Viral: ಮಟನ್‌ ಕರಿ ಮಾಡಲು ನಿರಾಕರಿಸಿದ ಪತ್ನಿಯನ್ನು ಹೊಡೆದು ಕೊಂದ ಪತಿರಾಯ

ಉಪ್ಪಿಲ್ಲ, ಹುಳಿಯಿಲ್ಲ, ಖಾರವಿಲ್ಲ ಎಂದು ಅಡುಗೆ ವಿಚಾರವಾಗಿ ಗಂಡಂದಿರು ತಗಾದೆ ತೆಗೆಯುವುದು ಹೊಸದೇನಲ್ಲ ಬಿಡಿ. ಇನ್ನೂ ಈ ವಿಚಾರವಾಗಿಯೇ ಗಲಾಟೆಗಳು ಕೂಡಾ ನಡೆದದ್ದುಂಟು. ಅದೇ ರೀತಿ ಇಲ್ಲೊಂದು ಮಟನ್‌ ಕರಿ ಮಾಡುವ ವಿಚಾರಕ್ಕೆ ಪತಿ-ಪತ್ನಿಯ ನಡುವೆ ಗಲಾಟೆ ನಡೆದಿದ್ದು, ಈ ಗಲಾಟೆ ಹಿಂಸಾಚಾರಕ್ಕೆ ತಿರುಗಿ ಮಟನ್‌ ಕರಿ ಮಾಡಲ್ಲ ಎಂದು ಹೇಳಿದ ಪತ್ನಿಯನ್ನು ಪತಿರಾಯ ಹೊಡೆದು ಕೊಂದಿದ್ದಾನೆ.

Viral: ಮಟನ್‌ ಕರಿ ಮಾಡಲು ನಿರಾಕರಿಸಿದ ಪತ್ನಿಯನ್ನು ಹೊಡೆದು ಕೊಂದ ಪತಿರಾಯ
ಸಾಂದರ್ಭಿಕ ಚಿತ್ರ
Edited By:

Updated on: Mar 13, 2025 | 3:19 PM

ತೆಲಂಗಾಣ, ಮಾ. 13: ಗಂಡ ಹೆಂಡತಿ (husband-wife) ಜಗಳ ಉಂಡು ಮಲಗೋ ತನಕ ಎಂಬ ಮಾತಿದೆ. ಹೀಗೆ ಗಂಡ ಹೆಂಡತಿ ನಡುವೆ ಸಣ್ಣಪುಟ್ಟ ಜಗಳಗಳು (hassle) ನಡೆಯುವುದು ಸಾಮಾನ್ಯ. ಆದ್ರೆ ಇತ್ತೀಚಿನ ದಿನಗಳಲ್ಲಿ ಪತಿ ಪತ್ನಿಯರ ಜಗಳ ಕೌಟುಂಬಿಕ ಹಿಂಸಾಚಾರಕ್ಕೆ ತಿರುಗುವ ಹಾಗೂ ವಿಚ್ಛೇದನದವರೆಗೂ ಹೋಗುವ ಸಂಗತಿಗಳೇ ಹೆಚ್ಚಾಗಿ ಕೇಳಿ ಬರುತ್ತಿವೆ. ಇಲ್ಲೊಂದು ಅಂತಹದ್ದೇ ಆಘಾತಕಾರಿ ಘಟನೆ ನಡೆದಿದ್ದು, ಅಡುಗೆ ವಿಚಾರಕ್ಕೆ ಗಂಡ ಹೆಂಡತಿಯ ನಡುವೆ ನಡೆದ ಕ್ಷುಲ್ಲಕ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಮಟನ್‌ ಕರಿ (mutton curry) ಮಾಡುವ ವಿಚಾರವಾಗಿ ಇವರಿಬ್ಬರ ನಡುವೆ ಗಲಾಟೆ ನಡೆದಿದ್ದು, ಈ ಗಲಾಟೆ ಹಿಂಸಾಚಾರಕ್ಕೆ ತಿರುಗಿ ಕೊನೆಗೆ ಮಟನ್‌ ಕರಿ ಮಾಡಲ್ಲ ಎಂದು ಹೇಳಿದ ಪತ್ನಿಯನ್ನು ಪತಿರಾಯ ಹೊಡೆದು ಕೊಂದಿದ್ದಾನೆ.

