AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಯುಟ್ಯೂಬ್‌ ವಿಡಿಯೋಗಾಗಿ ನವಿಲು ಮಾಂಸದ ಕರಿ ಮಾಡಿದ್ದ ಯುಟ್ಯೂಬರ್‌ ಇದೀಗ ಪೊಲೀಸರ ಅತಿಥಿ

ರಾಷ್ಟ್ರ ಪಕ್ಷಿ, ಪ್ರಾಣಿಗಳನ್ನು ನಾವೆಲ್ಲರೂ ರಕ್ಷಣೆ ಮಾಡಬೇಕೆಂದು ಕಾನೂನು ಹೇಳುತ್ತದೆ. ಅಲ್ಲದೆ ರಾಷ್ಟ್ರ ಪಕ್ಷಿಯಾದ ನವಿಲನ್ನು ಕೊಲ್ಲುವುದು ಅಪರಾಧವಾಗಿದೆ. ಆದ್ರೆ ಇಲ್ಲೊಬ್ಬ ಯುಟ್ಯೂಬರ್‌ ಈ ನವಿಲನ್ನೇ ಕೊಂದು, ಅದರ ಮಾಂಸದ ಸಾರಿನ ರೆಸಿಪಿ ವಿಡಿಯೋವನ್ನು ತನ್ನ ಯುಟ್ಯೂಬ್‌ ಚಾನೆಲ್‌ ಅಲ್ಲಿ ಹಂಚಿಕೊಂಡಿದ್ದಾನೆ. ಈ ವಿಡಿಯೋ ವೈರಲ್‌ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಪೊಲೀಸರು ಈ ಭೂಪನನ್ನು ಬಂಧಿಸಿದ್ದಾರೆ.

Viral: ಯುಟ್ಯೂಬ್‌ ವಿಡಿಯೋಗಾಗಿ ನವಿಲು ಮಾಂಸದ ಕರಿ ಮಾಡಿದ್ದ ಯುಟ್ಯೂಬರ್‌ ಇದೀಗ ಪೊಲೀಸರ ಅತಿಥಿ
ಮಾಲಾಶ್ರೀ ಅಂಚನ್​
| Edited By: |

Updated on: Aug 13, 2024 | 6:44 PM

Share

ನಮ್ಮ ರಾಷ್ಟ್ರ ಪಕ್ಷಿಯಾದ ನವಿಲನ್ನು ಕೊಲ್ಲುವುದು ಕಾನೂನಿನ ಪ್ರಕಾರ ಅಪರಾಧವಾಗಿದೆ. ಹೀಗಿದ್ರೂ ಕೂಡಾ ಕೆಲವೊಬ್ಬರು ಮಾಂಸಕ್ಕಾಗಿ ನವಿಲುಗಳನ್ನು ಸಾಯಿಸುತ್ತಾರೆ. ಮನುಷ್ಯನಿಗೆ ತಿನ್ನಲು ಕೋಳಿ, ಕುರಿ, ಮೇಕೆ ಮಾಂಸಗಳನ್ನು ಅನುಮತಿಸಲಾಗಿದೆ. ಆದರೆ ರಾಷ್ಟ್ರ ಪಕ್ಷಿಯಾದ ನವಿಲನ್ನು ಯಾವುದೇ ಕಾರಣಕ್ಕೂ ಸಾಯಿಸಲು ಅನುಮತಿಯಿಲ್ಲ, ಬದಲಾಗಿ ರಾಷ್ಟ್ರ ಪಕ್ಷಿ, ಪ್ರಾಣಿಗಳ ರಕ್ಷಣೆ ಮಾಡಬೇಕೆಂದು ಕಾನೂನು ಹೇಳುತ್ತದೆ. ಕಾನೂನಿನ ಕಿಂಚಿತ್ತೂ ಭಯವಿಲ್ಲದೆ ಇಂದಿಗೂ ಕೂಡಾ ನಮಿಲುಗಳನ್ನು ಮಾಂಸಕ್ಕಾಗಿ ಮಾರಣಹೋಮ ಮಾಡಲಾಗುತ್ತಿದೆ. ಹೀಗೆ ನವಿಲುಗಳನ್ನು ಕೊಂದವರು ಜೈಲು ಸೇರಿರುವ ಉದಾಹರಣೆಯೂ ಇದೆ. ಇದೀಗ ಇಲ್ಲೊಂದು ಇಂತಹದ್ದೇ ಘಟನೆ ನಡೆದಿದ್ದು, ಯುಟ್ಯೂಬರ್‌ ಒಬ್ಬ ನವಿಲಿನ ಮಾಂಸದ ಸಾರಿನ ರೆಸಿಪಿಯನ್ನು ಮಾಡಿ ಯುಟ್ಯೂಬ್‌ ಚಾನೆಲ್‌ ಅಲ್ಲಿ ಹಂಚಿಕೊಂಡಿದ್ದಾನೆ. ಈ ವಿಡಿಯೋ ವೈರಲ್‌ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಪೊಲೀಸರು ಈ ಭೂಪನನ್ನು ಬಂಧಿಸಿದ್ದಾರೆ.

