AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದೆಂಥಾ ಮೌಢ್ಯ! ಸಮವಸ್ತ್ರ ಧರಿಸಿದ ಪೊಲೀಸರೇ ಅಗ್ಗಿಕುಂಡದಲ್ಲಿ ಹೆಜ್ಜೆ ಹಾಕಿದರು, ವಿಡಿಯೋ ವೈರಲ್

Telangana police superstition: ಚೆರುವುಗಟ್ಟು ದೇಗುಲ ಹೈದರಾಬಾದ್‌ನಿಂದ 60 ಕಿಲೋಮೀಟರ್ ದೂರದಲ್ಲಿದೆ. ಶಕ್ತಿಶಾಲಿ ಶಿವ ದೇವಾಲಯ ಇಲ್ಲಿದೆ. ಪ್ರತಿ ತಿಂಗಳ ಅಮವಾಸ್ಯೆ ರಾತ್ರಿಯಲ್ಲಿ ಜನರು ಈ ದೇವಾಲಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡುತ್ತಾರೆ. ತೆಲಂಗಾಣ ಪೊಲೀಸ್ ಸಿಬ್ಬಂದಿ ಯಾವುದೇ ಆತಂಕ, ಉದ್ವೇಗವಿಲ್ಲದೆ, ಸಮರ್ಪಣಾಭಾವದಿಂದ ನಿಗಿನಿಗಿ ಕೆಂಡವಿರುವ ಬೆಂಕಿಯಲ್ಲಿ ಹೆಜ್ಜೆ ಹಾಕುತ್ತಿರುವ ವಿಡಿಯೋ ಎಲ್ಲಡೆ ಹರಿದಾಡುತ್ತಿದೆ.

ಇದೆಂಥಾ ಮೌಢ್ಯ! ಸಮವಸ್ತ್ರ ಧರಿಸಿದ ಪೊಲೀಸರೇ ಅಗ್ಗಿಕುಂಡದಲ್ಲಿ ಹೆಜ್ಜೆ ಹಾಕಿದರು, ವಿಡಿಯೋ ವೈರಲ್
ಸಮವಸ್ತ್ರ ಧರಿಸಿದ ಪೊಲೀಸರೇ ಅಗ್ಗಿಕುಂಡದಲ್ಲಿ ಹೆಜ್ಜೆ ಹಾಕಿದರು
ಸಾಧು ಶ್ರೀನಾಥ್​
|

Updated on: Feb 22, 2024 | 10:17 AM

Share

ತೆಲಂಗಾಣ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ (Telangana police superstition) ಇಂತಹ ದುಸ್ಸಾಹಸಕ್ಕೆ ಯಾಕೆ ಕೈಹಾಕಿದರೋ ಆ ದೇವರೇ ಹೇಳಬೇಕು. ತೆಲಂಗಾಣ ಪೊಲೀಸ್ ಸಿಬ್ಬಂದಿ ಯಾವುದೇ ಆತಂಕ, ಉದ್ವೇಗವಿಲ್ಲದೆ, ಸಮರ್ಪಣಾಭಾವದಿಂದ ನಿಗಿನಿಗಿ ಕೆಂಡಗಳಿರುವ ಬೆಂಕಿಯಲ್ಲಿ (Fire walking ritual) ಹೆಜ್ಜೆ ಹಾಕುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ನಲ್ಲಗೊಂಡ ಜಿಲ್ಲೆಯ ನಾರ್ಕೆಟ್ ಪಲ್ಲಿ ಮಂಡಲದಲ್ಲಿ ವಾರ್ಷಿಕ ಚೆರುವುಗುತ್ತು ಜಾತ್ರೆಯ ಅಂಗವಾಗಿ ಸಮವಸ್ತ್ರ ಧರಿಸಿದ ಪೊಲೀಸರು ಈ ಕಾರ್ಯದಲ್ಲಿ ಭಾಗವಹಿಸಿದ್ದರು. ಗಮನಾರ್ಹವೆಂದರೆ ಈ ಘಟನೆಗೂ ತನ್ನ ಇಲಾಖೆಗೂ ಯಾವುದೇ ಸಂಬಂಧವಿಲ್ಲ ಎಂದು ತೆಲಂಗಾಣ ಪೊಲೀಸ್ ಇಲಾಖೆ ಸ್ಪಷ್ಟಪಡಿಸಿದೆ.

