AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಮಟನ್‌ ಊಟ ಸರಿಯಾಗಿ ಬಡಿಸಿಲ್ಲವೆಂದು ರಣರಂಗವಾಯ್ತು ಮದುವೆ ಮನೆ

ಮದುವೆ ಮನಗೆಳಲ್ಲಿ ಬಿರಿಯಾನಿಯಲ್ಲಿ ಚಿಕನ್‌ ಪೀಸ್‌ ಇರ್ಲಿಲ್ಲ, ಊಟದಲ್ಲಿ ಮೀನಿಲ್ಲ ಎಂಬ ಕ್ಷುಲ್ಲಕ ಕಾರಣಗಳಿಗೆ ವಧು ಮತ್ತು ವರರ ಸಂಬಂಧಿಕರು ಕಾಲು ಕೆರೆದು ಜಗಳವಾಡಿದ ಘಟನೆಗಳು ಈ ಹಿಂದೆ ಕೂಡಾ ನಡೆದಿವೆ. ಇದೀಗ ಅಂತಹದ್ದೇ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಮಟನ್‌ ಊಟದಲ್ಲಿ ಸರಿಯಾಗಿ ಮಟನ್‌ ಪೀಸ್‌ ಬಡಿಸಿಲ್ಲ ಎಂಬ ಕಾರಣಕ್ಕೆ ವರನ ಸ್ನೇಹಿತರು ತಗಾದೆ ತೆಗೆದಿದ್ದು, ಈ ವಿಷಯ ದೊಡ್ಡದಾಗಿ ವರ ಹಾಗೂ ವಧುವಿನ ಸಂಬಂಧಿಕರ ನಡುವೆ ಮಾರಾಮಾರಿ ನಡೆದಿದೆ. ಈ ಸುದ್ದಿ ಇದೀಗ ಭಾರಿ ವೈರಲ್‌ ಆಗುತ್ತಿದೆ.

Video: ಮಟನ್‌ ಊಟ ಸರಿಯಾಗಿ ಬಡಿಸಿಲ್ಲವೆಂದು ರಣರಂಗವಾಯ್ತು ಮದುವೆ ಮನೆ
ವೈರಲ್​​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Aug 30, 2024 | 5:19 PM

Share

ಸಂಭ್ರಮದಿಂದ ಕೂಡಿರುವ ಮದುವೆ ಮನೆಗಳಲ್ಲಿ ಕ್ಷುಲ್ಲಕ ಕಾರಣಗಳಿಗೆ ವಧು ಹಾಗೂ ವರರ ಕಡೆಯ ಸಂಬಂಧಿಕರ ನಡುವೆ ನಡೆಯುವ ವಾಗ್ವಾದ, ಜಗಳ, ರಂಪಾಟಗಳ ಸುದ್ದಿಗಳು ಆಗೊಮ್ಮೆ ಈಗೊಮ್ಮೆ ಕೇಳಿ ಬರುತ್ತಲೇ ಇರುತ್ತವೆ. ಹೆಚ್ಚಾಗಿ ಊಟದ ವಿಷಯದಲ್ಲಿಯೇ ಜಗಳಗಳು ನಡೆಯುತ್ತಿರುತ್ತವೆ. ಇದೀಗ ಇಲ್ಲೊಂದು ಅಂತಹದ್ದೇ ಪ್ರಕರಣ ಬೆಳಕಿಗೆ ಬಂದಿದ್ದು, ಮಟನ್‌ ಊಟದಲ್ಲಿ ಸರಿಯಾಗಿ ಮಟನ್‌ ಪೀಸ್‌ ಬಡಿಸಿಲ್ಲ ಎಂದು ವರನ ಸ್ನೇಹಿತರು ತಗಾದೆ ತೆಗೆದಿದ್ದು, ಈ ವಿಷಯ ದೊಡ್ಡದಾಗಿ ವರ ಹಾಗೂ ವಧುವಿನ ಸಂಬಂಧಿಕರ ನಡುವೆ ಮಾರಾಮಾರಿ ನಡೆದಿದೆ.ಈ ಸುದ್ದಿ ಇದೀಗ ಸಖತ್‌ ವೈರಲ್‌ ಆಗುತ್ತಿದೆ.

