ತೆಲಂಗಾಣ ಸರ್ಕಾರಿ ಬಸ್​​ನಲ್ಲಿ ಜನಿಸಿದ್ದ ಇಬ್ಬರು ಹೆಣ್ಣುಮಕ್ಕಳಿಗೆ ಭರ್ಜರಿ ಗಿಫ್ಟ್​ ನೀಡಿದ ಸಾರಿಗೆ ಸಂಸ್ಥೆ; ಜೀವನ ಪರ್ಯಂತ ಉಪಯೋಗವಾಗುವಂಥದ್ದು ಇದು !

ನಾಗರಕರ್ನೂಲು ಡೀಪೋಗೆ ಸೇರಿದ ಬಸ್​ವೊಂದರಲ್ಲಿ ತೆಲಂಗಾಣದ ಪೆದ್ದಕೋತಪಲ್ಲಿ ಗ್ರಾಮದ ಬಳಿ ನವೆಂಬರ್ 30ರಂದು ಮಹಿಳೆಯೊಬ್ಬರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಜತೆಗೆ ಆಸಿಫಾಬಾದ್ ಡಿಪೋಗೆ ಸೇರಿದ ಬಸ್​ನಲ್ಲಿ ಡಿಸೆಂಬರ್​ 7ರಂದು ಸಿದ್ದಿಪೇಟೆ ಬಳಿ ಇನ್ನೋರ್ವ ಮಹಿಳೆ ಬಸ್​ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು

ತೆಲಂಗಾಣ ಸರ್ಕಾರಿ ಬಸ್​​ನಲ್ಲಿ ಜನಿಸಿದ್ದ ಇಬ್ಬರು ಹೆಣ್ಣುಮಕ್ಕಳಿಗೆ ಭರ್ಜರಿ ಗಿಫ್ಟ್​ ನೀಡಿದ ಸಾರಿಗೆ ಸಂಸ್ಥೆ; ಜೀವನ ಪರ್ಯಂತ ಉಪಯೋಗವಾಗುವಂಥದ್ದು ಇದು !
ಟಿಎಸ್​ಆರ್​ಟಿಸಿ ಬಸ್
Follow us
| Updated By: Pavitra Bhat Jigalemane

Updated on:Dec 09, 2021 | 11:08 AM

ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸಿನಲ್ಲಿ ಕೆಲವು ದಿನಗಳ ಹಿಂದೆ ಇಬ್ಬರು ಮಹಿಳೆಯರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಬಸ್ಸಿನಲ್ಲಿ ಜನಸಿದ್ದ ಇಬ್ಬರು ಹೆಣ್ಣುಮಕ್ಕಳಿಗೆ ಜೀವನ ಪರ್ಯಂತ ಉಚಿತ ಪಾಸ್​ ನೀಡುವುದಾಗಿ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಘೋಷಿಸಿದೆ. ಕೆಲವು ದಿನಗಳ ಹಿಂದೆ ಸರ್ಕಾರಿ ಬಸ್​ನಲ್ಲಿ ತೆರಳುವ ವೇಳೆ ಇಬ್ಬರು ಪ್ರತ್ಯೇಕ ಮಹಿಳೆಯರಿಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಈ ಹಿನ್ನಲೆಯಲ್ಲಿ ಬಸ್​​ನಲ್ಲಿದ್ದ ಸಹಪ್ರಯಾಣಿಕರು ಹಾಗೂ ಸಿಬ್ಬಂದಿ ನೆರವು ನೀಡಿದ್ದರಿಂದ ಸುರಕ್ಷಿತವಾಗಿ ಹೆರಿಗೆ ಮಾಡಿಸಿ ನಂತರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಬ್ಬರೂ ಮಹಿಳೆಯರಿಗೂ ಹೆಣ್ಣು ಮಗು ಜನಿಸಿತ್ತು. ಇದೀಗ ಅವರಿಗೆ ಜನ್ಮದಿನದ ಉಡುಗೊರೆಯಾಗಿ ಸರ್ಕಾರಿ ಸ್ವಾಮ್ಯದ ಸಾರಿಗೆ ಸಂಸ್ಥೆಯು ಜೀವನ ಪರ್ಯಂತ ಉಚಿತ ಪಾಸ್​ ನೀಡುತ್ತಿದೆ.

