AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ರಸ್ತೆ ಗುಡಿಸುತ್ತಿದ್ದ ವೇಳೆ ಸ್ವಚ್ಛತಾ ಸಿಬ್ಬಂದಿಗೆ ಗುದ್ದಿದ ಕಾರು, ಸಿಸಿ ಟಿವಿಯಲ್ಲಿ ಸೆರೆಯಾಯ್ತು ಭಯಾನಕ ಅಪಘಾತದ ದೃಶ್ಯ

ಸ್ವಚ್ಛತಾ ಸಿಬ್ಬಂದಿಯೊಬ್ಬರು ಡಿವೈಡರ್‌ ಬಳಿ ನಿಂತು ರಸ್ತೆ ಗುಡಿಸುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಆ ಮಹಿಳೆಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಮಹಿಳೆ ಅಲ್ಲೇ ಕುಸಿದು ಬಿದ್ದಿದ್ದು, ಈ ಭಯಾನಕ ದೃಶ್ಯ ಅಲ್ಲಿದ್ದ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಡಿಕ್ಕಿ ಹೊಡೆದರೂ ಕಾರ್‌ ಚಾಲಕ ಮಹಿಳೆಯ ಸಹಾಯಕ್ಕೂ ಬಾರದೆ ಪರಾರಿಯಾಗಿದ್ದು, ಖೇದಕರ ಸಂಗತಿಯಾಗಿದೆ.

Viral: ರಸ್ತೆ ಗುಡಿಸುತ್ತಿದ್ದ ವೇಳೆ ಸ್ವಚ್ಛತಾ ಸಿಬ್ಬಂದಿಗೆ ಗುದ್ದಿದ ಕಾರು, ಸಿಸಿ ಟಿವಿಯಲ್ಲಿ ಸೆರೆಯಾಯ್ತು ಭಯಾನಕ ಅಪಘಾತದ ದೃಶ್ಯ
ವೈರಲ್​​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on:Sep 10, 2024 | 12:08 PM

Share

ಇತ್ತೀಚಿಗೆ ರಸ್ತೆ ಅಪಘಾತ ಪ್ರಕರಣಗಳು ತೀರಾ ಹೆಚ್ಚಾಗುತ್ತಿದೆ. ಇದೀಗ ಇದೇ ರೀತಿಯ ಘಟನೆಯೊಂದು ನಡೆದಿದ್ದು, ಸ್ವಚ್ಛತಾ ಸಿಬ್ಬಂದಿಯೊಬ್ಬರು ಡಿವೈಡರ್‌ ಬಳಿ ನಿಂತು ರಸ್ತೆ ಗುಡಿಸುತ್ತಿದ್ದ ವೇಳೆ ಸೈಡ್‌ ಅಲ್ಲಿ ಬಂದಂತಹ ಕಾರೊಂದು ಆ ಮಹಿಳೆಗೆ ಡಿಕ್ಕಿ ಹೊಡೆದಿದೆ. ಕಾರು ಗುದ್ದಿದ ಪರಿಣಾಮ ಆ ಮಹಿಳೆ ಅಲ್ಲೇ ಕುಸಿದು ಬಿದ್ದಿದ್ದಾರೆ. ಈ ಭಯಾನಕ ದೃಶ್ಯ ಅಲ್ಲಿದ್ದ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಡಿಕ್ಕಿ ಹೊಡೆದರೂ ಕಾರ್‌ ಚಾಲಕ ಮಹಿಳೆಯ ಸಹಾಯಕ್ಕೂ ಬಾರದೆ ಪರಾರಿಯಾಗಿದ್ದು, ನಿಜಕ್ಕೂ ಖೇದಕರ ಸಂಗತಿಯಾಗಿದೆ.

ಈ ಘಟನೆ ತೆಲಂಗಾಣದ ಹನುಮಕೊಂಡದಲ್ಲಿ ನಡೆದಿದ್ದು, ಇಲ್ಲಿನ ಅಂಬೇಡ್ಕರ್‌ ವೃತ್ತದಿಂದ ಹಳೆ ಬಸ್‌ ಡಿಪೋಗೆ ಹೋಗುವ ರಸ್ತೆ ಮಾಗರ್ದಲ್ಲಿ ಡಿವೈಡರ್‌ ಬಳಿ ನಿಂತು ಕಸ ಗುಡಿಸುತ್ತಿದ್ದ ವೇಳೆ ವೇಗವಾಗಿ ಬಂದಂತಹ ಕಾರೊಂದು ಸ್ವಚ್ಛತಾ ಸಿಬ್ಬಂದಿಗೆ ಡಿಕ್ಕಿ ಹೊಡೆದಿದೆ. ಸೆಪ್ಟೆಂಬರ್‌ 7 ರಂದು ಸಂಜೆ 5.30 ರ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಮಹಿಳೆಗೆ ಗಂಭೀರವಾಗಿ ಗಾಯಗಳಾಗಿವೆ. ಮಹಿಳೆಯನ್ನು ರಾಮಂಚಿ ಸಮ್ಮಕ್ಕ ಎಂದು ಗುರುತಿಸಲಾಗಿದೆ. ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾದ ಈ ಭೀಕರ ಅಪಘಾತದ ದೃಶ್ಯ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದ್ದು, ಆಕ್ಸಿಡೆಂಟ್‌ ಮಾಡಿದ ಕಾರ್‌ ಚಾಲಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ನೆಟ್ಟಿಗರು ಆಗ್ರಹಿಸಿದ್ದಾರೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಈ ಕುರಿತ ವಿಡಿಯೋವನ್ನು TeluguScribe ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಮಹಿಳೆಯೊಬ್ಬರು ಡಿವೈಡರ್‌ ಬಳಿ ನಿಂತು ಕಸ ಗುಡಿಸುತ್ತಿರುವ ದೃಶ್ಯವನ್ನು ಕಾಣಬಹುದು. ಈ ವೇಳೆ ವೇಗವಾಗಿ ಬಂದಂತಹ ಕಾರೊಂದು ಸೈಡ್‌ ಬಂದು ಮಹಿಳೆಗೆ ಡಿಕ್ಕಿ ಹೊಡೆದು ಪರಾರಿಯಾಗಿದೆ. ನಂತರ ಸ್ಥಳೀಯರು ಇತರೆ ವಾಹನ ಸವಾರರು ಮಹಿಳೆಯ ರಕ್ಷಣೆಗೆ ಧಾವಿಸಿದ್ದಾರೆ.

ಇದನ್ನೂ ಓದಿ: ಹದಿಹರೆಯದ ವಿದ್ಯಾರ್ಥಿಗಳ ಮುಂದೆ ಮಾದಕ ಮೈಮಾಟ ತೋರಿಸಿಕೊಂಡು ನೃತ್ಯ ಮಾಡಿದ ಶಿಕ್ಷಕಿ

ಸೆಪ್ಟೆಂಬರ್‌ 9 ರಂದು ಹಂಚಿಕೊಳ್ಳಲಾದ ಈ ವಿಡಿಯೋ 54 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಈ ಆಕ್ಸಿಡೆಂಟ್‌ ಉದ್ದೇಶಪೂರ್ವಕವಾಗಿ ಮಾಡಿದಂತೆ ತೋರುತ್ತದೆʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಮತ್ತೊಬ್ಬ ಬಳಕೆದಾರರು ಕಾರ್‌ ಚಾಲಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:05 pm, Tue, 10 September 24

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?