ಈ ಘಟನೆ ತೆಲಂಗಾಣದ ನಿಜಾಮಾಬಾದ್‌ ಜಿಲ್ಲೆಯ ನವಿಪೇಟ್‌ನಲ್ಲಿ ನಡೆದಿದ್ದು, ಮದುವೆ ಊಟದಲ್ಲಿ ಮಟನ್‌ ಪೀಸ್‌ ಸರಿಯಾಗಿ ಬಡಿಸಿಲ್ಲವೆಂಬ ಕಾರಣಕ್ಕೆ ಮದುವೆ ಮನೆಯೇ ರಣರಂಗವಾಗಿದೆ. ವರದಿಗಳ ಪ್ರಕಾರ ನವಿಪೇಟ್‌ನ ಎಸ್‌ಆರ್‌ ಫಂಕ್ಷನ್‌ ಹಾಲ್‌ನಲ್ಲಿ ಬುಧವಾರ (ಆಗಸ್ಟ್‌ 28) ಮದುವೆ ಔತಣಕೂಟವನ್ನು ಏರ್ಪಡಿಸಲಾಗಿತ್ತು. ಊಟದ ಸಮಯದಲ್ಲಿ ವಧುವಿನ ಕಡೆಯವರು ಮಟನ್‌ ಊಟದಲ್ಲಿ ಸರಿಯಾಗಿ ಮಟನ್‌ ಪೀಸ್‌ ಬಡಿಸಿಲ್ಲವೆಂದು ವರನ ಸ್ನೇಹಿತರು ಕಿರಿಕ್‌ ಮಾಡಿದ್ದಾರೆ. ಈ ವಾಗ್ವಾದ ಅತಿರೇಕಕ್ಕೆ ತಿರುಗಿ ವಧು ಹಾಗೂ ವರನ ಕಡೆಯವರು ಕಲ್ಲು, ದೊಣ್ಣೆಗಳಿಂದ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ತಕ್ಷಣ ಪೊಲೀಸರು ಸ್ಥಳಕ್ಕಾಗಮಿಸಿ ಎಲ್ಲರನ್ನು ಸಮಧಾನ ಪಡಿಸಿ, ಜಗಳ ನಡೆಯಲು ಕಾರಣರಾದ 19 ಜನರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಈ ಕುರಿತ ಪೋಸ್ಟ್‌ ಒಂದನ್ನು TeluguScribe ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವೈರಲ್‌ ವಿಡಿಯೋದಲ್ಲಿ ಮಟನ್‌ ಪೀಸ್‌ ವಿಚಾರದಲ್ಲಿ ವಧು ಹಾಗೂ ವರನ ಕಡೆಯವರು ಪರಸ್ಪರ ಹೊಡೆದಾಡಿಕೊಳ್ಳುತ್ತಿರುವ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಯಮಧರ್ಮ ಮತ್ತು ಸ್ವರ್ಗಲೋಕದ ಬಗ್ಗೆ ಫಾರಿನ್ ಲೇಡೀಸ್‌ಗೆ ಮಸ್ತ್‌ ಆಗಿ ವಿವರಿಸಿದ ಚಿತ್ರಗುಪ್ತ

ಆಗಸ್ಟ್‌ 29 ರಂದು ಹಂಚಿಕೊಳ್ಳಲಾದ ಈ ಪೋಸ್ಟ್‌ 2 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಇದೆಂಥಾ ಅವಸ್ಥೆʼ ಎಂದು ಕೇಳಿದ್ದಾರೆ. ಇನ್ನೊಬ್ಬ ಬಳಕೆದಾರರು ʼಊಟದ ವಿಚಾರಕ್ಕೆ ಇಷ್ಟೆಲ್ಲಾ ಗಲಾಟೆ ಬೇಕಿತ್ತೇʼ ಎಂದು ಕೇಳಿದ್ದಾರೆ.

ವೈರಲ್​​ ಸ್ಟೋರಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು