AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಬಿಯರ್‌ ಬಾಟಲ್‌ನಲ್ಲಿ ಪತ್ತೆಯಾಯ್ತು ಸತ್ತ ಹಲ್ಲಿ; ಕಿಕ್ಕೇರಿಸುವ ಮುನ್ನ ಜೋಪಾನ ಮದ್ಯ ಪ್ರಿಯರೇ….

ಇತ್ತೀಚಿಗಷ್ಟೇ ರೈಲಿನಲ್ಲಿ ವಿತರಿಸಿದ ಆಹಾರದಲ್ಲಿ ಚೇಳು ಪತ್ತೆಯಾದ ಸುದ್ದಿಯೊಂದು ಭಾರೀ ವೈರಲ್‌ ಆಗಿತ್ತು. ಇದೀಗ ಇಲ್ಲೊಂದು ಅಂತಹದ್ದೇ ಘಟನೆ ನಡೆದಿದ್ದು, ಗ್ರಾಹಕರೊಬ್ಬರು ಖದೀದಿಸಿದ ಬಿಯರ್‌ ಬಾಟಲ್‌ನಲ್ಲಿ ಸತ್ತ ಇಲಿ ಪತ್ತೆಯಾಗಿದೆ. ತಾನು ಕಂಠಪೂರ್ತಿ ಕುಡಿಯಬೇಕೆಂದು ಖದೀದಿಸಿದ ಬಿಯರ್‌ನಲ್ಲಿ ಹಲ್ಲಿ ಇರುವುದನ್ನು ಕಂಡು ಆ ಗ್ರಾಹಕ ಫುಲ್‌ ಶಾಕ್‌ ಆಗಿದ್ದಾರೆ. ಈ ವಿಡಿಯೋ ಇದೀಗ ವೈರಲ್‌ ಆಗಿದೆ.

ಮಾಲಾಶ್ರೀ ಅಂಚನ್​
| Edited By: |

Updated on: Oct 29, 2024 | 3:25 PM

Share

ಯಾವುದೇ ಬಗೆಯ ಆಹಾರವನ್ನು ತಯಾರಿಸುವಾಗ ಅಲ್ಲಿ ಸ್ವಚ್ಛತೆಯನ್ನು ಮತ್ತು ಸುರಕ್ಷತೆಯನ್ನು ಕಾಪಾಡಿಕೊಳ್ಳಬೇಕಾಗುತ್ತದೆ. ಯಾಕಂದ್ರೆ ಕೆಲವೊಮ್ಮೆ ಕಣ್ತಪ್ಪಿ ತಯಾರಿಸುವಂತಹ ಆಹಾರಗಳಿಗೆ ಹಲ್ಲಿಯೋ ಅಥವಾ ಇನ್ಯಾವುದೋ ವಸ್ತುಗಳು ಬೀಳುವಂತಹ ಸಾಧ್ಯತೆ ಇರುತ್ತದೆ. ಹೀಗೆ ಐಸ್‌ಕ್ರೀಮ್‌ನಲ್ಲಿ ಬೆರಳು ಪತ್ತೆಯಾದ, ರೈಲಿನಲ್ಲಿ ವಿತರಿಸಿದ ಆಹಾರದಲ್ಲಿ ಚೇಳು ಪತ್ತೆಯಾದ ಕೆಲವೊಂದು ಸುದ್ದಿಗಳು ಕೂಡಾ ವೈರಲ್‌ ಆಗಿತ್ತು. ಇದೀಗ ಇಲ್ಲೊಂದು ಅಂತಹದ್ದೇ ಘಟನೆ ನಡೆದಿದ್ದು, ತಾನು ಕಂಠಪೂರ್ತಿ ಕುಡಿಯಬೇಕೆಂದು ಖದೀದಿಸಿದ ಬಿಯರ್‌ನಲ್ಲಿ ಹಲ್ಲಿ ಇರುವುದನ್ನು ಕಂಡು ಆ ಗ್ರಾಹಕ ಫುಲ್‌ ಶಾಕ್‌ ಆಗಿದ್ದಾರೆ. ಈ ವಿಡಿಯೋ ಇದೀಗ ವೈರಲ್‌ ಆಗಿದೆ.