ಈ ಆಘಾತಕಾರಿ ಘಟನೆ ತೆಲಂಗಾಣದ ಸಿರ್ಸಿಲ್ಲಾ ಜಿಲ್ಲೆಯಲ್ಲಿ ನಡೆದಿದ್ದು, ʼನವಿಲು ಕರಿ ರೆಸಿಪಿʼ ಕುರಿತು ವಿಡಿಯೋವನ್ನು ಯುಟ್ಯೂಬ್‌ ಚಾನೆಲ್‌ ಅಲ್ಲಿ ಹಂಚಿಕೊಂಡ ಆರೋಪದ ಮೇಲೆ ಯುಟ್ಯೂಬರ್‌ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಸಿರ್ಸಿಲ್ಲಾದ ಕೊಡಂ ಪ್ರಣಯ್‌ ಕುಮಾರ್‌ ಎಂಬಾತ ನವಿಲು ಕರಿ ರೆಸಿಪಿಯ ವಿಡಿಯೋವನ್ನು ತನ್ನ ಯುಟ್ಯೂಬ್‌ ಚಾನೆಲ್‌ ಅಲ್ಲಿ ಹಂಚಿಕೊಂಡಿದ್ದನು.

ಇದನ್ನೂ ಓದಿ: ವರದಕ್ಷಿಣೆಗಾಗಿ ಹೆಂಡತಿಯ ಮರ್ಮಾಂಗದೊಳಗೆ ಲಟ್ಟಣಿಗೆ ತುರುಕಿ ಹಿಂಸಿಸಿ ಕೊಂದ ಗಂಡ

ವಿಡಿಯೋ ಭಾರೀ ವೈರಲ್‌ ಆಗಿತ್ತು. ಇದಾದ ಬಳಿಕ ಈ ವಿಷಯ ಪೊಲೀಸ್‌ ಠಾಣೆಯ ಮೆಟ್ಟಿಲೇರಿದ್ದು, ಯುಟ್ಯೂಬರ್‌ ಪ್ರಣಯ್‌ ಕುಮಾರ್‌ ವಿರುದ್ಧ ವನ್ಯ ಜೀವಿ ಸಂರಕ್ಷಣಾ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅರಣ್ಯಾಧಿಕಾರಿಗಳು ಆಗಸ್ಟ್‌ 11 ಭಾನುವಾರದಂದು ತಂಗಲ್ಲಪಲ್ಲಿಯಲ್ಲಿರುವ ಈತನ ನಿವಾಸಕ್ಕೆ ದಾಳಿ ನಡೆಸಿ, ಬಂಧಿಸಿದ್ದಾರೆ. ಬಳಿಕ ನವಿಲಿನ ಸಾರನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ಇದು ನಿಜವಾವಾಗಿಯೂ ನವಿಲು ಮಾಂಸವಾಗಿದ್ದರೆ ಪ್ರಣಯ್‌ ಕುಮಾರ್‌ ಗಂಭೀರ ಕಾನೂನು ಪರಿಣಾಮವನ್ನು ಎದುರಿಸಬಹುದು.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಮರ್ಷಿಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಕಾಫಿ ಬೆಲೆ ಗಗನಕ್ಕೇರುತ್ತಾ?
ಕಮರ್ಷಿಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಕಾಫಿ ಬೆಲೆ ಗಗನಕ್ಕೇರುತ್ತಾ?
