AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಉಚಿತ ಭಾಗ್ಯವಲ್ಲ, ಉದ್ಯೋಗ ಮುಖ್ಯ… ವೈರಲ್‌ ಆಗ್ತಿದೆ ಆಟೋ ಹಿಂದೆ ಬರೆದ ಅರ್ಥಪೂರ್ಣ ಸಾಲು

ಕೆಲವೊಬ್ರು ಆಟೋ ಡ್ರೈವರ್ಸ್‌ ತಮ್ಮ ಆಟೋದಲ್ಲಿ ವಿಶಿಷ್ಟವಾದ ಕೋಟ್ಸ್‌ ಅಥವಾ ಸಾಲುಗಳನ್ನು ಬರೆದಿರುತ್ತಾರೆ. ಆಟೋಗಳ ಹಿಂದೆ ಬರೆದಿರುವ ಸಾಲುಗಳಂತೂ ಒಂದಕ್ಕಿಂತ ಒಂದು ಅದ್ಭುತವಾಗಿರುತ್ತವೆ. ಕೆಲವೊಂದು ತುಂಬಾ ಫನ್ನಿಯಾಗಿದ್ರೆ, ಇನ್ನೂ ಕೆಲವು ಮನ ಮುಟ್ಟುವಂತಿರುತ್ತದೆ. ಇದೀಗ ಅಂತಹದ್ದೇ ಫೋಟೋವೊಂದು ವೈರಲ್‌ ಆಗಿದ್ದು, ತೆಲಂಗಾಣ ಮೂಲದ ಆಟೋ ಡ್ರೈವರ್‌ ಒಬ್ರು ಉಚಿತವಲ್ಲ, ಉದ್ಯೋಗ ಮುಖ್ಯ ಎಂಬ ಸಾಲನ್ನು ಆಟೋದ ಹಿಂದೆ ಬರೆಯುವ ಮೂಲಕ ಸರ್ಕಾರದ ಬಿಟ್ಟಿ ಭಾಗ್ಯದ ವಿರುದ್ಧ ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದಾರೆ.

Viral: ಉಚಿತ ಭಾಗ್ಯವಲ್ಲ, ಉದ್ಯೋಗ ಮುಖ್ಯ… ವೈರಲ್‌ ಆಗ್ತಿದೆ ಆಟೋ ಹಿಂದೆ ಬರೆದ ಅರ್ಥಪೂರ್ಣ ಸಾಲು
ವೈರಲ್ ಪೋಸ್ಟ್​
ಮಾಲಾಶ್ರೀ ಅಂಚನ್​
| Edited By: |

Updated on: Jan 22, 2025 | 7:35 AM

Share

ಚುನಾವಣೆಯಲ್ಲಿ ಗೆಲ್ಲುವ ಸಲುವಾಗಿ ರಾಜಕೀಯ ಪಕ್ಷಗಳು ಹಲವಾರು ತಂತ್ರಗಳನ್ನು ರೂಪಿಸುತ್ತವೆ. ಅಂತಹ ಸ್ಟ್ರಾಟರ್ಜಿಗಳಲ್ಲಿ ಉಚಿತ ಭಾಗ್ಯಗಳು ಕೂಡಾ ಒಂದು. ಇದೇ ತಂತ್ರವನ್ನು ಉಪಯೋಗಿಸಿ ಚುನಾವಣೆಯಲ್ಲಿ ಗೆದ್ದು, ನಮ್ಮ ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರವು 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದಂತೆ, ನಂತರದಲ್ಲಿ ತೆಲಂಗಾಣದಲ್ಲಿ ಅಲ್ಲಿನ ಕಾಂಗ್ರೆಸ್‌ ಸರ್ಕಾರ 6 ಗ್ಯಾರಂಟಿಗಳನ್ನು ಘೋಷಿಸಿತ್ತು. ಆದರೆ ಹೆಚ್ಚಿನವರು ಬಿಟ್ಟಿ ಭಾಗ್ಯಗಳು ಬೇಡ, ಇದರಿಂದ ಸಂಕಷ್ಟ ಎದುರಾಗುವುದು ಪಕ್ಕಾ, ಅದರ ಬದಲಾಗಿ ಜನರಿಗೆ ಉಪಯೋಗವಾಗುವಂತಹ ಯೋಜನೆಗಳನ್ನು ರೂಪಿಸಿ ಎಂದು ಹೇಳಿದ್ದುಂಟು. ಅದರಂತೆ ಇಲ್ಲೊಬ್ರು ಆಟೋ ಡ್ರೈವರ್‌ ಕೂಡಾ “ಉಚಿತವಲ್ಲ, ಉದ್ಯೋಗ ಮುಖ್ಯ” ಎಂದು ಆಟೋದ ಹಿಂದೆ ಕೋಟ್ಸ್‌ ಬರೆಸಿ, ಬಿಟ್ಟಿ ಭಾಗ್ಯಗಳ ವಿರುದ್ಧ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಆಟೋ ಹಿಂದೆ ಬರೆದ ಈ ಸಾಲಿನ ಫೋಟೋ ಇದೀಗ ವೈರಲ್‌ ಆಗುತ್ತಿದೆ.

