AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಕಂಬಕ್ಕೆ ಕಟ್ಟಿ ಹಿಗ್ಗಾಮುಗ್ಗ ಥಳಿಸುವಾಗ ಹಸಿವೆಂದು ಕೂಗಿದ ಕಳ್ಳನಿಗೆ ತನ್ನ ಕೈಯಾರೆ ಊಟ ತಿನ್ನಿಸಿದ ಯುವಕ

ಮಾನವೀಯತೆ ಇಂದಿಗೂ ಜೀವಂತವಾಗಿದೆ ಎಂಬುದಕ್ಕೆ ಉತ್ತಮ ನಿದರ್ಶನದಂತಿರುವ ವಿಡಿಯೋವೊಂದು ಇದೀಗ ವೈರಲ್‌ ಆಗುತ್ತಿದ್ದು, ಕಳ್ಳತನ ಮಾಡಲು ಬಂದು ಸಿಕ್ಕಿಬಿದ್ದ ಕಳ್ಳನನ್ನು ಕಂಬಕ್ಕೆ ಕಟ್ಟಿ ಹಿಗ್ಗಾಮುಗ್ಗಾ ಥಳಿಸುವ ಸಂದರ್ಭದಲ್ಲಿ ಆತ ನನಗೆ ಹಸಿವಾಗ್ತಿದೆ ಏನಾದ್ರೂ ಕೊಡಿ ಎಂದು ಕೇಳಿಕೊಂಡಾಗ ಊರಿನ ಯುವಕರು ಊಟ ಕೊಟ್ಟು ಆತನ ಹಸಿವು ನೀಗಿಸಿದ್ದಾರೆ.

Viral: ಕಂಬಕ್ಕೆ ಕಟ್ಟಿ ಹಿಗ್ಗಾಮುಗ್ಗ ಥಳಿಸುವಾಗ ಹಸಿವೆಂದು ಕೂಗಿದ ಕಳ್ಳನಿಗೆ ತನ್ನ ಕೈಯಾರೆ ಊಟ ತಿನ್ನಿಸಿದ ಯುವಕ
ವೈರಲ್​​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Sep 17, 2024 | 6:04 PM

Share

ಕಳ್ಳತನ ಮಾಡಲು ಹೋಗಿ ಸಿಕ್ಕಿ ಬಿದ್ರೆ, ಆ ಕಳ್ಳರನ್ನು ಕಂಬಕ್ಕೆ ಕಟ್ಟಿಯೋ ಅಥವಾ ಕೈ ಕಾಲನ್ನು ಹಗ್ಗದಲ್ಲಿ ಕಟ್ಟಿಯೋ ಅವರಿಗೆ ಸರಿಯಾಗಿ ಧರಮದೇಟು ನೀಡುತ್ತಾರೆ. ಈ ನಡುವೆ ಏನಾದ್ರೂ ಸ್ವಲ್ಪ ಕುಡಿಯಲು ನೀರು ಕೊಡಿ ಎಂದು ಕೇಳಿದ್ರೆ, ಒಂದೇಟು ಜಾಸ್ತಿಯೇ ಕೊಟ್ಟು ನಿನ್ಗೆ ನೀರು ಬೇಕಾ ಮಗ್ನೆ ಎಂದು ಪೊಲೀಸರಿಗೆ ಒಪ್ಪಿಸುತ್ತಾರೆ. ಆದ್ರೆ ಇಲ್ಲೊಂದು ವಿಚಿತ್ರ ಘಟನೆ ನಡೆದಿದ್ದು, ಕಳ್ಳತನ ಮಾಡಲು ಬಂದು ಸಿಕ್ಕಿಬಿದ್ದ ಕಳ್ಳನನ್ನು ಕಂಬಕ್ಕೆ ಕಟ್ಟಿ ಹಿಗ್ಗಾಮುಗ್ಗಾ ಥಳಿಸುವ ಸಂದರ್ಭದಲ್ಲಿ ಆತ ನನಗೆ ಹಸಿವಾಗ್ತಿದೆ ಏನಾದ್ರೂ ಕೊಡಿ ಎಂದು ಕೇಳಿಕೊಂಡಾಗ ಊರಿನ ಯುವಕರು ಊಟ ಮಾಡಿಸಿ ಆತನ ಹಸಿವು ನೀಗಿಸಿ ಕೊನೆಗೆ ಆ ಕಳ್ಳನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ವಿಡಿಯೋ ಇದೀಗ ಭಾರೀ ವೈರಲ್‌ ಆಗುತ್ತಿದೆ.

ಈ ಘಟನೆ ತೆಲಂಗಾಲಣದ ನಲ್ಗೊಂಡ ಜಿಲ್ಲೆಯಲ್ಲಿ ನಡೆದಿದ್ದು, ರೆಡ್‌ ಹ್ಯಾಂಡ್‌ ಸಿಕ್ಕಿ ಬಿದ್ದ ಕಳ್ಳನಿಗೆ ಊಟ ಮಾಡಿಸಿ ನಂತರ ಆತನನ್ನು ಗ್ರಾಮಸ್ಥರು ಪೊಲೀಸರಿಗೆ ಒಪ್ಪಿಸಿದ್ದಾರೆ. ಇಲ್ಲಿನ ನಾರ್ಕೆಟ್‌ಪಲ್ಲಿ ಮಂಡಲದ ಎಲ್ಲರೆಡ್ಡಿಗುಡೆಂ ಗ್ರಾಮಕ್ಕೆ ಕುಖ್ಯಾತ ಕಳ್ಳ ಪೋಗಲ್‌ ಗಣೇಶ್‌ ಕಳ್ಳತನಕ್ಕೆ ಬಂದಿದ್ದು, ಆ ದುರಾದೃಷ್ಟಕ್ಕೆ ಆ ಗ್ರಾಮದ ಯುವಕರ ಕೈಯಲ್ಲಿ ಆತ ಸಿಕ್ಕಿಬಿದ್ದಿದ್ದಾನೆ. ಹೀಗೆ ಸಿಕ್ಕಿಬಿದ್ದ ಕಳ್ಳನನ್ನು ಇನ್ಮುಂದೆ ಕಳ್ಳತನ ಮಾಡ್ತೀಯಾ ಎಂದು ಹೇಳಿ ಕಂಬಕ್ಕೆ ಕಟ್ಟಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಇವರ ಏಟನ್ನು ತಾಳಲಾರದೆ ಕಳ್ಳ ಹಸಿವಾಗ್ತಿದೆ ಊಟ ಕೊಡಿ ಎಂದು ಕೇಳಿಕೊಂಡಿದ್ದು, ಆ ಸಂದರ್ಭದಲ್ಲಿ ಕೋಪವನ್ನೆಲ್ಲಾ ಪಕ್ಕಕ್ಕಿಟ್ಟು ಮಾನವೀಯತೆಯ ದೃಷ್ಟಿಯಿಂದ ಗ್ರಾಮದ ಯುವಕರು ಕಳ್ಳನಿಗೆ ಊಟ ಮಾಡಿಸಿದ್ದಾರೆ. ಹಸಿವನ್ನು ನೀಗಿಸಿದ ಬಳಿಕ ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ಇದನ್ನೂ ಓದಿ: ಅಬ್ಬಾ ಎಂಥಾ ಭಂಡ ಧೈರ್ಯ ನೋಡಿ, ಹೋಗಿ ಹೋಗಿ ಕರಡಿ ಗುಹೆಯೊಳಗೆ ಕುಳಿತು ಬಿಡೋದಾ ಈ ಯುವಕ

ವೈರಲ್​​ ವಿಡಿಯೋ ಇಲ್ಲಿದೆ ನೋಡಿ

ಈ ಕುರಿತ ಪೋಸ್ಟ್‌ ಒಂದನ್ನು ಸಾಯಿ ಶೇಖರ್‌ ಅಂಗಾರ (sayesekhar) ಎಂಬವರು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಕಂಬಕ್ಕೆ ಕಟ್ಟಿ ಹಾಕಿದ್ದಂತಹ ಕಳ್ಳನಿಗೆ ಯುವಕನೊಬ್ಬ ತನ್ನ ಕೈಯಾರೆ ಊಟ ತಿನ್ನಿಸುತ್ತಿರುವ ದೃಶ್ಯವನ್ನು ಕಾಣಬಹುದು. ಹಸಿವು ಎಂದಾಗ ಕಳ್ಳನಿಗೂ ಊಟ ಕೊಟ್ಟು ಮಾನವೀಯತೆ ಮೆರೆದ ಈ ಯುವಕರ ಕಾರ್ಯಕ್ಕೆ ನೆಟ್ಟಿಗರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ವೈರಲ್​​​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