AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video; ಪ್ರಾಣವನ್ನೇ ಪಣಕ್ಕಿಟ್ಟು ನಾಯಿಯನ್ನು ರಕ್ಷಿಸಿದ ತೆಲಂಗಾಣ ಪೊಲೀಸ್​​ ಅಧಿಕಾರಿ

ಹೋಮ್​ ಗಾರ್ಡ್ ಪೊಲೀಸ್​​ ಅಧಿಕಾರಿಯೊಬ್ಬರು  ನೀರಿನ ಸುಳಿಗೆ ಸಿಲುಕಿದ್ದ ನಾಯಿಯನ್ನು ತನ್ನ ಪ್ರಾಣ ಒತ್ತೆಯಿಟ್ಟು ರಕ್ಷಸಿದ ಘಟನೆ ನಡೆದಿದೆ. ವಿಡಿಯೋವನ್ನು ಐಪಿಎಸ್​ ಅಧಿಕಾರಿ ದಿಪಾಂಶು ಕಬ್ರಾ ಎನ್ನುವವರು ಹಂಚಿಕೊಂಡಿದ್ದಾರೆ.

Viral Video; ಪ್ರಾಣವನ್ನೇ ಪಣಕ್ಕಿಟ್ಟು ನಾಯಿಯನ್ನು ರಕ್ಷಿಸಿದ ತೆಲಂಗಾಣ ಪೊಲೀಸ್​​ ಅಧಿಕಾರಿ
ನಾಯಿಯನ್ನು ರಕ್ಷಿಸಿದ ಅಧಿಕಾರಿ
TV9 Web
| Edited By: |

Updated on:Jan 28, 2022 | 12:23 PM

Share

ಸಾಮಾಜಿಕ ಜಾಲತಾಣದಲ್ಲಿ ಆಗಾಗ ಕಾಣಿಸಿಕೊಳ್ಳುವ ವೈರಲ್​ ವಿಡಿಯೋಗಳು ನೆಟ್ಟಿಗರ ಮನ ಮುಟ್ಟುವಂತೆ ಇರುತ್ತವೆ. ಹೃದಯ ಸ್ಪರ್ಶಿ ಘಟನೆಗಳು, ಮಾನವೀಯ ಘಟನೆಗಳು ನೋಡುಗರನ್ನು ಧನಾತ್ಮಕವಾಗಿ ಯೋಚಿಸುವಂತೆ  ಮಾಡುತ್ತದೆ. ಅಂತಹದ್ದೆ ಒಂದು ಘಟನೆ ಈಗ ತೆಲಂಗಾಣ (Telangana) ದಲ್ಲಿ ನಡೆದಿದೆ. ಹೋಮ್​ ಗಾರ್ಡ್ (Home Guard)​​ ಪೊಲೀಸ್​​ ಅಧಿಕಾರಿಯೊಬ್ಬರು  ನೀರಿನ ಸುಳಿಗೆ ಸಿಲುಕಿದ್ದ ನಾಯಿಯನ್ನು ತನ್ನ ಪ್ರಾಣ ಒತ್ತೆಯಿಟ್ಟು ರಕ್ಷಸಿದ ಘಟನೆ ನಡೆದಿದೆ. ವಿಡಿಯೋವನ್ನು ಐಪಿಎಸ್​ ಅಧಿಕಾರಿ (IPS Officer) ದಿಪಾಂಶು ಕಬ್ರಾ ಎನ್ನುವವರು ಹಂಚಿಕೊಂಡಿದ್ದಾರೆ.