ಅಸ್ಸಾಂನಲ್ಲಿ ಬಿಜೆಪಿ ಬರುತ್ತೆ ಎಂದು ನಾವೂ ಹೇಳ್ತೀವಿ: ಪರಮೇಶ್ವರ!
ಅಸ್ಸಾಂನಲ್ಲಿ ಬಿಜೆಪಿ ಬರುತ್ತೆ ಎಂದು ನಾವೂ ಹೇಳ್ತೀವಿ: ಪರಮೇಶ್ವರ!
ಜ್ಯುವೆಲರಿಗೆ ಕನ್ನ: ಗೋಡೆ ಕೊರೆದು 70 ಕೆಜಿ ಬೆಳ್ಳಿ ಕಳ್ಳತನ
ಜ್ಯುವೆಲರಿಗೆ ಕನ್ನ: ಗೋಡೆ ಕೊರೆದು 70 ಕೆಜಿ ಬೆಳ್ಳಿ ಕಳ್ಳತನ
ಕುಡಿದ ನಶೆಯಲ್ಲಿ ಜನರ ಮೇಲೆ ಮಚ್ಚು, ಲಾಂಗು ಬೀಸಿದ ಪುಂಡರು
ಕುಡಿದ ನಶೆಯಲ್ಲಿ ಜನರ ಮೇಲೆ ಮಚ್ಚು, ಲಾಂಗು ಬೀಸಿದ ಪುಂಡರು
‘ಕೆಡಿ’ ಚಿತ್ರದಲ್ಲಿಲ್ಲ ‘ಸರ್ಸೆ ಸರ್ಸೆ’ ಹಾಡು; ಅಪ್​​ಡೇಟ್​ ಕೊಟ್ಟ ಪ್ರೇಮ್
‘ಕೆಡಿ’ ಚಿತ್ರದಲ್ಲಿಲ್ಲ ‘ಸರ್ಸೆ ಸರ್ಸೆ’ ಹಾಡು; ಅಪ್​​ಡೇಟ್​ ಕೊಟ್ಟ ಪ್ರೇಮ್
ಬುರ್ಖಾ ಧರಿಸಿದ್ದ ಮಹಿಳೆಯ ಮೈಮುಟ್ಟಿ ಪರಾರಿಯಾಗಿದ್ದವನಿಗೆ ಗುಂಡೇಟು
ಬುರ್ಖಾ ಧರಿಸಿದ್ದ ಮಹಿಳೆಯ ಮೈಮುಟ್ಟಿ ಪರಾರಿಯಾಗಿದ್ದವನಿಗೆ ಗುಂಡೇಟು
ವಾಣಿಜ್ಯ ಸಿಲಿಂಡರ್ ದರ ಏರಿಕೆ: ಹೋಟೆಲ್​ನಲ್ಲಿ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ ಸಿಲಿಂಡರ್ ದರ ಏರಿಕೆ: ಹೋಟೆಲ್​ನಲ್ಲಿ ಊಟ-ತಿಂಡಿ ದರ ಹೆಚ್ಚಾಗುತ್ತಾ?
ಬೆಂಗಳೂರಿನಲ್ಲಿ ಆಟೋ ಚಾಲಕನಿಗೆ ಥಳಿಸಿದ ಪೊಲೀಸರು
ಬೆಂಗಳೂರಿನಲ್ಲಿ ಆಟೋ ಚಾಲಕನಿಗೆ ಥಳಿಸಿದ ಪೊಲೀಸರು
ನಿಮಗೆ ಲವ್ ಮ್ಯಾರೇಜ್ ಆಗುತ್ತೋ, ಅರೆಂಜ್ ಮ್ಯಾರೇಜ್ ಆಗುತ್ತೋ?
ನಿಮಗೆ ಲವ್ ಮ್ಯಾರೇಜ್ ಆಗುತ್ತೋ, ಅರೆಂಜ್ ಮ್ಯಾರೇಜ್ ಆಗುತ್ತೋ?
ಇಂದು ಈ ರಾಶಿಯವರ ವ್ಯಾಪಾರ, ವ್ಯವಹಾರಗಳು ಚೆನ್ನಾಗಿರುತ್ತೆ!
ಇಂದು ಈ ರಾಶಿಯವರ ವ್ಯಾಪಾರ, ವ್ಯವಹಾರಗಳು ಚೆನ್ನಾಗಿರುತ್ತೆ!