AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕಳ್ಳತನಕ್ಕೆ ಅಂತ ಹೋದ, ಹಣ ಸಿಗದೆ ನಿರಾಶೆಗೊಂಡು ಟೇಬಲ್‌ 20 ರೂ. ಇಟ್ಟು ಬರಿಗೈಲಿ ವಾಪಸ್‌ ಬಂದ…

ರಾತ್ರಿ ಸಮಯದಲ್ಲಿ ಎಲ್ಲರೂ ಮಲಗಿರುವಾಗ ಯಾರಿಗೂ ಅನುಮಾನ ಬರದಂತೆ ಕಳ್ಳತನ ಮಾಡಿ ಖದೀಮರು ಎಸ್ಕೇಪ್‌ ಆಗ್ತಾರೆ. ಏನಾದ್ರೂ ಹಣ ಸಿಕ್ಕಿಲ್ಲ ಅಂದ್ರೆ ಮನೆಯಲ್ಲಿದ್ದ ಯಾವುದಾದ್ರೂ ವಸ್ತುವನ್ನು ಕದ್ದು ಹೋಗ್ತಾರೆ. ಆದ್ರೆ ಇಲ್ಲೊಬ್ಬ ಹೊಟೇಲ್‌ಗೆ ನುಗ್ಗಿದ ಕಳ್ಳ, ಇಲ್ಲಿಗೆ ಯಾಕಾದ್ರೂ ಕಳ್ಳತನ ಮಾಡಲು ಬಂದ್ನೋ ದೇವ್ರೆ.. ಇಲ್ಲಿ ದುಡ್ಡೂ ಇಲ್ಲ ಏನು ಇಲ್ಲ ಎಂದು ನಿರಾಶೆಗೊಂಡು ತನ್ನ ಜೇಬಿನಲ್ಲಿದ್ದ 20 ರೂ. ಹಣವನ್ನು ಟೇಬಲ್‌ ಮೇಲೆ ಇಟ್ಟು ಬರಿಗೈಲಿ ವಾಪಸ್‌ ಹೋಗಿದ್ದಾನೆ. ಈ ವಿಡಿಯೋ ಇದೀಗ ಸಖತ್‌ ವೈರಲ್‌ ಆಗುತ್ತಿದೆ.

Viral Video: ಕಳ್ಳತನಕ್ಕೆ ಅಂತ ಹೋದ, ಹಣ ಸಿಗದೆ ನಿರಾಶೆಗೊಂಡು ಟೇಬಲ್‌ 20 ರೂ. ಇಟ್ಟು ಬರಿಗೈಲಿ ವಾಪಸ್‌ ಬಂದ...
ಮಾಲಾಶ್ರೀ ಅಂಚನ್​
| Edited By: |

Updated on: Jul 28, 2024 | 3:25 PM

Share

ಕಳ್ಳ ಮನೆಗೆ ನುಗ್ಗಿದ್ದರೆ ಒಂದೋ ಮನೆಯಲ್ಲಿ ಚಿನ್ನಾಭರಣ, ಹಣವನ್ನು ದೋಚುತ್ತಾನೆ. ಇಲ್ಲವೇ ಮನೆಯಲ್ಲಿರುವ ಬೆಲೆಬಾಳುವ ವಸ್ತುಗಳನ್ನು ಎಗರಿಸುತ್ತಾನೆ. ಹೀಗೆ ರಾತ್ರಿ ಹೊತ್ತು ಎಲ್ಲರೂ ಮಲಗಿರುವ ಸಮಯದಲ್ಲಿ ಕಳ್ಳರು ಮನೆಗೆ ಕನ್ನ ಹಾಕುವ ಸುದ್ದಿಗಳು ಕೇಳಿ ಬರುತ್ತಲೇ ಇವೆ. ಆದ್ರೆ ಇಲ್ಲೊಂದು ವಿಚಿತ್ರ ಘಟನೆ ನಡೆದಿದ್ದು, ಹೊಟೇಲ್‌ ಬೀಗ ಒಡೆದು ಕಳ್ಳತನಕ್ಕೆ ಬಂದ ಕಳ್ಳನೊಬ್ಬ ತನಗೆ ಹಣ ಸಿಗಲಿಲ್ಲ ಎಂದು ಆತ ನಿರಾಶೆಯಿಂದ ತನ್ನ ಜೇಬಿನಲ್ಲಿದ್ದ 20 ರೂ. ಹಣವನ್ನು ಟೇಬಲ್‌ ಮೇಲೆ ಇಟ್ಟು ವಾಪಸ್‌ ಹೋಗಿದ್ದಾನೆ. ಈ ದೃಶ್ಯ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ.

ಈ ವಿಚಿತ್ರ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ನಡೆದಿದ್ದು, ಇಲ್ಲಿನ ಮಹೇಶ್ವರಂನಲ್ಲಿ ರಾತ್ರಿ ಹೊತ್ತಿನಲ್ಲಿ ಬೀಗ ಒಡೆದು ಹೊಟೇಲ್‌ ಒಂದಕ್ಕೆ ನುಗ್ಗಿದ್ದ ಕಳ್ಳ, ಹಣ ಸಿಗದೆ ನಿರಾಶೆಗೊಂಡು ತಾನೇ ಕ್ಯಾಶಿಯರ್‌ ಟೇಬಲ್‌ ಮೇಲೆ 20 ರೂ. ಹಣ ಇಟ್ಟು ಬರಿಗೈಲಿ ವಾಪಸ್‌ ಹೋಗಿದ್ದಾನೆ. ಈ ದೃಶ್ಯ ಹೊಟೇಲ್‌ನಲ್ಲಿ ಅಳವಡಿಸಲಾದ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಉಮಾ ಸುಧೀರ್‌ (umasudhir) ಎಂಬವರು ಈ ಕುರಿತ ಪೋಸ್ಟ್‌ ಒಂದನ್ನು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವೈರಲ್‌ ವಿಡಿಯೋದಲ್ಲಿ ಹೊಟೇಲ್‌ಗೆ ನುಗ್ಗಿದ ಕಳ್ಳನೊಬ್ಬ ಮೂಲೆ ಮೂಲೆ ಹುಡುಕಾಡುತ್ತಾ ಕಳ್ಳತನಕ್ಕೆ ಯತ್ನಿಸುವ ದೃಶ್ಯವನ್ನು ಕಾಣಬಹುದು. ಎಷ್ಟೇ ಹುಡುಕಿದ್ರೂ ಒಂದು ರೂಪಾಯಿಯೂ ಸಿಗದೇ ಇರುವಾಗ ನಿರಾಶೆಗೊಂಡ ಆತ ಸಿಸಿ ಕ್ಯಾಮೆರಾದ ಎದುರು ಬಂದು ಇದೇನ್‌ ಹೊಟೇಲ್‌ ಅಪ್ಪಾ, ಒಂದು ರೂಪಾಯಿ ಕೂಡಾ ಇಲ್ಲ ಎಂದು ತಲೆಯನ್ನು ಚಚ್ಚಿಕೊಂಡು, ನಂತ್ರ ತನ್ನ ಜೇಬಿನಲ್ಲಿದ್ದ 20 ರೂಪಾಯಿ ಹಣವನ್ನು ಟೇಬಲ್‌ ಮೇಲೆ ಇಟ್ಟು ಬರಿಗೈಲಿ ವಾಪಸ್‌ ಹೋಗಿದ್ದಾನೆ.

ಇದನ್ನೂ ಓದಿ: ಫೇಸ್​​ ಬುಕ್​​ ಲವ್​​; 2 ಮಕ್ಕಳ ತಂದೆಯಾಗಿರುವ ಪ್ರಿಯಕರನ ಭೇಟಿಗೆ ಭಾರತಕ್ಕೆ ಓಡೋಡಿ ಬಂದ ಪಾಕಿಸ್ತಾನಿ ಯುವತಿ

ಜುಲೈ 26 ರಂದು ಹಂಚಿಕೊಳ್ಳಲಾದ ಈ ವಿಡಿಯೋ 94 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼತುಂಬಾ ಒಳ್ಳೆಯ ಮನಸ್ಸಿನ ಕಳ್ಳನೀತʼ ಎಂದು ತಮಾಷೆ ಮಾಡಿದ್ದಾರೆ. ಮತ್ತೊಬ್ಬ ಬಳಕೆದಾರರು ಈ ದೃಶ್ಯ ತುಂಬಾನೇ ತಮಾಷೆಯಾಗಿದೆ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​