ತೆಲಂಗಾಣದ ಸಿರ್ಸಿಲ್ಲಾ ಜಿಲ್ಲೆಯ ಆಟೋ ಚಾಲಕರಾದ ರಾಂಬಾಬು ಎಂಬವರು ತಮ್ಮ ಆಟೋದ ಹಿಂದೆ “ಉಚಿತವಲ್ಲ, ಉದ್ಯೋಗ ಮುಖ್ಯ” ಎಂಬ ಕೋಟ್ಸ್‌ ಬರೆಸಿ ಸರ್ಕಾರದ ಬಿಟ್ಟಿ ಭಾಗ್ಯದ ವಿರುದ್ಧ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಈ ಹಿಂದೆ ನೇಕಾರರಾಗಿ ಕೆಲಸ ಮಾಡುತ್ತಿದ್ದ ರಾಂಬಾಬು ಆರೋಗ್ಯ ಸಮಸ್ಯೆಯಿಂದ ಕೆಲಸವನ್ನು ತೊರೆದು ಜೀವನೋಪಾಯಕ್ಕಾಗಿ ಆಟೋ ಓಡಿಸಲು ಶುರು ಮಾಡಿದರು. ಇದೀಗ ಇವರು ತಮ್ಮ ಆಟೋದ ಹಿಂದೆ ಬರೆದ ಸಾಲುಗಳ ಮೂಲಕವೇ ಸಖತ್‌ ಸುದ್ದಿಯಲ್ಲಿದ್ದಾರೆ.

ತಾವು ಆಟೋದ ಹಿಂದೆ ಬರೆದ ಸಾಲುಗಳ ಬಗ್ಗೆ ಮಾತನಾಡಿದ ರಾಂಬಾಬು, “ಬಿಟ್ಟಿ ಭಾಗ್ಯಗಳಿಂದ ಒಳ್ಳೆಯದಕ್ಕಿಂತ ಹಾನಿಯೇ ಹೆಚ್ಚು. ಸರ್ಕಾರಗಳು ಉಚಿತ ಸವಲತ್ತುಗಳನ್ನು ನೀಡುವ ಬದಲು ಯುವಕರನ್ನು ಸಬಲೀಕರಣಗೊಳಿಸುವ ಉದ್ಯೋಗ ಸೃಷ್ಟಿ ಯೋಜನೆಗಳನ್ನು ಜಾರಿಗೊಳಿಸುವತ್ತ ಗಮನ ಹರಿಸಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪಬ್ಲಿಕ್‌ನಲ್ಲಿಯೇ ಮುದ್ದಿನ ಹೆಂಡ್ತಿಗಾಗಿ ಗಂಡನ ರೊಮ್ಯಾಂಟಿಕ್‌ ಡ್ಯಾನ್ಸ್;‌ ವೈರಲ್‌ ಆಯ್ತು ವಿಡಿಯೋ

ಕಳೆದ ಹತ್ತು ವರ್ಷಗಳಿಂದ ತಮ್ಮ ಆಟೋದ ಹಿಂದೆ ಒಂದಲ್ಲಾ ಒಂದು ಉತ್ತಮ ಸಾಲು ಅಥವಾ ಕೊಟೇಶನ್ ಬರೆಯುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶವನ್ನು ಸಾರುವ ಕೆಲಸವನ್ನು ಮಾಡುತ್ತಿದ್ದಾರೆ. ಇದೀಗ ಇವರು ಬಿಟ್ಟಿ ಭಾಗ್ಯಗಳ ಕುರಿತು ತಮ್ಮ ಆಟೋದ ಹಿಂದೆ ಬರೆದ ಸಾಲುಗಳು ಭಾರೀ ವೈರಲ್‌ ಆಗಿದ್ದು, ಈ ಮೂಲಕ ರಾಂಬಾಬು ನೆಟ್ಟಿಗರಿಂದ ಪ್ರಶಂಸೆಯನ್ನು ಪಡೆದಿದ್ದಾರೆ.

ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