AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಚಕ್ಕುಲಿ ಗಂಟಲಲ್ಲಿ ಸಿಲುಕಿ ವ್ಯಕ್ತಿ ಸಾವು

ಮಂಚಿರ್ಯಾಲ್‌ನ ಹಮಾಲಿವಾಡದ ಎನ್‌ ರಂಗರಾವ್‌ (65) ದಿನಗೂಲಿ ಕಾರ್ಮಿಕ ಮಂಗಳವಾರ ಸಂಜೆ(ಜ.30) ಚಹಾ ಕುಡಿಯುವ ವೇಳೆ ಚಕ್ಕುಲಿ ತಿಂದಿದ್ದಾರೆ. ಎಲ್ಲರ ಜೊತೆಯಲ್ಲಿ ಮಾತನಾಡುತ್ತಿದ್ದಂತೆ ಸ್ಥಳದಲ್ಲೇ ಕುಸಿದು ಬಿದ್ದ ರಂಗರಾವ್ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಪರೀಕ್ಷಿಸಿದ ವೈದ್ಯರು ಅದಾಗಲೇ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ.

Viral News: ಚಕ್ಕುಲಿ ಗಂಟಲಲ್ಲಿ ಸಿಲುಕಿ ವ್ಯಕ್ತಿ ಸಾವು
ಸಾಂದರ್ಭಿಕ ಚಿತ್ರImage Credit source: Pinterest
ಅಕ್ಷತಾ ವರ್ಕಾಡಿ
|

Updated on: Feb 01, 2024 | 2:34 PM

Share

ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಕುಳಿತವರು ಕುಳಿತಿದ್ದಂತೆ, ನಿಂತಿದ್ದವರು ಸ್ಥಳದಲ್ಲೇ ಕುಸಿದು ಬಿದ್ದು ಸಾವನ್ನಪ್ಪುವ ಘಟನೆಗಳು ಹೆಚ್ಚಾಗಿ ಕಂಡುಬರುತ್ತಿದೆ. ಈಗಷ್ಟೇ ಖುಷಿಯಿಂದ ಮಾತನಾಡುತ್ತಿದ್ದ ವ್ಯಕ್ತಿ ಕ್ಷಣಾರ್ಧದಲ್ಲೇ ಸಾವನ್ನಪ್ಪುತ್ತಿರುವುದು ಸಾಮಾನ್ಯವಾಗಿದೆ. ಇದೀಗಾ ಅಂತದ್ದೇ ಘಟನೆಯೊಂದು ತೆಲಂಗಾಣದ ಮಂಚಿರ್ಯಾಲ್​​​​​​​​ನಲ್ಲಿ ನಡೆದಿದೆ. ಮೃತ ವ್ಯಕ್ತಿ ಸಂಜೆಯ ಚಹಾದ ಸಮಯದಲ್ಲಿ ಚಕ್ಕುಲಿ ತಿಂದಿದ್ದು, ಅದು ಗಂಟಲಿನಲ್ಲಿ ಸಿಲುಕಿಕೊಂಡಿದೆ, ಪರಿಣಾಮ ಉಸಿರಾಟದ ಸಮಸ್ಯೆಯಿಂದಾಗಿ ಸಾವನ್ನಪ್ಪಿರುವುದು ತಿಳಿದುಬಂದಿದೆ.

ಮಂಚಿರ್ಯಾಲ್‌ನ ಹಮಾಲಿವಾಡದ ಎನ್‌ ರಂಗರಾವ್‌ (65) ದಿನಗೂಲಿ ಕಾರ್ಮಿಕ ಮಂಗಳವಾರ ಸಂಜೆ(ಜ.30) ಚಹಾ ಕುಡಿಯುವ ವೇಳೆ ಚಕ್ಕುಲಿ ತಿಂದಿದ್ದಾರೆ. ಎಲ್ಲರ ಜೊತೆಯಲ್ಲಿ ಮಾತನಾಡುತ್ತಿದ್ದಂತೆ ಸ್ಥಳದಲ್ಲೇ ಕುಸಿದು ಬಿದ್ದ ರಂಗರಾವ್ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಪರೀಕ್ಷಿಸಿದ ವೈದ್ಯರು ಅದಾಗಲೇ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ.

ಇದನ್ನೂ ಓದಿ: 1 ಕಪ್​​​​ ಬೇಳೆ ಸಾರಿನ ಬೆಲೆ 25 ಸಾವಿರ ರೂ. ಯಾಕಿಷ್ಟು ದುಬಾರಿ?; ವಿಡಿಯೋ ವೈರಲ್

ರಂಗರಾವ್ ಸಾವಿನ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಸಂಜೆಯ ವೇಳೆ ಚಹಾದ ಜೊತೆಗೆ ಸೇವಿಸಿದ್ದ ಚಕ್ಕುಲಿ ಗಂಟಲಲ್ಲಿ ಸಿಕ್ಕಿ ಉಸಿರುಗಟ್ಟಿ ರಂಗರಾವ್ ಮೃತಪಟ್ಟಿರುವುದು ತನಿಖೆಯ ವೇಳೆ ತಿಳಿದುಬಂದಿದ್ದು, ಮಂಚಿರ್ಯಾಲ ಸಬ್ ಇನ್ಸ್ ಪೆಕ್ಟರ್ ರಾಜೇಂದರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು