AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಬೈಲ್ ಚಾರ್ಜ್ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿ ಬಾಲಕಿ ಸಾವು

ಮೊಬೈಲ್​​​ನಲ್ಲಿ ಆಟವಾಡುತ್ತಿರುವ ವೇಳೆ ಚಾರ್ಜ್ ಖಾಲಿಯಾಗಿದ್ದು, ಬಾಲಕಿ ಚಾರ್ಜ್ ಮಾಡಲು ಮುಂದಾಗಿದ್ದಾಳೆ. ಈ ವೇಳೆ ವಿದ್ಯುತ್ ಸ್ಪರ್ಶಿಸಿದ್ದು, ಬಾಲಕಿ ಕುಸಿದು ಬಿದ್ದು ಸಾವನ್ನಪ್ಪಿರುವುದಾಗಿ ವರದಿಯಾಗಿದೆ.

ಮೊಬೈಲ್ ಚಾರ್ಜ್ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿ ಬಾಲಕಿ ಸಾವು
ಸಾಂದರ್ಭಿಕ ಚಿತ್ರ
ಅಕ್ಷತಾ ವರ್ಕಾಡಿ
|

Updated on: Jul 27, 2024 | 11:00 AM

Share

ಮೊಬೈಲ್ ಚಾರ್ಜ್ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿ ಬಾಲಕಿ ಸಾವನ್ನಪ್ಪಿರುವ ಘಟನೆ ತೆಲಂಗಾಣದ ಖಮ್ಮಂ ಜಿಲ್ಲೆಯ ಚಿಂತಕಣಿಲ್ಲಿ ನಡೆದಿದೆ. ಅಂಜಲಿ ಕಾರ್ತಿಕಾ (9) ಮೃತ ಬಾಲಕಿ. ಮೊಬೈಲ್​​​ನಲ್ಲಿ ಆಟವಾಡುತ್ತಿರುವ ವೇಳೆ ಚಾರ್ಜ್ ಖಾಲಿಯಾಗಿದ್ದು, ಅಂಜಲಿ ಮೊಬೈಲ್ ಚಾರ್ಜ್ ಮಾಡಲು ಹೋಗಿದ್ದಾಳೆ. ಈ ವೇಳೆ ವಿದ್ಯುತ್ ಸ್ಪರ್ಶಿಸಿದ್ದು, ಬಾಲಕಿ ಕುಸಿದು ಬಿದ್ದಿದ್ದಾಳೆ. ಶುಕ್ರವಾರ (ಜುಲೈ 26) ಈ ದಾರುಣ ಘಟನೆ ನಡೆದಿದೆ.

ಕುಸಿದು ಬಿದ್ದು ಒದ್ದಾಡುತ್ತಿರುವ ಬಾಲಕಿಯನ್ನು ಗಮನಿಸಿದ ಆಕೆಯ ಪೋಷಕರು ತಕ್ಷಣ ಗ್ರಾಮದ ಖಾಸಗಿ ವೈದ್ಯರ ಬಳಿ ಕರೆದೊಯ್ದಿದ್ದಾರೆ. ಆದರೆ ಬಾಲಕಿ ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.

ಬಾಲಕಿ ಆಟವಾಡುತ್ತಿದ್ದಂತೆ ಒದ್ದೆ ಕೈಯಲ್ಲಿ ಹೋಗಿ ವಿದ್ಯುತ್ ಸ್ಪರ್ಶಿಸಿರುವುದೇ ಸಾವಿಗೆ ಕಾರಣ ಎಂದು ತಿಳಿದುಬಂದಿದೆ. ಕೆಲ ಹೊತ್ತಿನ ಹಿಂದೆ ಮನೆಯಲ್ಲಿ ಕುಣಿದು ಕುಪ್ಪಳಿಸುತ್ತಾ ಆಟವಾಡುತ್ತಿದ್ದ ಬಾಲಕಿ ಏಕಾಏಕಿ ಪ್ರಾಣ ಕಳೆದುಕೊಂಡಿರುವುದನ್ನು ಕಂಡು ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: Video: ಗ್ಯಾಸ್ ಸೋರಿಕೆಯಿಂದ ಆಟೋ ಸ್ಫೋಟ; ಭೀಕರ ಅಗ್ನಿ ಅವಘಡದ ಭಯಾನಕ ದೃಶ್ಯ ವೈರಲ್​

ಮೃತ ಬಾಲಕಿ ಅಂಜಲಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಾಲ್ಕನೇ ತರಗತಿ ವಿದ್ಯಾರ್ಥಿನಿ. ತಂದೆ ರಾಮಕೃಷ್ಣ ದೂರಿನ ಮೇರೆಗೆ ಎಸ್‌ಎಸ್‌ಐ ನಾಗುಲ್ಮೀರ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