AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಕಂಬಕ್ಕೆ ಕಟ್ಟಿ ಹಿಗ್ಗಾಮುಗ್ಗ ಥಳಿಸುವಾಗ ಹಸಿವೆಂದು ಕೂಗಿದ ಕಳ್ಳನಿಗೆ ತನ್ನ ಕೈಯಾರೆ ಊಟ ತಿನ್ನಿಸಿದ ಯುವಕ

ಮಾನವೀಯತೆ ಇಂದಿಗೂ ಜೀವಂತವಾಗಿದೆ ಎಂಬುದಕ್ಕೆ ಉತ್ತಮ ನಿದರ್ಶನದಂತಿರುವ ವಿಡಿಯೋವೊಂದು ಇದೀಗ ವೈರಲ್‌ ಆಗುತ್ತಿದ್ದು, ಕಳ್ಳತನ ಮಾಡಲು ಬಂದು ಸಿಕ್ಕಿಬಿದ್ದ ಕಳ್ಳನನ್ನು ಕಂಬಕ್ಕೆ ಕಟ್ಟಿ ಹಿಗ್ಗಾಮುಗ್ಗಾ ಥಳಿಸುವ ಸಂದರ್ಭದಲ್ಲಿ ಆತ ನನಗೆ ಹಸಿವಾಗ್ತಿದೆ ಏನಾದ್ರೂ ಕೊಡಿ ಎಂದು ಕೇಳಿಕೊಂಡಾಗ ಊರಿನ ಯುವಕರು ಊಟ ಕೊಟ್ಟು ಆತನ ಹಸಿವು ನೀಗಿಸಿದ್ದಾರೆ.

Viral: ಕಂಬಕ್ಕೆ ಕಟ್ಟಿ ಹಿಗ್ಗಾಮುಗ್ಗ ಥಳಿಸುವಾಗ ಹಸಿವೆಂದು ಕೂಗಿದ ಕಳ್ಳನಿಗೆ ತನ್ನ ಕೈಯಾರೆ ಊಟ ತಿನ್ನಿಸಿದ ಯುವಕ
ವೈರಲ್​​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Sep 17, 2024 | 6:04 PM

Share

ಕಳ್ಳತನ ಮಾಡಲು ಹೋಗಿ ಸಿಕ್ಕಿ ಬಿದ್ರೆ, ಆ ಕಳ್ಳರನ್ನು ಕಂಬಕ್ಕೆ ಕಟ್ಟಿಯೋ ಅಥವಾ ಕೈ ಕಾಲನ್ನು ಹಗ್ಗದಲ್ಲಿ ಕಟ್ಟಿಯೋ ಅವರಿಗೆ ಸರಿಯಾಗಿ ಧರಮದೇಟು ನೀಡುತ್ತಾರೆ. ಈ ನಡುವೆ ಏನಾದ್ರೂ ಸ್ವಲ್ಪ ಕುಡಿಯಲು ನೀರು ಕೊಡಿ ಎಂದು ಕೇಳಿದ್ರೆ, ಒಂದೇಟು ಜಾಸ್ತಿಯೇ ಕೊಟ್ಟು ನಿನ್ಗೆ ನೀರು ಬೇಕಾ ಮಗ್ನೆ ಎಂದು ಪೊಲೀಸರಿಗೆ ಒಪ್ಪಿಸುತ್ತಾರೆ. ಆದ್ರೆ ಇಲ್ಲೊಂದು ವಿಚಿತ್ರ ಘಟನೆ ನಡೆದಿದ್ದು, ಕಳ್ಳತನ ಮಾಡಲು ಬಂದು ಸಿಕ್ಕಿಬಿದ್ದ ಕಳ್ಳನನ್ನು ಕಂಬಕ್ಕೆ ಕಟ್ಟಿ ಹಿಗ್ಗಾಮುಗ್ಗಾ ಥಳಿಸುವ ಸಂದರ್ಭದಲ್ಲಿ ಆತ ನನಗೆ ಹಸಿವಾಗ್ತಿದೆ ಏನಾದ್ರೂ ಕೊಡಿ ಎಂದು ಕೇಳಿಕೊಂಡಾಗ ಊರಿನ ಯುವಕರು ಊಟ ಮಾಡಿಸಿ ಆತನ ಹಸಿವು ನೀಗಿಸಿ ಕೊನೆಗೆ ಆ ಕಳ್ಳನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ವಿಡಿಯೋ ಇದೀಗ ಭಾರೀ ವೈರಲ್‌ ಆಗುತ್ತಿದೆ.

