AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದೆಂಥಾ ಮೌಢ್ಯ! ಸಮವಸ್ತ್ರ ಧರಿಸಿದ ಪೊಲೀಸರೇ ಅಗ್ಗಿಕುಂಡದಲ್ಲಿ ಹೆಜ್ಜೆ ಹಾಕಿದರು, ವಿಡಿಯೋ ವೈರಲ್

Telangana police superstition: ಚೆರುವುಗಟ್ಟು ದೇಗುಲ ಹೈದರಾಬಾದ್‌ನಿಂದ 60 ಕಿಲೋಮೀಟರ್ ದೂರದಲ್ಲಿದೆ. ಶಕ್ತಿಶಾಲಿ ಶಿವ ದೇವಾಲಯ ಇಲ್ಲಿದೆ. ಪ್ರತಿ ತಿಂಗಳ ಅಮವಾಸ್ಯೆ ರಾತ್ರಿಯಲ್ಲಿ ಜನರು ಈ ದೇವಾಲಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡುತ್ತಾರೆ. ತೆಲಂಗಾಣ ಪೊಲೀಸ್ ಸಿಬ್ಬಂದಿ ಯಾವುದೇ ಆತಂಕ, ಉದ್ವೇಗವಿಲ್ಲದೆ, ಸಮರ್ಪಣಾಭಾವದಿಂದ ನಿಗಿನಿಗಿ ಕೆಂಡವಿರುವ ಬೆಂಕಿಯಲ್ಲಿ ಹೆಜ್ಜೆ ಹಾಕುತ್ತಿರುವ ವಿಡಿಯೋ ಎಲ್ಲಡೆ ಹರಿದಾಡುತ್ತಿದೆ.

ಇದೆಂಥಾ ಮೌಢ್ಯ! ಸಮವಸ್ತ್ರ ಧರಿಸಿದ ಪೊಲೀಸರೇ ಅಗ್ಗಿಕುಂಡದಲ್ಲಿ ಹೆಜ್ಜೆ ಹಾಕಿದರು, ವಿಡಿಯೋ ವೈರಲ್
ಸಮವಸ್ತ್ರ ಧರಿಸಿದ ಪೊಲೀಸರೇ ಅಗ್ಗಿಕುಂಡದಲ್ಲಿ ಹೆಜ್ಜೆ ಹಾಕಿದರು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Feb 22, 2024 | 10:17 AM

Share

ತೆಲಂಗಾಣ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ (Telangana police superstition) ಇಂತಹ ದುಸ್ಸಾಹಸಕ್ಕೆ ಯಾಕೆ ಕೈಹಾಕಿದರೋ ಆ ದೇವರೇ ಹೇಳಬೇಕು. ತೆಲಂಗಾಣ ಪೊಲೀಸ್ ಸಿಬ್ಬಂದಿ ಯಾವುದೇ ಆತಂಕ, ಉದ್ವೇಗವಿಲ್ಲದೆ, ಸಮರ್ಪಣಾಭಾವದಿಂದ ನಿಗಿನಿಗಿ ಕೆಂಡಗಳಿರುವ ಬೆಂಕಿಯಲ್ಲಿ (Fire walking ritual) ಹೆಜ್ಜೆ ಹಾಕುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ನಲ್ಲಗೊಂಡ ಜಿಲ್ಲೆಯ ನಾರ್ಕೆಟ್ ಪಲ್ಲಿ ಮಂಡಲದಲ್ಲಿ ವಾರ್ಷಿಕ ಚೆರುವುಗುತ್ತು ಜಾತ್ರೆಯ ಅಂಗವಾಗಿ ಸಮವಸ್ತ್ರ ಧರಿಸಿದ ಪೊಲೀಸರು ಈ ಕಾರ್ಯದಲ್ಲಿ ಭಾಗವಹಿಸಿದ್ದರು. ಗಮನಾರ್ಹವೆಂದರೆ ಈ ಘಟನೆಗೂ ತನ್ನ ಇಲಾಖೆಗೂ ಯಾವುದೇ ಸಂಬಂಧವಿಲ್ಲ ಎಂದು ತೆಲಂಗಾಣ ಪೊಲೀಸ್ ಇಲಾಖೆ ಸ್ಪಷ್ಟಪಡಿಸಿದೆ.

ನಲ್ಲಗೊಂಡ (Nalgonda) ಜಿಲ್ಲೆಯ ಪಾರ್ವತಿ ಜಡೆ ರಾಮಲಿಂಗೇಶ್ವರ ಸ್ವಾಮಿ ಜಾತ್ರೆ ಉತ್ಸವಗಳಲ್ಲಿ ಭಕ್ತರು ಅಗ್ನಿಗುಂಡದ ಮೇಲೆ ನಡೆದುಕೊಂಡು ಹೋಗುವ ಸಂಪ್ರದಾಯವಿದೆ. ಹಲವು ವರ್ಷಗಳಿಂದ ಈ ಕಾರ್ಯಕ್ರಮ ನಡೆಯುತ್ತಿದೆ. ಆದರೆ ಮೌಢ್ಯಾಚರಣೆ ನಿಲ್ಲಿಸಬೇಕಾದ ಪೊಲೀಸರೇ ಸಾಮಾನ್ಯ ಭಕ್ತರ ಜತೆಗೆ ಅಗ್ಗಿಕುಂಡದಲ್ಲಿ ಹೆಜ್ಜೆ ಹಾಕುವ ಮೂಲಕ ಚರ್ಚೆಗೆ ಆಸ್ಪದ ನೀಡಿದ್ದಾರೆ.

ಚೆರುವುಗಟ್ಟು ದೇಗುಲ ಹೈದರಾಬಾದ್‌ನಿಂದ 60 ಕಿಲೋಮೀಟರ್ ದೂರದಲ್ಲಿದೆ. ಈ ದೇವಾಲಯವು ಬಹಳ ಪ್ರಸಿದ್ಧವಾಗಿದೆ. ಶಕ್ತಿಶಾಲಿ ಶಿವ ದೇವಾಲಯ ಇಲ್ಲಿದೆ. ಪ್ರತಿ ತಿಂಗಳ ಅಮವಾಸ್ಯೆ ರಾತ್ರಿಯಲ್ಲಿ ಜನರು ಈ ದೇವಾಲಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡುತ್ತಾರೆ. ಈ ಸ್ಥಳವನ್ನು ಅತ್ಯಂತ ಪವಿತ್ರವೆಂದು ಪರಿಗಣಿಸಲಾಗಿದೆ. ದೇಗುಲದಲ್ಲಿ ಸೇವೆ ಮಾಡುತ್ತಾ ಸ್ನಾನ ಮಾಡಿದರೆ ಪವಾಡ ನಡೆಯುತ್ತೆ ಎಂಬುದು ಜನರ ನಂಬಿಕೆ. ಮದುವೆಯಾಗದಿರುವವರು ಅಥವಾ ಮಕ್ಕಳನ್ನು ಹೊಂದಲು ಪ್ರಯತ್ನಿಸುತ್ತಿರುವವರು ಇಲ್ಲಿನ ಶಿವನಿಗೆ ಮೊರೆಹೋಗುತ್ತಾರೆ. ಈ ಬಾರಿಯೂ ದೇವಾಲಯದ ಅರ್ಚಕರ ವೈದಿಕ ಸ್ತೋತ್ರ ಪಠಣಗಳ ನಡುವೆ ಬೆಟ್ಟದ ದೇಗುಲದಲ್ಲಿ ಮುಂಜಾನೆ ಧಾರ್ಮಿಕ ವಿಧಿವಿಧಾನಗಳು ಜರುಗಿದವು.

ಇದನ್ನೂ ಓದಿ: ನಿಮ್ಮ ನೆಚ್ಚಿನ ಡೋರೆಮಾನ್ ಕಾರ್ಟೂನ್ ಪಾತ್ರಗಳ ಹಿನ್ನೆಲೆ ಧ್ವನಿ ಈ ಸುಂದರಿಯದ್ದು

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