AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣ ಸರ್ಕಾರಿ ಬಸ್​​ನಲ್ಲಿ ಜನಿಸಿದ್ದ ಇಬ್ಬರು ಹೆಣ್ಣುಮಕ್ಕಳಿಗೆ ಭರ್ಜರಿ ಗಿಫ್ಟ್​ ನೀಡಿದ ಸಾರಿಗೆ ಸಂಸ್ಥೆ; ಜೀವನ ಪರ್ಯಂತ ಉಪಯೋಗವಾಗುವಂಥದ್ದು ಇದು !

ನಾಗರಕರ್ನೂಲು ಡೀಪೋಗೆ ಸೇರಿದ ಬಸ್​ವೊಂದರಲ್ಲಿ ತೆಲಂಗಾಣದ ಪೆದ್ದಕೋತಪಲ್ಲಿ ಗ್ರಾಮದ ಬಳಿ ನವೆಂಬರ್ 30ರಂದು ಮಹಿಳೆಯೊಬ್ಬರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಜತೆಗೆ ಆಸಿಫಾಬಾದ್ ಡಿಪೋಗೆ ಸೇರಿದ ಬಸ್​ನಲ್ಲಿ ಡಿಸೆಂಬರ್​ 7ರಂದು ಸಿದ್ದಿಪೇಟೆ ಬಳಿ ಇನ್ನೋರ್ವ ಮಹಿಳೆ ಬಸ್​ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು

ತೆಲಂಗಾಣ ಸರ್ಕಾರಿ ಬಸ್​​ನಲ್ಲಿ ಜನಿಸಿದ್ದ ಇಬ್ಬರು ಹೆಣ್ಣುಮಕ್ಕಳಿಗೆ ಭರ್ಜರಿ ಗಿಫ್ಟ್​ ನೀಡಿದ ಸಾರಿಗೆ ಸಂಸ್ಥೆ; ಜೀವನ ಪರ್ಯಂತ ಉಪಯೋಗವಾಗುವಂಥದ್ದು ಇದು !
ಟಿಎಸ್​ಆರ್​ಟಿಸಿ ಬಸ್
TV9 Web
| Edited By: |

Updated on:Dec 09, 2021 | 11:08 AM

Share

ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸಿನಲ್ಲಿ ಕೆಲವು ದಿನಗಳ ಹಿಂದೆ ಇಬ್ಬರು ಮಹಿಳೆಯರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಬಸ್ಸಿನಲ್ಲಿ ಜನಸಿದ್ದ ಇಬ್ಬರು ಹೆಣ್ಣುಮಕ್ಕಳಿಗೆ ಜೀವನ ಪರ್ಯಂತ ಉಚಿತ ಪಾಸ್​ ನೀಡುವುದಾಗಿ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಘೋಷಿಸಿದೆ. ಕೆಲವು ದಿನಗಳ ಹಿಂದೆ ಸರ್ಕಾರಿ ಬಸ್​ನಲ್ಲಿ ತೆರಳುವ ವೇಳೆ ಇಬ್ಬರು ಪ್ರತ್ಯೇಕ ಮಹಿಳೆಯರಿಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಈ ಹಿನ್ನಲೆಯಲ್ಲಿ ಬಸ್​​ನಲ್ಲಿದ್ದ ಸಹಪ್ರಯಾಣಿಕರು ಹಾಗೂ ಸಿಬ್ಬಂದಿ ನೆರವು ನೀಡಿದ್ದರಿಂದ ಸುರಕ್ಷಿತವಾಗಿ ಹೆರಿಗೆ ಮಾಡಿಸಿ ನಂತರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಬ್ಬರೂ ಮಹಿಳೆಯರಿಗೂ ಹೆಣ್ಣು ಮಗು ಜನಿಸಿತ್ತು. ಇದೀಗ ಅವರಿಗೆ ಜನ್ಮದಿನದ ಉಡುಗೊರೆಯಾಗಿ ಸರ್ಕಾರಿ ಸ್ವಾಮ್ಯದ ಸಾರಿಗೆ ಸಂಸ್ಥೆಯು ಜೀವನ ಪರ್ಯಂತ ಉಚಿತ ಪಾಸ್​ ನೀಡುತ್ತಿದೆ.

ನಾಗರಕರ್ನೂಲು ಡೀಪೋಗೆ ಸೇರಿದ ಬಸ್​ವೊಂದರಲ್ಲಿ ತೆಲಂಗಾಣದ ಪೆದ್ದಕೋತಪಲ್ಲಿ ಗ್ರಾಮದ ಬಳಿ ನವೆಂಬರ್ 30ರಂದು ಮಹಿಳೆಯೊಬ್ಬರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಜತೆಗೆ ಆಸಿಫಾಬಾದ್ ಡಿಪೋಗೆ ಸೇರಿದ ಬಸ್​ನಲ್ಲಿ ಡಿಸೆಂಬರ್​ 7ರಂದು ಸಿದ್ದಿಪೇಟೆ ಬಳಿ ಇನ್ನೋರ್ವ ಮಹಿಳೆ ಬಸ್​ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು.

ಬಸ್​ನಲ್ಲಿ ಅನಿರೀಕ್ಷಿತವಾಗಿ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಬಸ್​ ಸಿಬ್ಬಂದಿ ಹಾಗೂ ಸಹಪ್ರಯಾಣಿಕರು ಮಹಿಳೆಯರಿಗೆ ಸುರಕ್ಷಿತವಾಗಿ ಹೆರಿಗೆ ಮಾಡಿಸಿದ್ದರು. ನಂತರ 108 ಆಂಬ್ಯಲೆನ್ಸ್​ ಮೂಲಕ ಹತ್ತಿರದ ಆಸ್ಪತ್ರೆಗೆ ತಾಯಿ ಮತ್ತು ಮಗುವನ್ನು ಕಳುಹಿಸಿದ್ದರು.

ಸಾರಿಗೆ ಸಂಸ್ಥೆಯ ಸಿಬ್ಬಂದಿ ಹಾಗೂ ಸಹಪ್ರಯಾಣಿಕರ ಕಾರ್ಯವನ್ನು ಶ್ಲಾಘಿಸಿದ ಟಿಎಸ್​ಆರ್​ಟಿಸಿ ಉಪಾಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ವಿಸಿ ಸಜ್ಜನರ್ ಇಬ್ಬರೂ ಹೆಣ್ಣು ಮಕ್ಕಳಿಗೆ ಜೀವಮಾನದ ಉಚಿತ ಪಾಸ್​ ನೀಡಲು ಸಂತಸವಾಗುತ್ತಿದೆ ಎಂದಿದ್ದಾರೆ.

ಇದನ್ನೂ ಓದಿ:

ಬಿಪಿನ್​ ರಾವತ್ ನಿಧನದಿಂದ ತೆರವಾದ ಸಿಡಿಎಸ್​ ಹುದ್ದೆ ಮುಂದೆ ಯಾರಿಗೆ?-ಬಲವಾಗಿ ಕೇಳಿಬರುತ್ತಿರುವುದು ಇವರ ಹೆಸರು

ಕೊಳಕು ಮಂಡಲ ಹಾವಿನ ಆರ್ಭಟದೆದುರು ತನ್ನ ಮರಿಗಳ ರಕ್ಷಿಸಲು ಹೋಗಿ ಪ್ರಾಣ ಬಿಟ್ಟ ತಾಯಿ ನಾಯಿ

Published On - 10:55 am, Thu, 9 December 21

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