ನಾಗರಕರ್ನೂಲು ಡೀಪೋಗೆ ಸೇರಿದ ಬಸ್​ವೊಂದರಲ್ಲಿ ತೆಲಂಗಾಣದ ಪೆದ್ದಕೋತಪಲ್ಲಿ ಗ್ರಾಮದ ಬಳಿ ನವೆಂಬರ್ 30ರಂದು ಮಹಿಳೆಯೊಬ್ಬರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಜತೆಗೆ ಆಸಿಫಾಬಾದ್ ಡಿಪೋಗೆ ಸೇರಿದ ಬಸ್​ನಲ್ಲಿ ಡಿಸೆಂಬರ್​ 7ರಂದು ಸಿದ್ದಿಪೇಟೆ ಬಳಿ ಇನ್ನೋರ್ವ ಮಹಿಳೆ ಬಸ್​ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು.

ಬಸ್​ನಲ್ಲಿ ಅನಿರೀಕ್ಷಿತವಾಗಿ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಬಸ್​ ಸಿಬ್ಬಂದಿ ಹಾಗೂ ಸಹಪ್ರಯಾಣಿಕರು ಮಹಿಳೆಯರಿಗೆ ಸುರಕ್ಷಿತವಾಗಿ ಹೆರಿಗೆ ಮಾಡಿಸಿದ್ದರು. ನಂತರ 108 ಆಂಬ್ಯಲೆನ್ಸ್​ ಮೂಲಕ ಹತ್ತಿರದ ಆಸ್ಪತ್ರೆಗೆ ತಾಯಿ ಮತ್ತು ಮಗುವನ್ನು ಕಳುಹಿಸಿದ್ದರು.

ಸಾರಿಗೆ ಸಂಸ್ಥೆಯ ಸಿಬ್ಬಂದಿ ಹಾಗೂ ಸಹಪ್ರಯಾಣಿಕರ ಕಾರ್ಯವನ್ನು ಶ್ಲಾಘಿಸಿದ ಟಿಎಸ್​ಆರ್​ಟಿಸಿ ಉಪಾಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ವಿಸಿ ಸಜ್ಜನರ್ ಇಬ್ಬರೂ ಹೆಣ್ಣು ಮಕ್ಕಳಿಗೆ ಜೀವಮಾನದ ಉಚಿತ ಪಾಸ್​ ನೀಡಲು ಸಂತಸವಾಗುತ್ತಿದೆ ಎಂದಿದ್ದಾರೆ.

ಇದನ್ನೂ ಓದಿ:

ಬಿಪಿನ್​ ರಾವತ್ ನಿಧನದಿಂದ ತೆರವಾದ ಸಿಡಿಎಸ್​ ಹುದ್ದೆ ಮುಂದೆ ಯಾರಿಗೆ?-ಬಲವಾಗಿ ಕೇಳಿಬರುತ್ತಿರುವುದು ಇವರ ಹೆಸರು

ಕೊಳಕು ಮಂಡಲ ಹಾವಿನ ಆರ್ಭಟದೆದುರು ತನ್ನ ಮರಿಗಳ ರಕ್ಷಿಸಲು ಹೋಗಿ ಪ್ರಾಣ ಬಿಟ್ಟ ತಾಯಿ ನಾಯಿ

Published On - 10:55 am, Thu, 9 December 21

ಮನೆಯೊಂದರ ಬೆಡ್​ರೂಂನಲ್ಲಿ 2 ಹಾವುಗಳ ಜಗಳ; ಬೆಚ್ಚಿ ಬೀಳಿಸುವ ವಿಡಿಯೋ ವೈರಲ್
ಮನೆಯೊಂದರ ಬೆಡ್​ರೂಂನಲ್ಲಿ 2 ಹಾವುಗಳ ಜಗಳ; ಬೆಚ್ಚಿ ಬೀಳಿಸುವ ವಿಡಿಯೋ ವೈರಲ್
ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್
ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್