ನಲ್ಲಗೊಂಡ (Nalgonda) ಜಿಲ್ಲೆಯ ಪಾರ್ವತಿ ಜಡೆ ರಾಮಲಿಂಗೇಶ್ವರ ಸ್ವಾಮಿ ಜಾತ್ರೆ ಉತ್ಸವಗಳಲ್ಲಿ ಭಕ್ತರು ಅಗ್ನಿಗುಂಡದ ಮೇಲೆ ನಡೆದುಕೊಂಡು ಹೋಗುವ ಸಂಪ್ರದಾಯವಿದೆ. ಹಲವು ವರ್ಷಗಳಿಂದ ಈ ಕಾರ್ಯಕ್ರಮ ನಡೆಯುತ್ತಿದೆ. ಆದರೆ ಮೌಢ್ಯಾಚರಣೆ ನಿಲ್ಲಿಸಬೇಕಾದ ಪೊಲೀಸರೇ ಸಾಮಾನ್ಯ ಭಕ್ತರ ಜತೆಗೆ ಅಗ್ಗಿಕುಂಡದಲ್ಲಿ ಹೆಜ್ಜೆ ಹಾಕುವ ಮೂಲಕ ಚರ್ಚೆಗೆ ಆಸ್ಪದ ನೀಡಿದ್ದಾರೆ.

ಚೆರುವುಗಟ್ಟು ದೇಗುಲ ಹೈದರಾಬಾದ್‌ನಿಂದ 60 ಕಿಲೋಮೀಟರ್ ದೂರದಲ್ಲಿದೆ. ಈ ದೇವಾಲಯವು ಬಹಳ ಪ್ರಸಿದ್ಧವಾಗಿದೆ. ಶಕ್ತಿಶಾಲಿ ಶಿವ ದೇವಾಲಯ ಇಲ್ಲಿದೆ. ಪ್ರತಿ ತಿಂಗಳ ಅಮವಾಸ್ಯೆ ರಾತ್ರಿಯಲ್ಲಿ ಜನರು ಈ ದೇವಾಲಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡುತ್ತಾರೆ. ಈ ಸ್ಥಳವನ್ನು ಅತ್ಯಂತ ಪವಿತ್ರವೆಂದು ಪರಿಗಣಿಸಲಾಗಿದೆ. ದೇಗುಲದಲ್ಲಿ ಸೇವೆ ಮಾಡುತ್ತಾ ಸ್ನಾನ ಮಾಡಿದರೆ ಪವಾಡ ನಡೆಯುತ್ತೆ ಎಂಬುದು ಜನರ ನಂಬಿಕೆ. ಮದುವೆಯಾಗದಿರುವವರು ಅಥವಾ ಮಕ್ಕಳನ್ನು ಹೊಂದಲು ಪ್ರಯತ್ನಿಸುತ್ತಿರುವವರು ಇಲ್ಲಿನ ಶಿವನಿಗೆ ಮೊರೆಹೋಗುತ್ತಾರೆ. ಈ ಬಾರಿಯೂ ದೇವಾಲಯದ ಅರ್ಚಕರ ವೈದಿಕ ಸ್ತೋತ್ರ ಪಠಣಗಳ ನಡುವೆ ಬೆಟ್ಟದ ದೇಗುಲದಲ್ಲಿ ಮುಂಜಾನೆ ಧಾರ್ಮಿಕ ವಿಧಿವಿಧಾನಗಳು ಜರುಗಿದವು.

ಇದನ್ನೂ ಓದಿ: ನಿಮ್ಮ ನೆಚ್ಚಿನ ಡೋರೆಮಾನ್ ಕಾರ್ಟೂನ್ ಪಾತ್ರಗಳ ಹಿನ್ನೆಲೆ ಧ್ವನಿ ಈ ಸುಂದರಿಯದ್ದು

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