ಈ ಆಘಾತಕಾರಿ ಘಟನೆ ತೆಲಂಗಾಣದ ಮಹಬೂಬಾಬಾದ್‌ ಎಂಬಲ್ಲಿ ನಡೆದಿದ್ದು, ಮಟನ್‌ ಕರಿ ಮಾಡಲು ನಿರಾಕರಿದ ಪತ್ನಿಯನ್ನು ಪತಿರಾಯ ಹೊಡೆದು ಕೊಂದಿದ್ದಾನೆ. ಮೃತ ಮಹಿಳೆಯನ್ನು 35 ವರ್ಷದ ಮಾಲೋತ್‌ ಕಲಾವತಿ ಎಂದು ಗುರುತಿಸಲಾಗಿದೆ. ಅಡುಗೆ ವಿಚಾರವಾಗಿ ಕಲಾವತಿ ಹಾಗೂ ಆಕೆಯ ಗಂಡನ ನಡುವೆ ಜಗಳ ನಡೆದಿದ್ದು, ನಾನು ಮಟನ್‌ ಕರಿ ಮಾಡಲ್ಲ ಎಂದು ಕಲಾವತಿ ಹೇಳಿದ್ದಾಳೆ. ಇದರಿಂದ ಕೋಪಗೊಂಡ ಪತಿರಾಯ ತಡರಾತ್ರಿ ಯಾರೂ ಇಲ್ಲದ ವೇಳೆ ಆಕೆಯ ಮೇಲೆ ಹಲ್ಲೆ ನಡೆಸಿ ಕೋಲಿನಿಂದ ಹೊಡೆದು ಕೊಂದಿದ್ದಾನೆ. ಹೀಗೆ ಇವರಿಬ್ಬರ ನಡುವೆ ನಡೆದ ಈ ವಾಗ್ವಾದ ಹಿಂಸಾಚಾರಕ್ಕೆ ತಿರುಗಿ ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಈ ಜಗಳ ಕಲಾವತಿಯ ದುರಂತ ಸಾವಿಗೆ ಕಾರಣವಾಗಿದೆ.

ಮೃತ ಮಹಿಳೆಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಮೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಹಬೂಬಾಬಾದ್‌ ಜಿಲ್ಲಾಸ್ಪತ್ರೆಯ ಕೊಂಡೊಯ್ಯಲಾಗಿದ್ದು, ಪತ್ನಿಯನ್ನು ಕೊಂದು ತಲೆ ಮರೆಸಿಕೊಂಡಿರುವ ಪತಿರಾಯನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಇದನ್ನೂ ಓದಿ
ಕೃಷ್ಣ ಸುಂದರಿʼಯ ಮದುವೆಯ ಫೋಟೋ ಝಲಕ್‌ ನೋಡಿ
ಐಸ್‌ಕ್ರೀಂ ತಿಂದ ತಾಯಿಯ ವಿರುದ್ಧ ಪೊಲೀಸರಿಗೆ ದೂರು ನೀಡಿದ ಮಗ
ಪ್ರೀತಿಯಲ್ಲಿ ಮೋಸ, ಅಶಾಂತಿ ಎಲ್ಲಾ ಸಮಸ್ಯೆಗಳಿಗೂ ಚಹಾ ಒಂದೇ ಪರಿಹಾರ
ಸ್ಲಿಮ್‌ ಆಗಿ ಕಾಣಲು ತೂಕ ಇಳಿಸಿಕೊಳ್ಳುವ ಭರದಲ್ಲಿ ಯುವತಿಯ ಪ್ರಾಣವೇ ಹೋಯ್ತು

ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
Follow Us