ಈ ಘಟನೆ ತೆಲಂಗಾಲಣದ ನಲ್ಗೊಂಡ ಜಿಲ್ಲೆಯಲ್ಲಿ ನಡೆದಿದ್ದು, ರೆಡ್‌ ಹ್ಯಾಂಡ್‌ ಸಿಕ್ಕಿ ಬಿದ್ದ ಕಳ್ಳನಿಗೆ ಊಟ ಮಾಡಿಸಿ ನಂತರ ಆತನನ್ನು ಗ್ರಾಮಸ್ಥರು ಪೊಲೀಸರಿಗೆ ಒಪ್ಪಿಸಿದ್ದಾರೆ. ಇಲ್ಲಿನ ನಾರ್ಕೆಟ್‌ಪಲ್ಲಿ ಮಂಡಲದ ಎಲ್ಲರೆಡ್ಡಿಗುಡೆಂ ಗ್ರಾಮಕ್ಕೆ ಕುಖ್ಯಾತ ಕಳ್ಳ ಪೋಗಲ್‌ ಗಣೇಶ್‌ ಕಳ್ಳತನಕ್ಕೆ ಬಂದಿದ್ದು, ಆ ದುರಾದೃಷ್ಟಕ್ಕೆ ಆ ಗ್ರಾಮದ ಯುವಕರ ಕೈಯಲ್ಲಿ ಆತ ಸಿಕ್ಕಿಬಿದ್ದಿದ್ದಾನೆ. ಹೀಗೆ ಸಿಕ್ಕಿಬಿದ್ದ ಕಳ್ಳನನ್ನು ಇನ್ಮುಂದೆ ಕಳ್ಳತನ ಮಾಡ್ತೀಯಾ ಎಂದು ಹೇಳಿ ಕಂಬಕ್ಕೆ ಕಟ್ಟಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಇವರ ಏಟನ್ನು ತಾಳಲಾರದೆ ಕಳ್ಳ ಹಸಿವಾಗ್ತಿದೆ ಊಟ ಕೊಡಿ ಎಂದು ಕೇಳಿಕೊಂಡಿದ್ದು, ಆ ಸಂದರ್ಭದಲ್ಲಿ ಕೋಪವನ್ನೆಲ್ಲಾ ಪಕ್ಕಕ್ಕಿಟ್ಟು ಮಾನವೀಯತೆಯ ದೃಷ್ಟಿಯಿಂದ ಗ್ರಾಮದ ಯುವಕರು ಕಳ್ಳನಿಗೆ ಊಟ ಮಾಡಿಸಿದ್ದಾರೆ. ಹಸಿವನ್ನು ನೀಗಿಸಿದ ಬಳಿಕ ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ಇದನ್ನೂ ಓದಿ: ಅಬ್ಬಾ ಎಂಥಾ ಭಂಡ ಧೈರ್ಯ ನೋಡಿ, ಹೋಗಿ ಹೋಗಿ ಕರಡಿ ಗುಹೆಯೊಳಗೆ ಕುಳಿತು ಬಿಡೋದಾ ಈ ಯುವಕ

ವೈರಲ್​​ ವಿಡಿಯೋ ಇಲ್ಲಿದೆ ನೋಡಿ

ಈ ಕುರಿತ ಪೋಸ್ಟ್‌ ಒಂದನ್ನು ಸಾಯಿ ಶೇಖರ್‌ ಅಂಗಾರ (sayesekhar) ಎಂಬವರು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಕಂಬಕ್ಕೆ ಕಟ್ಟಿ ಹಾಕಿದ್ದಂತಹ ಕಳ್ಳನಿಗೆ ಯುವಕನೊಬ್ಬ ತನ್ನ ಕೈಯಾರೆ ಊಟ ತಿನ್ನಿಸುತ್ತಿರುವ ದೃಶ್ಯವನ್ನು ಕಾಣಬಹುದು. ಹಸಿವು ಎಂದಾಗ ಕಳ್ಳನಿಗೂ ಊಟ ಕೊಟ್ಟು ಮಾನವೀಯತೆ ಮೆರೆದ ಈ ಯುವಕರ ಕಾರ್ಯಕ್ಕೆ ನೆಟ್ಟಿಗರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ವೈರಲ್​​​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು