬೊಗಳುತ್ತಾ ಹೊಡೆಯದಂತೆ ತಡೆಯುತ್ತಿರುವುದನ್ನು ಕಾಣಬಹುದು.

ವೀಡಿಯೋ ವೈರಲ್​ ಆಗುತ್ತಿದ್ದಂತೆ, ಎಕ್ಸ್ ಬಳಕೆದಾರರು ವೃದ್ಧನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆಯ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದರು. ಘಟನೆಯ ಹಿಂದಿನ ಕಾರಣ ಅಸ್ಪಷ್ಟವಾಗಿದ್ದರೂ, ನೆಟಿಜನ್‌ಗಳು ಈ ವಿಷಯವನ್ನು ಪರಿಶೀಲಿಸುವಂತೆ ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಬ್ಯಾಂಕ್​​ನೊಳಗೆ ಬಂದು ಮಹಿಳಾ ಮ್ಯಾನೇಜರ್​ನ ಫೋನ್​ ಒಡೆದು ಬೆದರಿಕೆ ಹಾಕಿದ ವ್ಯಕ್ತಿ; ವಿಡಿಯೋ ವೈರಲ್​

@TeluguScribe ಎಂಬ ಟ್ವಿಟರ್​ ಖಾತೆಯಲ್ಲಿ ಡಿಸೆಂಬರ್​ 08ರಂದು ವಿಡಿಯೋ ಹಂಚಿಕೊಳ್ಳಲಾಗಿದ್ದು, ಕೆಲವೇ ಗಂಟೆಗಳಲ್ಲಿ ವಿಡಿಯೋ 30 ಸಾವಿರಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ ಸಾಕಷ್ಟು ನೆಟ್ಟಿಗರು ಕ್ರೂರ ಮಹಿಳೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆದೇಶಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