Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕಿತ್ಸೆಗೆಂದು ಬರುವ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ ವೈದ್ಯನ ಬಂಧನ

ಅಸಭ್ಯ ವರ್ತನೆ ಹಾಗೂ ಲೈಂಗಿಕ ಕಿರುಕುಳ ಆಧಾರ ಮೇಲೆ ದೂರು ದಾಖಲಾಗುತ್ತಿದ್ದಂತೆ ಡಾ. ಅಹ್ಮದ್ ತಲೆ ಮರೆಸಿಕೊಂಡಿದ್ದ. ಕೊನೆಗೂ ಮಹಬೂಬ್‌ನಗರ ಜಿಲ್ಲೆಯ ಉದ್ದಾನಪುರದಲ್ಲಿ ಶುಕ್ರವಾರ(ಮಾರ್ಚ್​​​ 29) ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.

ಚಿಕಿತ್ಸೆಗೆಂದು ಬರುವ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ ವೈದ್ಯನ ಬಂಧನ
Doctor Arrested
Follow us
ಅಕ್ಷತಾ ವರ್ಕಾಡಿ
|

Updated on: Mar 30, 2024 | 1:04 PM

ತೆಲಂಗಾಣ: ಚಿಕಿತ್ಸೆಗೆಂದು ಬರುವ ಮಹಿಳಾ ರೋಗಿಗಳ ನಗ್ನ ಫೋಟೋಗಳನ್ನು ತೆಗೆದು, ಅವರೊಂದಿಗೆ ಅಸಭ್ಯವಾಗಿ ವರ್ತಿಸುವ ಆರೋಪದ ಮೇಲೆ ವಿಕಾರಾಬಾದ್ ಜಿಲ್ಲೆಯ ತಾಂಡೂರ್ ಪಟ್ಟಣದ ಡಾ. ಅಹ್ಮದ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ತಾಂಡೂರಿನ ಅಹ್ಮದ್ ಆರ್‌ಎಂಪಿ ವೈದ್ಯರಾಗಿ ಸ್ಥಳೀಯ ಕ್ಲಿನಿಕ್ ನಡೆಸುತ್ತಿದ್ದು, ಅಲ್ಲಿಗೆ ಬರುವ ಮಹಿಳೆಯರೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದ. ಇತ್ತೀಚೆಗಷ್ಟೇ ಮಹಿಳೆಯೊಬ್ಬರು ಚಿಕಿತ್ಸೆಗೆಂದು ಆತನ ಬಳಿಗೆ ಹೋದಾಗ ಆಕೆಯನ್ನು ಪರೀಕ್ಷೆಯ ಹೆಸರಿನಲ್ಲಿ ಬೆತ್ತಲೆಯಾಗಿಟ್ಟು ವಿಡಿಯೋ ಮಾಡಿದ್ದಾನೆ. ಇದಲ್ಲದೇ ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಾನೆ. ಇದರಿಂದ ಸಂತ್ರಸ್ತೆ ತೀವ್ರ ನೊಂದಿದ್ದು, ಮಾರ್ಚ್​​​ 11ರಂದು ಪೊಲೀಸರಿಗೆ ದೂರು ನೀಡಿದ್ದಾರೆ.

ಅಸಭ್ಯ ವರ್ತನೆ ಹಾಗೂ ಲೈಂಗಿಕ ಕಿರುಕುಳ ಆಧಾರ ಮೇಲೆ ದೂರು ದಾಖಲಾಗುತ್ತಿದ್ದಂತೆ ಡಾ. ಅಹ್ಮದ್ ತಲೆ ಮರೆಸಿಕೊಂಡಿದ್ದ. ಕೊನೆಗೂ ಮಹಬೂಬ್‌ನಗರ ಜಿಲ್ಲೆಯ ಉದ್ದಾನಪುರದಲ್ಲಿ ಶುಕ್ರವಾರ(ಮಾರ್ಚ್​​​ 29) ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ತನಿಖೆ ನಡೆಸಿದಾಗ, ಆತನನ್ನು ಆರ್‌ಎಂಪಿ ಎಂದು ಗುರುತಿಸುವ ಯಾವುದೇ ಗುರುತಿನ ದಾಖಲೆಗಳಿಲ್ಲ. ಇಷ್ಟು ದಿನಗಳ ವರೆಗೆ ಸ್ಥಳೀಯರನ್ನು ಮೋಸಗೊಳಿಸಿದ್ದ ಎಂದು ತಿಳಿದುಬಂದಿದೆ.

​​​ಇದನ್ನೂ ಓದಿ: ಯುವತಿಯ ಕಿಡ್ನಿ ವೈಫಲ್ಯಕ್ಕೆ ಕಾರಣವಾದ ಹೇರ್ ಸ್ಟ್ರೈಟ್ನಿಂಗ್ ಟ್ರೀಟ್​​ಮೆಂಟ್​​​​​​

ಇದೀಗಾ ಈ ನಕಲಿ ವೈದ್ಯನ ವಿರುದ್ಧ ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಕಾಯ್ದೆ, ವಂಚನೆ ಪ್ರಕರಣಗಳನ್ನು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಈ ಘಟನೆ ಸ್ಥಳೀಯವಾಗಿ ಚರ್ಚೆಗೆ ಗ್ರಾಸವಾಗಿದೆ. ಬೇರೆ ಯಾರಾದರೂ ಸಂತ್ರಸ್ತರಾಗಿದ್ದರೆ ಅವರ ವಿವರ ನೀಡಿ.ವಿವರಗಳನ್ನು ಗೌಪ್ಯವಾಗಿಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?