ವಿಡಿಯೋದಲ್ಲಿ ಜೋರಾಗಿ ನೀರು ಹರಿಯುತ್ತಿದ್ದ ಪಕ್ಕದಲ್ಲಿ ನಾಯಿಯೊಂದು ಹೆದರಿಕೊಂಡು ಕುಳಿತಿರವುದನ್ನು ಕಾಣಬಹುದು. ನಂತರ ಹೆದರಿದ ನಾಯಿಯನ್ನು ನೋಡಿ ಜೆಸಿಬಿಯ ಮೂಲಕ ಅಲ್ಲಿಗೆ ತೆರಳಿ ಪೊಲೀಸ್​ ಅಧಿಕಾರಿಯೊಬ್ಬರು ನಾಯಿಯನ್ನು ರಕ್ಷಿಸಿದ್ದಾರೆ. ನಾಯಿಯನ್ನು ರಕ್ಷಿಸಿದ ಪೊಲೀಸ್​ ಅಧಿಕಾರಿಯನ್ನು ಮುಝಿಬ್​ ರಶೀದ್​ ಎಂದು ಗುರುತಿಸಲಾಗಿದೆ. ಇವರು ತೆಲಂಗಾಣ ರಾಜ್ಯ ಪೊಲೀಸ್ ಅಧಿಕಾರಿಯಾಗಿದ್ದಾರೆ. ವಿಡಿಯೋ ನೋಡಿ ನೆಟ್ಟಿಗರು ಮಾನವೀಯ ಗುಣ ಇನ್ನೂ ಇದೆ ಎಂದು ಕಾಮೆಂಟ್​ ಮಾಡಿದ್ದಾರೆ.

ವಿಡಿಯೋವನ್ನು ಹಂಚಿಕೊಂಡ ಐಪಿಎಸ್​ ಅಧಿಕಾರಿ, ನೀರಿನ ಸುಳಿಯನ್ನು ನೋಡಿ ಹೆದರಿ ಕುಳಿತ ನಾಯಿಯನ್ನು ರಕ್ಷಿಸಿದ ನಮ್ಮ ಅಧಿಕಾರಿ ಸ್ವತಃ ಜೆಸಿಬಿಯನ್ನು ಕರೆಸಿ ಪ್ರಾಣಿಯನ್ನು ರಕ್ಷಿಸಿದ್ದಾರೆ. ಅವರ ಪ್ರಾಣವನ್ನು ಲೆಕ್ಕಿಸದೆ ನಾಯಿಯನ್ನು ರಕ್ಷಿಸಿದ ಅವರ ದೈರ್ಯಕ್ಕೆ ನನ್ನ ಸಲಾಂ ಎಂದು ಕ್ಯಾಪ್ಷನ್​ ನೀಡಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಅದ ವೀಡಿಯೋ ನೆಟ್ಟಿಗರ ಮನ ಗೆದ್ದಿದೆ. ವಿಡಿಯೋ ಹಂಚಿಕೊಂಡಾಗಿನಿಂದ ಈವರೆಗೆ 7 ಸಾವಿರಕ್ಕೂ ಹೆಚ್ಚು ವೀಕ್ಷಣೆ ಪಡೆದಿದ್ದು ಪೊಲೀಸ್ ಅಧಿಕಾರಿಯ ಕಾರ್ಯಕ್ಕೆ ಶ್ಲಾಘನೆ ವ್ಯಕ್ತವಾಗಿದೆ.

ಇದನ್ನೂ ಓದಿ;

Viral Video; ಹಿಮಪಾತದ ನಡುವೆ ಜೆಸಿಬಿ ಏರಿ ಮದುವೆ ಮಂಟಪಕ್ಕೆ ಬಂದ ವರ

Viral: ಆಲೂಗಡ್ಡೆ ಪದಾರ್ಥ ಎಸೆದು ಕಿತ್ತಾಡಿಕೊಂಡ ಮಹಿಳಾ ಖೈದಿಗಳು; ಅವರಿಗೆ ನ್ಯಾಯಾಲಯ ವಿಧಿಸಿದ ದಂಡವೆಷ್ಟು ಗೊತ್ತಾ?

Published On - 9:45 am, Fri, 28 January 22

Follow Us
TV9 Web
TV9 Web

TV9 Kannada

Read More
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