ಈ ಘಟನೆ ತೆಲಂಗಾಣದ ವಿಕಾರಾಬಾದ್‌ ಜಿಲ್ಲೆಯಲ್ಲಿ ನಡೆದಿದ್ದು, ಗ್ರಾಹಕರೊಬ್ಬರು ವೈನ್‌ಶಾಪ್‌ನಿಂದ ಖರೀದಿಸಿದ ಬಡ್‌ವೈಸರ್‌ ಬಿಯರ್‌ ಬಾಟಲ್‌ನಲ್ಲಿ ಸತ್ತ ಹಲ್ಲಿ ಪತ್ತೆಯಾಗಿದೆ. ಈ ಅಚ್ಚರಿಯ ಘಟನೆ ಸುರಕ್ಷತೆ ಮತ್ತು ನೈರ್ಮದ್ಯದ ಬಗ್ಗೆ ಪ್ರಶ್ನೆಯನ್ನು ಹುಟ್ಟು ಹಾಕಿದೆ. ವರದಿಗಳ ಪ್ರಕಾರ ಇಲ್ಲಿನ ಕೆರಳ್ಳಿ ಗ್ರಾಮದ ಲಕ್ಷ್ಮೀಕಾಂತ್‌ ರೆಡ್ಡಿ ಮತ್ತು ಅನಂತಯ್ಯ ಎಂಬ ಇಬ್ಬರು ವ್ಯಕ್ತಿಗಳು ಪಾರ್ಟಿಯ ಸಲುವಾಗಿ ಧಾರೂರಿನ ವೈನ್‌ ಶಾಪ್‌ನಿಂದ ಸುಮಾರು 4,000 ರೂಪಾಯಿ ಮೌಲ್ಯದ ಮದ್ಯವನ್ನು ಖರೀದಿಸಿದ್ದರು. ಹೀಗೆ ಎಣ್ಣೆ ಪಾರ್ಟಿಯಲ್ಲಿ ಬಡ್‌ ವೈಸರ್‌ ಬಿಯರ್‌ ಬಾಟಲ್‌ ಓಪನ್‌ ಮಾಡಿದಾಗ ಅದರಲ್ಲಿ ಸತ್ತ ಹಲ್ಲಿಯೊಂದು ತೇಳುವುದು ಪತ್ತೆಯಾಗಿದೆ. ಈ ದೃಶ್ಯ ಕಂಡು ಶಾಕ್‌ ಆಗಿದ್ದಾರೆ. ಕೂಡಲೇ ಮದ್ಯ ಖರೀದಿಸಿದ ಆ ಇಬ್ಬರು ವ್ಯಕ್ತಿಗಳು ಪೊಲೀಸ್‌ ಠಾಣೆಯಲ್ಲಿ ನಡೆದ ಘಟನೆಯ ಬಗ್ಗೆ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: ಡಿಜಿಟಲ್ ಕಾಂಡೋಮ್ ಭಾರತದಲ್ಲಿ ಲಭ್ಯವಿದೆಯೇ?, ಇದನ್ನು ಹೇಗೆ ಬಳಸುವುದು?

YakkatiSowmith ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಬಡ್‌ವೈಸರ್‌ ಬಿಯರ್‌ ಬಾಟಲಿಯ ಒಳಗೆ ಸತ್ತ ಹಲ್ಲಿ ತೇಳುತ್ತಿರುವ ದೃಶ್ಯವನ್ನು ವ್ಯಕ್ತಿಯೊಬ್ಬರು ತೋರಿಸುತ್ತಿರುವಂತಹ ದೃಶ್ಯವನ್ನು ಕಾಣಬಹುದು. ಈ ಆಘಾತಕಾರಿ ದೃಶ್ಯವನ್ನು ಕಂಡು ನೆಟ್ಟಿಗರು ಫುಲ್‌ ಶಾಕ್‌ ಆಗಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
‘ಅಯೋಗ್ಯ 2’ ಸಿನಿಮಾದ ಹೊಸ ಹಾಡಿನಲ್ಲಿ ಸತೀಶ್ ನೀನಾಸಂ ಮಾಸ್ ಅವತಾರ
‘ಅಯೋಗ್ಯ 2’ ಸಿನಿಮಾದ ಹೊಸ ಹಾಡಿನಲ್ಲಿ ಸತೀಶ್ ನೀನಾಸಂ ಮಾಸ್ ಅವತಾರ
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