Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಮಟನ್‌ ಊಟ ಸರಿಯಾಗಿ ಬಡಿಸಿಲ್ಲವೆಂದು ರಣರಂಗವಾಯ್ತು ಮದುವೆ ಮನೆ

ಮದುವೆ ಮನಗೆಳಲ್ಲಿ ಬಿರಿಯಾನಿಯಲ್ಲಿ ಚಿಕನ್‌ ಪೀಸ್‌ ಇರ್ಲಿಲ್ಲ, ಊಟದಲ್ಲಿ ಮೀನಿಲ್ಲ ಎಂಬ ಕ್ಷುಲ್ಲಕ ಕಾರಣಗಳಿಗೆ ವಧು ಮತ್ತು ವರರ ಸಂಬಂಧಿಕರು ಕಾಲು ಕೆರೆದು ಜಗಳವಾಡಿದ ಘಟನೆಗಳು ಈ ಹಿಂದೆ ಕೂಡಾ ನಡೆದಿವೆ. ಇದೀಗ ಅಂತಹದ್ದೇ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಮಟನ್‌ ಊಟದಲ್ಲಿ ಸರಿಯಾಗಿ ಮಟನ್‌ ಪೀಸ್‌ ಬಡಿಸಿಲ್ಲ ಎಂಬ ಕಾರಣಕ್ಕೆ ವರನ ಸ್ನೇಹಿತರು ತಗಾದೆ ತೆಗೆದಿದ್ದು, ಈ ವಿಷಯ ದೊಡ್ಡದಾಗಿ ವರ ಹಾಗೂ ವಧುವಿನ ಸಂಬಂಧಿಕರ ನಡುವೆ ಮಾರಾಮಾರಿ ನಡೆದಿದೆ. ಈ ಸುದ್ದಿ ಇದೀಗ ಭಾರಿ ವೈರಲ್‌ ಆಗುತ್ತಿದೆ.

Video: ಮಟನ್‌ ಊಟ ಸರಿಯಾಗಿ ಬಡಿಸಿಲ್ಲವೆಂದು ರಣರಂಗವಾಯ್ತು ಮದುವೆ ಮನೆ
ವೈರಲ್​​ ವಿಡಿಯೋ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Aug 30, 2024 | 5:19 PM

ಸಂಭ್ರಮದಿಂದ ಕೂಡಿರುವ ಮದುವೆ ಮನೆಗಳಲ್ಲಿ ಕ್ಷುಲ್ಲಕ ಕಾರಣಗಳಿಗೆ ವಧು ಹಾಗೂ ವರರ ಕಡೆಯ ಸಂಬಂಧಿಕರ ನಡುವೆ ನಡೆಯುವ ವಾಗ್ವಾದ, ಜಗಳ, ರಂಪಾಟಗಳ ಸುದ್ದಿಗಳು ಆಗೊಮ್ಮೆ ಈಗೊಮ್ಮೆ ಕೇಳಿ ಬರುತ್ತಲೇ ಇರುತ್ತವೆ. ಹೆಚ್ಚಾಗಿ ಊಟದ ವಿಷಯದಲ್ಲಿಯೇ ಜಗಳಗಳು ನಡೆಯುತ್ತಿರುತ್ತವೆ. ಇದೀಗ ಇಲ್ಲೊಂದು ಅಂತಹದ್ದೇ ಪ್ರಕರಣ ಬೆಳಕಿಗೆ ಬಂದಿದ್ದು, ಮಟನ್‌ ಊಟದಲ್ಲಿ ಸರಿಯಾಗಿ ಮಟನ್‌ ಪೀಸ್‌ ಬಡಿಸಿಲ್ಲ ಎಂದು ವರನ ಸ್ನೇಹಿತರು ತಗಾದೆ ತೆಗೆದಿದ್ದು, ಈ ವಿಷಯ ದೊಡ್ಡದಾಗಿ ವರ ಹಾಗೂ ವಧುವಿನ ಸಂಬಂಧಿಕರ ನಡುವೆ ಮಾರಾಮಾರಿ ನಡೆದಿದೆ.ಈ ಸುದ್ದಿ ಇದೀಗ ಸಖತ್‌ ವೈರಲ್‌ ಆಗುತ್ತಿದೆ.

