AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣ ಸರ್ಕಾರಿ ಬಸ್​​ನಲ್ಲಿ ಜನಿಸಿದ್ದ ಇಬ್ಬರು ಹೆಣ್ಣುಮಕ್ಕಳಿಗೆ ಭರ್ಜರಿ ಗಿಫ್ಟ್​ ನೀಡಿದ ಸಾರಿಗೆ ಸಂಸ್ಥೆ; ಜೀವನ ಪರ್ಯಂತ ಉಪಯೋಗವಾಗುವಂಥದ್ದು ಇದು !

ನಾಗರಕರ್ನೂಲು ಡೀಪೋಗೆ ಸೇರಿದ ಬಸ್​ವೊಂದರಲ್ಲಿ ತೆಲಂಗಾಣದ ಪೆದ್ದಕೋತಪಲ್ಲಿ ಗ್ರಾಮದ ಬಳಿ ನವೆಂಬರ್ 30ರಂದು ಮಹಿಳೆಯೊಬ್ಬರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಜತೆಗೆ ಆಸಿಫಾಬಾದ್ ಡಿಪೋಗೆ ಸೇರಿದ ಬಸ್​ನಲ್ಲಿ ಡಿಸೆಂಬರ್​ 7ರಂದು ಸಿದ್ದಿಪೇಟೆ ಬಳಿ ಇನ್ನೋರ್ವ ಮಹಿಳೆ ಬಸ್​ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು

ತೆಲಂಗಾಣ ಸರ್ಕಾರಿ ಬಸ್​​ನಲ್ಲಿ ಜನಿಸಿದ್ದ ಇಬ್ಬರು ಹೆಣ್ಣುಮಕ್ಕಳಿಗೆ ಭರ್ಜರಿ ಗಿಫ್ಟ್​ ನೀಡಿದ ಸಾರಿಗೆ ಸಂಸ್ಥೆ; ಜೀವನ ಪರ್ಯಂತ ಉಪಯೋಗವಾಗುವಂಥದ್ದು ಇದು !
ಟಿಎಸ್​ಆರ್​ಟಿಸಿ ಬಸ್
TV9 Web
| Edited By: |

Updated on:Dec 09, 2021 | 11:08 AM

Share

ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸಿನಲ್ಲಿ ಕೆಲವು ದಿನಗಳ ಹಿಂದೆ ಇಬ್ಬರು ಮಹಿಳೆಯರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಬಸ್ಸಿನಲ್ಲಿ ಜನಸಿದ್ದ ಇಬ್ಬರು ಹೆಣ್ಣುಮಕ್ಕಳಿಗೆ ಜೀವನ ಪರ್ಯಂತ ಉಚಿತ ಪಾಸ್​ ನೀಡುವುದಾಗಿ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಘೋಷಿಸಿದೆ. ಕೆಲವು ದಿನಗಳ ಹಿಂದೆ ಸರ್ಕಾರಿ ಬಸ್​ನಲ್ಲಿ ತೆರಳುವ ವೇಳೆ ಇಬ್ಬರು ಪ್ರತ್ಯೇಕ ಮಹಿಳೆಯರಿಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಈ ಹಿನ್ನಲೆಯಲ್ಲಿ ಬಸ್​​ನಲ್ಲಿದ್ದ ಸಹಪ್ರಯಾಣಿಕರು ಹಾಗೂ ಸಿಬ್ಬಂದಿ ನೆರವು ನೀಡಿದ್ದರಿಂದ ಸುರಕ್ಷಿತವಾಗಿ ಹೆರಿಗೆ ಮಾಡಿಸಿ ನಂತರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಬ್ಬರೂ ಮಹಿಳೆಯರಿಗೂ ಹೆಣ್ಣು ಮಗು ಜನಿಸಿತ್ತು. ಇದೀಗ ಅವರಿಗೆ ಜನ್ಮದಿನದ ಉಡುಗೊರೆಯಾಗಿ ಸರ್ಕಾರಿ ಸ್ವಾಮ್ಯದ ಸಾರಿಗೆ ಸಂಸ್ಥೆಯು ಜೀವನ ಪರ್ಯಂತ ಉಚಿತ ಪಾಸ್​ ನೀಡುತ್ತಿದೆ.

ನಾಗರಕರ್ನೂಲು ಡೀಪೋಗೆ ಸೇರಿದ ಬಸ್​ವೊಂದರಲ್ಲಿ ತೆಲಂಗಾಣದ ಪೆದ್ದಕೋತಪಲ್ಲಿ ಗ್ರಾಮದ ಬಳಿ ನವೆಂಬರ್ 30ರಂದು ಮಹಿಳೆಯೊಬ್ಬರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಜತೆಗೆ ಆಸಿಫಾಬಾದ್ ಡಿಪೋಗೆ ಸೇರಿದ ಬಸ್​ನಲ್ಲಿ ಡಿಸೆಂಬರ್​ 7ರಂದು ಸಿದ್ದಿಪೇಟೆ ಬಳಿ ಇನ್ನೋರ್ವ ಮಹಿಳೆ ಬಸ್​ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು.

ಬಸ್​ನಲ್ಲಿ ಅನಿರೀಕ್ಷಿತವಾಗಿ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಬಸ್​ ಸಿಬ್ಬಂದಿ ಹಾಗೂ ಸಹಪ್ರಯಾಣಿಕರು ಮಹಿಳೆಯರಿಗೆ ಸುರಕ್ಷಿತವಾಗಿ ಹೆರಿಗೆ ಮಾಡಿಸಿದ್ದರು. ನಂತರ 108 ಆಂಬ್ಯಲೆನ್ಸ್​ ಮೂಲಕ ಹತ್ತಿರದ ಆಸ್ಪತ್ರೆಗೆ ತಾಯಿ ಮತ್ತು ಮಗುವನ್ನು ಕಳುಹಿಸಿದ್ದರು.

ಸಾರಿಗೆ ಸಂಸ್ಥೆಯ ಸಿಬ್ಬಂದಿ ಹಾಗೂ ಸಹಪ್ರಯಾಣಿಕರ ಕಾರ್ಯವನ್ನು ಶ್ಲಾಘಿಸಿದ ಟಿಎಸ್​ಆರ್​ಟಿಸಿ ಉಪಾಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ವಿಸಿ ಸಜ್ಜನರ್ ಇಬ್ಬರೂ ಹೆಣ್ಣು ಮಕ್ಕಳಿಗೆ ಜೀವಮಾನದ ಉಚಿತ ಪಾಸ್​ ನೀಡಲು ಸಂತಸವಾಗುತ್ತಿದೆ ಎಂದಿದ್ದಾರೆ.

ಇದನ್ನೂ ಓದಿ:

ಬಿಪಿನ್​ ರಾವತ್ ನಿಧನದಿಂದ ತೆರವಾದ ಸಿಡಿಎಸ್​ ಹುದ್ದೆ ಮುಂದೆ ಯಾರಿಗೆ?-ಬಲವಾಗಿ ಕೇಳಿಬರುತ್ತಿರುವುದು ಇವರ ಹೆಸರು

ಕೊಳಕು ಮಂಡಲ ಹಾವಿನ ಆರ್ಭಟದೆದುರು ತನ್ನ ಮರಿಗಳ ರಕ್ಷಿಸಲು ಹೋಗಿ ಪ್ರಾಣ ಬಿಟ್ಟ ತಾಯಿ ನಾಯಿ

Published On - 10:55 am, Thu, 9 December 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?