ಈ ಘಟನೆ ತೆಲಂಗಾಣದ ನಿಜಾಮಾಬಾದ್‌ ಜಿಲ್ಲೆಯ ನವಿಪೇಟ್‌ನಲ್ಲಿ ನಡೆದಿದ್ದು, ಮದುವೆ ಊಟದಲ್ಲಿ ಮಟನ್‌ ಪೀಸ್‌ ಸರಿಯಾಗಿ ಬಡಿಸಿಲ್ಲವೆಂಬ ಕಾರಣಕ್ಕೆ ಮದುವೆ ಮನೆಯೇ ರಣರಂಗವಾಗಿದೆ. ವರದಿಗಳ ಪ್ರಕಾರ ನವಿಪೇಟ್‌ನ ಎಸ್‌ಆರ್‌ ಫಂಕ್ಷನ್‌ ಹಾಲ್‌ನಲ್ಲಿ ಬುಧವಾರ (ಆಗಸ್ಟ್‌ 28) ಮದುವೆ ಔತಣಕೂಟವನ್ನು ಏರ್ಪಡಿಸಲಾಗಿತ್ತು. ಊಟದ ಸಮಯದಲ್ಲಿ ವಧುವಿನ ಕಡೆಯವರು ಮಟನ್‌ ಊಟದಲ್ಲಿ ಸರಿಯಾಗಿ ಮಟನ್‌ ಪೀಸ್‌ ಬಡಿಸಿಲ್ಲವೆಂದು ವರನ ಸ್ನೇಹಿತರು ಕಿರಿಕ್‌ ಮಾಡಿದ್ದಾರೆ. ಈ ವಾಗ್ವಾದ ಅತಿರೇಕಕ್ಕೆ ತಿರುಗಿ ವಧು ಹಾಗೂ ವರನ ಕಡೆಯವರು ಕಲ್ಲು, ದೊಣ್ಣೆಗಳಿಂದ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ತಕ್ಷಣ ಪೊಲೀಸರು ಸ್ಥಳಕ್ಕಾಗಮಿಸಿ ಎಲ್ಲರನ್ನು ಸಮಧಾನ ಪಡಿಸಿ, ಜಗಳ ನಡೆಯಲು ಕಾರಣರಾದ 19 ಜನರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಈ ಕುರಿತ ಪೋಸ್ಟ್‌ ಒಂದನ್ನು TeluguScribe ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವೈರಲ್‌ ವಿಡಿಯೋದಲ್ಲಿ ಮಟನ್‌ ಪೀಸ್‌ ವಿಚಾರದಲ್ಲಿ ವಧು ಹಾಗೂ ವರನ ಕಡೆಯವರು ಪರಸ್ಪರ ಹೊಡೆದಾಡಿಕೊಳ್ಳುತ್ತಿರುವ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಯಮಧರ್ಮ ಮತ್ತು ಸ್ವರ್ಗಲೋಕದ ಬಗ್ಗೆ ಫಾರಿನ್ ಲೇಡೀಸ್‌ಗೆ ಮಸ್ತ್‌ ಆಗಿ ವಿವರಿಸಿದ ಚಿತ್ರಗುಪ್ತ

ಆಗಸ್ಟ್‌ 29 ರಂದು ಹಂಚಿಕೊಳ್ಳಲಾದ ಈ ಪೋಸ್ಟ್‌ 2 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಇದೆಂಥಾ ಅವಸ್ಥೆʼ ಎಂದು ಕೇಳಿದ್ದಾರೆ. ಇನ್ನೊಬ್ಬ ಬಳಕೆದಾರರು ʼಊಟದ ವಿಚಾರಕ್ಕೆ ಇಷ್ಟೆಲ್ಲಾ ಗಲಾಟೆ ಬೇಕಿತ್ತೇʼ ಎಂದು ಕೇಳಿದ್ದಾರೆ.

ವೈರಲ್​​ ಸ್ಟೋರಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

VIDEO: ಹಾರುವ ಹಾರಿಸ್... ಅದ್ಭುತ ಕ್ಯಾಚ್ ಹಿಡಿದ ರೌಫ್
VIDEO: ಹಾರುವ ಹಾರಿಸ್... ಅದ್ಭುತ ಕ್ಯಾಚ್ ಹಿಡಿದ ರೌಫ್
ಬೆಂಗಳೂರಲ್ಲಿ ಕರ್ನಾಟಕ ಬಂದ್​ಗೆ ಮಿಶ್ರ ಪ್ರತಿಕ್ರಿಯೆ
ಬೆಂಗಳೂರಲ್ಲಿ ಕರ್ನಾಟಕ ಬಂದ್​ಗೆ ಮಿಶ್ರ ಪ್ರತಿಕ್ರಿಯೆ
ಪ್ರತಿಭಟನೆಗೆ ಬಂದ್ ಬಿಟ್ಟು ಪರ್ಯಾಯ ದಾರಿ ಹುಡುಕಬೇಕು: ಆಟೋರಿಕ್ಷಾ ಚಾಲಕರು
ಪ್ರತಿಭಟನೆಗೆ ಬಂದ್ ಬಿಟ್ಟು ಪರ್ಯಾಯ ದಾರಿ ಹುಡುಕಬೇಕು: ಆಟೋರಿಕ್ಷಾ ಚಾಲಕರು
ಕಮೆಂಟೇಟರ್ ಜಾನಿ ನಿಜವಾದ ಹೆಸರೇನು? ಈ ಹೆಸರು ಬಂದಿದ್ದು ಹೇಗೆ?
ಕಮೆಂಟೇಟರ್ ಜಾನಿ ನಿಜವಾದ ಹೆಸರೇನು? ಈ ಹೆಸರು ಬಂದಿದ್ದು ಹೇಗೆ?
ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್